September 6, 2026
Mumbai News Kannada
ಸುದ್ದಿ

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ





ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಫೆಬ್ರವರಿ 7ರ ಶನಿವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು ಮತ್ತು ವಯೋಸಹಜ ಅನಾರೋಗ್ಯದಿಂದ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪ್ಪಣ್ಣ ಹೆಗ್ಡೆ ಅವರು 1983 ರಿಂದ 1985 ರವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಜನತಾ ಪಕ್ಷದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ರಾಜಕೀಯದ ಜೊತೆಗೆ ಧಾರ್ಮಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದ ಅವರು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿಯಾಗಿ ಮತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಇವರು ತಾಲೂಕು ಕೋ-ಆಪರೇಟಿವ್ ಮಾರ್ಕೆಟಿಂಗ್ ಸೊಸೈಟಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಹಾಗೂ ಬಸ್ರೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಹಲವಾರು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.



Related posts

ಮಲಾಡ್ ಕುರಾರ್ ಶನೇಶ್ವರ ಮಂದಿರದ ವತಿಯಿಂದ ಉಳ್ಳಾಳ ಸೋಮೇಶ್ವರದಲ್ಲಿ, ಶ್ರೀ ಶನಿ ಮಹಾಪೂಜೆ.

Mumbai News Desk

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ: ಧರ್ಮಸ್ಥಳ ಬುರುಡೆ ಪ್ರಕರಣದ ಎಸ್‌ಐಟಿ ಎಸ್‌ಪಿ ಸೈಮನ್ ಸೇರಿ ಸಿಬ್ಬಂದಿ ಅಪಾಯದಿಂದ ಪಾರು

Mumbai News Desk

ಮಿಸೆಸ್ ಇಂಡಿಯಾ-2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ

Mumbai News Desk

ಬಂಟ್ವಾಳ : ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳುತ್ತಿದ್ದ ಕಾರು ಅಪಘಾತ; ಪೊಲೀಸ್ ಅಧಿಕಾರಿ ಪತ್ನಿ ಸೇರಿ ಮೂವರ ದುರ್ಮರಣ

Mumbai News Desk

ಮುಂಬೈ ಕುಲಾಲ ಸಂಘದ ಕುಲಾಲ ಭವನಕ್ಕೆ ಎಸ್. ಆರ್. ಬಂಜನ್ ಅವರಿಂದ ರೂ. 20 ಲಕ್ಷ ದೇಣಿಗೆ

Mumbai News Desk

ದುಬೈನಲ್ಲಿ ಕನ್ನಡಾಭಿಮಾನಕ್ಕೆ ಪ್ರಧಾನಿ ಮೋದಿ ಶ್ಲಾಘನೆ

Mumbai News Desk