30 C
Mumbai
April 24, 2026
Mumbai News Kannada
ಮುಂಬಯಿ

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: ಸತತ ನಾಲ್ಕನೇ ವರ್ಷದ ರಕ್ತದಾನ ಶಿಬಿರದಲ್ಲಿ 182 ಯುನಿಟ್ ರಕ್ತ ಸಂಗ್ರಹದ ದಾಖಲೆ





ಡೊಂಬಿವಲಿ: ಇಲ್ಲಿನ ಶ್ರೀ ಮಹಾವಿಷ್ಣು ಮಂದಿರ ಹಾಗೂ ಮುಂಬ್ರಾ ಮಿತ್ರ ಭಜನಾ ಮಂಡಳಿಯ ಸಂಚಾಲಕತ್ವದಲ್ಲಿ ಸತತ ನಾಲ್ಕನೇ ವರ್ಷದ ಬೃಹತ್ ರಕ್ತದಾನ ಶಿಬಿರವು ರವಿವಾರ, ದಿನಾಂಕ 08.02.2026 ರಂದು ಅತ್ಯಂತ ಯಶಸ್ವಿಯಾಗಿ ಜರುಗಿತು. ಬೆಳಿಗ್ಗೆ 8 ರಿಂದ ಸಂಜೆ 4:30 ರವರೆಗೆ ನಡೆದ ಈ ಶಿಬಿರದಲ್ಲಿ ಒಟ್ಟು 182 ಯುನಿಟ್ ರಕ್ತ ಸಂಗ್ರಹವಾಗುವ ಮೂಲಕ ಹೊಸ ದಾಖಲೆ ನಿರ್ಮಾಣವಾಯಿತು.

​ಕಾರ್ಯಕ್ರಮದ ಆರಂಭದಲ್ಲಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷರಾದ ಶ್ರೀ ಇಂದುಶೇಖರ್ ಸುವರ್ಣ, ಗೌರವ ಅಧ್ಯಕ್ಷರಾದ ಶ್ರೀ ನಿತಿನ್ ಪ್ರಕಾಶ್ ಪುತ್ರನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಸವಿತಾ ಸಿ. ಸಾಲಿಯಾನ್, ಉಪಾಧ್ಯಕ್ಷರಾದ ಶ್ರೀ ಅರವಿಂದ್ ಪದ್ಮಶಾಲಿ, ಕೋಶಾಧಿಕಾರಿ ಶ್ರೀ ಪ್ರವೀಣ್ ಶೆಟ್ಟಿ ಹಾಗೂ ಕಾರ್ಯದರ್ಶಿ ಶ್ರೀ ಸಚಿನ್ ಪೂಜಾರಿ ಉಪಸ್ಥಿತರಿದ್ದರು.

​ಅತಿಥಿಗಳಾಗಿ ಕರ್ನಾಟಕ ಸಂಘ ಡೊಂಬಿವಲಿಯ ಗೌರವ ಪ್ರಧಾನ ಕೋಶಾಧಿಕಾರಿ ಶ್ರೀ ತಾರಾನಾಥ್ ಅಮೀನ್, ತುಳು ವೆಲ್ಫೇರ್ ಅಸೋಸಿಯೇಷನ್ ಡೊಂಬಿವಲಿಯ ಉಪಾಧ್ಯಕ್ಷರಾದ ಶ್ರೀ ವಸಂತ್ ಸುವರ್ಣ, ಸುಪ್ರ ಪ್ರಿಂಟರ್ಸ್ ಮಾಲಕರಾದ ಶ್ರೀ ಸತೀಶ್ ಕೋಟ್ಯಾನ್, ಸಮಾಜ ಸೇವಕರಾದ ಶ್ರೀ ಸುರೇಶ ಕುಂದರ್ ಮತ್ತು ಶ್ರೀ ಚಂದ್ರ ನಾಯಕ್ ಪಾಲ್ಗೊಂಡು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

