32 C
Mumbai
March 7, 2026
Mumbai News Kannada
ಪ್ರಕಟಣೆ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) : ಫೆ. 8ರಂದು ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ





ಉಡುಪಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ, ವಿಶ್ವಕರ್ಮ ಸಹಕಾರಿ ಬ್ಯಾಂಕ್ ಉಡುಪಿ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ವಿಷ್ಣುಮೂರ್ತಿ ಫ್ರೆಂಡ್ಸ್ (ರಿ) ದೊಡ್ಡನಗುಡ್ಡೆ ಉಡುಪಿ, ವಿಷ್ಣುಮೂರ್ತಿ ಮಹಿಳಾ ಘಟಕ ದೊಡ್ಡನಗುಡ್ಡೆ ಇವರ ಮುಂದಾಳತ್ವದಲ್ಲಿ *ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ ಫೆಬ್ರವರಿ 08 ಬೆಳಗ್ಗೆ 10.30 ರಿಂದ ಮಧ್ಯಾನ್ನ 12.30 ರವರೆಗೆ ನಡೆಯಲಿರುವುದು.
ಮಾನವನ ನಿಜವಾದ ಜ್ಞಾನದ ಬಾಗಿಲು ಎಂದರೆ ಅದು ಕಣ್ಣು. ಅದರ ಸಂರಕ್ಷಣೆ ಅತಿ ಮುಖ್ಯ. ಇಂದಿನ ಆಧುನಿಕ ದಿನಮಾನದಲ್ಲಿ ಸಾಮಾಜಿಕ ಜಾಲತಾಣಗಳು, ಹಾಗೆ ಅತಿಯಾದ ಮೊಬೈಲ್ ವೀಕ್ಷಣೆಯಿಂದ ಕಣ್ಣಿಗೆ ಅಪಾರವಾದ ತೊಂದರೆ ಉಂಟಾಗಿದೆ. ಇಂತಹ ಹಲವರು ಕಣ್ಣಿನ ದೋಷಗಳ ನಿವಾರಣೆಗೆ ಈ ಪುರಾತನ ಆಯುರ್ವೇದ ಸಿದ್ಧ ಕಣ್ಣಿನ ಹನಿಯ ಕಾರ್ಯಕ್ರಮವು ಅತ್ಯಂತ ಪರಿಣಾಮಕಾರಿ. ಕಣ್ಣಿಗೆ ಹನಿ ಹಾಕುವುದರಿಂದ ಪ್ರಯೋಜನಗಳು:

  1. ಕಣ್ಣಿನಲ್ಲಿ ನೀರು ಬರುವುದು ಕಡಿಮೆಯಾಗುತ್ತದೆ.
  2. ⁠ಕಣ್ಣು ಕೆಂಪಗಾಗುವುದು, ಕಣ್ಣು ಉರಿಯುವುದೇ ಕಡಿಮೆಯಾಗುತ್ತದೆ 
  3. ⁠ಕಣ್ಣಿನ ಪೊರೆ ಬರುವ ಹಂತದವರಿಗೆ ಕಡಮೆಯಾಗುತ್ತದೆ 
  4. ⁠ದೃಷ್ಟಿ ದೋಷ ( ದೂರ ದೃಷ್ಟಿ, ಸಮೀಪ ದೃಷ್ಟಿ) ಕಡಿಮೆಯಾಗುತ್ತದೆ.
  5. ⁠ಮೈಗ್ರೇನ್ ನಂತಹ ತೊಂದರೆಗಳು ಕಡಿಮೆಯಾಗುತ್ತವೆ . 

ಈ ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮವನ್ನು ವಂಶ ಪಾರಂಪರ್ಯ ಸಿದ್ಧ ವೈದ್ಯರಾದ ಮೋಕ್ಷಾನಂದ, ಮುತ್ತುಕೃಷ್ಣನ್ ಮತ್ತು ಆಯುರ್ವೇದ ಪರಿಣಿತತರಾದ ನುರಿತ ವೈದ್ಯರಿಂದ ಈ ಕಾರ್ಯಕ್ರಮ ಜರಗಲಿದೆ. 
ಈ ಕಾರ್ಯಕ್ರಮದ ಸದುಪಯೋಗವನ್ನು ದಕ್ಷಿಣ ಕನ್ನಡ , ಉಡುಪಿ ಜಿಲ್ಲೆಯ ಎಲ್ಲಾ ನಾಗರಿಕರು ಪಡೆಯಬೇಕೆಂದು ಸಮಿತಿಯ ಪ್ರಕಟಣೆ ತಿಳಿಸಿದೆ..

ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಕ್ರಮದ ಸಂಯೋಜಕಾರದ  ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಇದರ ಜಿಲ್ಲಾ ಉಪಾದ್ಯಕ್ಷರಾದ ಅರುಣ್ ಪ್ರಕಾಶ್ ಶೆಟ್ಟಿ ( ಮೊಬೈಲ್ 9448410017), ಜಿಲ್ಲಾ ಕಾರ್ಯದರ್ಶಿ ಜಿ ಟಿ ಆಚಾರ್ಯ ( ಮೊಬೈಲ್ 9820357758) , ಸುರೇಂದ್ರ ಮೆಂಡನ್ ( 9448766792) ಇವರನ್ನು ಸಂಪರ್ಕಿಸಲು ಕೇಂದ್ರ ಸಮಿತಿ ಹಾಗು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.



Related posts

ಬಂಟರ ಸಂಘ ಮುಂಬಯಿ ; ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿ  ಜೂ. 16 ರಂದು  ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವಿದ್ಯಾರ್ಥಿವೇತನ , ದತ್ತು ಸ್ವೀಕಾರ, ವಿಧವಾವೇತನ ,ಅಂಗವಿಕಲರಿಗೆ ಆರ್ಥಿಕ ನೆರವು ವಿತರಣೆ

Mumbai News Desk

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.

Mumbai News Desk

ಕರುನಾಡ ಸಿರಿ – ಏಪ್ರಿಲ್ 14ಕ್ಕೆ ವಾರ್ಷಿಕ ಕ್ರೀಡಾಕೂಟ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ಫೆ. 6ರಂದು ವಾರ್ಷಿಕ ಉತ್ಸವ.

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ ಡೊಂಬಿವಲಿ ಪೂರ್ವ : ಫೆ. 8ಕ್ಕೆ ವಾರ್ಷಿಕ ಮಂಗಳೂತ್ಸವ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ – ಡಿ. 1ರಂದು ವಾರ್ಷಿಕ ಕ್ರೀಡಾಕೂಟ

Mumbai News Desk