30.5 C
Mumbai
June 8, 2026
Mumbai News Kannada
ಸುದ್ದಿ

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ





ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಫೆಬ್ರವರಿ 7ರ ಶನಿವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು ಮತ್ತು ವಯೋಸಹಜ ಅನಾರೋಗ್ಯದಿಂದ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪ್ಪಣ್ಣ ಹೆಗ್ಡೆ ಅವರು 1983 ರಿಂದ 1985 ರವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಜನತಾ ಪಕ್ಷದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ರಾಜಕೀಯದ ಜೊತೆಗೆ ಧಾರ್ಮಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದ ಅವರು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿಯಾಗಿ ಮತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಇವರು ತಾಲೂಕು ಕೋ-ಆಪರೇಟಿವ್ ಮಾರ್ಕೆಟಿಂಗ್ ಸೊಸೈಟಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಹಾಗೂ ಬಸ್ರೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಹಲವಾರು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.



Related posts

ಶ್ರೀ ಲಕ್ಕಮ್ಮಾ ದೇವಿ ಕಲಾ ಪೋಷಕ ಸಂಘ (ರಿ) ಬ್ಯಾಕೂಡ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

*ವಿಜಯ ಕಾಲೇಜು ಮುಲ್ಕಿ*,*ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ*-ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಭಂಡಾರಿ ಆಯ್ಕೆ.

Mumbai News Desk

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025ಕ್ಕೆ ಚಾಲನೆ

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಡಿ ಕೆ ಶೆಟ್ಟಿ ಆಯ್ಕೆ

Mumbai News Desk

ಇಂದು ಭಾರತ್ ಬಂದ್ : ದೇಶಾದ್ಯಂತ ವ್ಯಾಪಕ ಪ್ರತಿಭಟನೆ! ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ

Mumbai News Desk

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk