July 23, 2026
Mumbai News Kannada
ಸುದ್ದಿ

ಉಡುಪಿ : ಪ್ರವಾಸಿ ತಾಣಗಳ ಅಭಿವೃದ್ಧಿಗೆ ಆದ್ಯತೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ







ದೇಶದಲ್ಲಿ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕೇಂದ್ರ ಪ್ರವಾಸೋದ್ಯಮ ಇಲಾಖೆಯು ಐವತ್ತಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು
ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೇಂದ್ರ ಸರ್ಕಾರದ ಜಾಗತಿಕ ಪ್ರವಾಸೋದ್ಯಮ ತಾಣ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುಸ್ಥಿರತೆ ತರುವುದು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವುದರೊಂದಿಗೆ ಪರಿಸರ ಸ್ನೇಹಿಯಾಗಿ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿ ಪಡಿಸುವುದರ ಮೂಲಕ ಪ್ರವಾಸಿಗರನ್ನು ಆಕರ್ಷಿಸುವುದು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಗಮನಹರಿಸುವ ಗುರಿಯೊಂದಿಗೆ ಡೆಸ್ಟಿನೇಷನ್ ಡೆವಲಪ್ಮೆಂಟ್ ಸ್ಕೀಮ್ ಅನ್ನು ಜಾರಿಗೆ ತಂದಿದೆ ಎಂದರು. ಜಿಲ್ಲೆಯಲ್ಲಿ ಈ ಯೋಜನೆಗೆ ಕೋಡಿ- ಕನ್ಯಾನ,ಕೋಡಿ- ಕುಂದಾಪುರ,ಬಾರ್ಕೂರು ಬಂದರು ಪ್ರದೇಶ ಹಾಗೂ ತ್ರಾಸಿ- ಮರವಂತೆ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಈ ಯೋಜನೆಗಳಲ್ಲಿ ನವೀಕರಿಸಬಹುದಾದ ಇಂಧನಗಳ ಬಳಕೆ, ಮೂಲ ಸೌಕರ್ಯ ಹಾಗೂ ಪ್ರವಾಸಿಗರಿಗೆ ಜಾಗತಿಕ ಅಭಿಯಾನಗಳು ಸೇರಿ ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲೆಯ ಒಂದು ಪ್ರವಾಸಿ ತಾಣವನ್ನು ಆಯ್ಕೆ ಮಾಡಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ರೂಪಾಯಿ 300 ಕೋಟಿ ಅನುದಾನ ನೀಡಲಿದೆ ಪ್ರವಾಸಿ ತಾಣದ ಅಭಿವೃದ್ಧಿಗೆ ಖಾಸಗಿ ಸಹ ಭಾಗಿತ್ವವನ್ನು ಉತ್ತೇಜಿಸಲಾಗುವುದು. ಅದಕ್ಕೆ ಅಗತ್ಯವಿರುವ ಭೂಮಿಯನ್ನು ಸಹ ಒದಗಿಸುವ ಅಗತ್ಯವಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂದ್ಯಾ ಎನ್. ಎಂ ಉಪಸ್ಥಿತರಿದ್ದರು.



Related posts

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 20ಕ್ಕೂ ಹೆಚ್ಚು ಜನರಿಗೆ ಗಾಯ, 11 ಸಾವು

Mumbai News Desk

ಮುಂಬೈ ಮಹಾನಗರ ಪಾಲಿಕಾ ಚುನಾವಣೆಯಲ್ಲಿ ಜಯ ಗಳಿಸಿದ ಹರಿ ಸಾಲಿಯಾನ್‌ಗೆ ಹೆಜಮಾಡಿಯಲ್ಲಿ ಸನ್ಮಾನ

Mumbai News Desk

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸೇವೆ ಅಗತ್ಯ – ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮನವಿ

Mumbai News Desk

70ನೇ ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Mumbai News Desk

ಮಹಾರಾಷ್ಟ್ರ: ಎಚ್ ಎಸ್ ಸಿ ಫಲಿತಾಂಶ : ನಿಧಿಶಾ ಡಿ. ಪೂಜಾರಿ ಗೆ ಶೇ.91.67ಅಂಕ

Mumbai News Desk

ಅಹಮದಾಬಾದ್ : 242 ಪ್ರಯಾಣಿಕರನ್ನು ಹೊತ್ತು ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ AI -171 (Air India)ವಿಮಾನ ಪತನ, ಹಲವರ ಸಾವು ಶಂಕೆ

Mumbai News Desk