​ಗಣ್ಯರ ಅನಿಸಿಕೆಗಳು

  • ಶ್ರೀ ವಸಂತ್ ಸುವರ್ಣ: “ರಕ್ತದಾನವು ದಾನಗಳಲ್ಲೇ ಶ್ರೇಷ್ಠವಾದುದು. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ, ಹಾಗಾಗಿ ಅದರ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ. ಯುವಕರ ತಂಡವನ್ನು ಹೊಂದಿರುವ ಮಹಾವಿಷ್ಣು ಮಂದಿರದ ಈ ಜನಪರ ಸೇವೆ ಶ್ಲಾಘನೀಯ,” ಎಂದು ನುಡಿದರು.
  • ಶ್ರೀ ಸತೀಶ್ ಕೋಟ್ಯಾನ್: “ನಮ್ಮ ಹಿರಿಯರು ಸ್ಥಾಪಿಸಿದ ಈ ಮಂದಿರವು ಮುಂದಿನ ವರ್ಷ ಸುವರ್ಣ ಮಹೋತ್ಸವವನ್ನು ಆಚರಿಸಲಿದ್ದು, ಈ ಸಂಸ್ಥೆಯ ಸದಸ್ಯನಾಗಿರುವುದು ನನಗೆ ಹೆಮ್ಮೆಯ ವಿಷಯ. ಇಂತಹ ಮಾನವೀಯ ಕಾರ್ಯಗಳು ನಿರಂತರವಾಗಿ ನಡೆಯಲಿ,” ಎಂದರು.
  • ಶ್ರೀ ವಿಶ್ವನಾಥ್ ರಾಣೆ (ನಗರ ಸೇವಕರು, KDMC): “ಕಳೆದ ವರ್ಷ 150 ಯುನಿಟ್ ಸಂಗ್ರಹಿಸಿದ್ದ ಮಂದಿರವು ಈ ಬಾರಿ ದೊಡ್ಡ ಗುರಿಯೊಂದಿಗೆ ದಾಖಲೆ ನಿರ್ಮಿಸಿರುವುದು ಸಂತಸ ತಂದಿದೆ. ಮಂದಿರದ ಸುವರ್ಣ ಮಹೋತ್ಸವಕ್ಕೆ ನನ್ನ ಸಂಪೂರ್ಣ ಸಹಕಾರವಿದೆ. ಅಲ್ಲದೆ, ಯಶವಂತ ನಗರದಿಂದ ಮಂದಿರಕ್ಕೆ ಸಂಪರ್ಕಿಸುವ ರಸ್ತೆಗೆ ‘ಶ್ರೀ ಮಹಾವಿಷ್ಣು ಮಂದಿರ ರಸ್ತೆ’ ಎಂದು ನಾಮಕರಣ ಮಾಡುವ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.”
  • ಡಾ. ದಿವಾಕರ್ ಶೆಟ್ಟಿ, ಇಂದ್ರಾಳಿ: “ಡೊಂಬಿವಲಿ ನಗರದಲ್ಲಿ ತುಳು-ಕನ್ನಡಿಗರ ನಡುವೆ ಇಷ್ಟೊಂದು ದೊಡ್ಡ ಮಟ್ಟದ ರಕ್ತದಾನ ಶಿಬಿರ ಆಯೋಜಿಸಿ ದಾಖಲೆ ನಿರ್ಮಿಸಿರುವುದು ಅಭಿನಂದನೀಯ. ಇನ್ನೊಬ್ಬರ ಜೀವ ಉಳಿಸುವ ತೃಪ್ತಿ ರಕ್ತದಾನದಿಂದ ಸಿಗುತ್ತದೆ,” ಎಂದು ಹಾರೈಸಿದರು.

​ಮಂದಿರದ ಅಧ್ಯಕ್ಷರಾದ ಶ್ರೀ ಇಂದುಶೇಖರ್ ಸುವರ್ಣ ಅವರು ಮಾತನಾಡಿ, “ಮಂದಿರದ ಪ್ರತಿಯೊಂದು ಕಾರ್ಯಕ್ರಮವು ಗಣ್ಯರ ಹಾಗೂ ಭಕ್ತಾದಿಗಳ ಸಹಕಾರದಿಂದ ಯಶಸ್ವಿಯಾಗುತ್ತಿದೆ. ಗೌರವ ಅಧ್ಯಕ್ಷರಾದ ನಿತಿನ್ ಪ್ರಕಾಶ್ ಪುತ್ರನ್ ಅವರ ಮುಂದಾಲೋಚನೆಯಿಂದ ಈ ನಾಲ್ಕನೇ ವರ್ಷದ ಶಿಬಿರವು ಸಫಲವಾಗಿದೆ,” ಎನ್ನುತ್ತಾ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

​ದೂರದ ಊರುಗಳಿಂದ ಬಂದಿದ್ದ ದಾನಿಗಳು, ವಿಶೇಷವಾಗಿ ಖಾಡಿ ಕ್ರಿಕೆಟರ್ಸ್ ಸದಸ್ಯರು, ಸಮಾಜ ಬಾಂಧವರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮಂದಿರದ ಸಮಿತಿ ಸದಸ್ಯರು, ಮಹಿಳಾ ವಿಭಾಗ ಹಾಗೂ ಸಕ್ರಿಯ ಕಾರ್ಯಕರ್ತರು ಈ ಶಿಬಿರದ ಯಶಸ್ಸಿಗೆ ಶ್ರಮಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ಸಚಿನ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆ ಮಾಡಿದರು.



Related posts

ಮಲಾಡ್ ಕನ್ನಡ ಸಂಘ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಬಂಟರ ಸಂಘ ಮುಂಬಯಿ, ಡೊಂಬಿವಲಿ ಪ್ರಾದೇಶಿಕ ಸಮಿತಿ, ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಮತ್ತು ” ಸಂಜೀವಿನಿ ” ಯೋಜನೆಯ ಉದ್ಘಾಟನೆ

Mumbai News Desk

ಮುಂಬೈ : ವಿಕ್ರೋಲಿಯ ಪಾರ್ಕ್ ಸೈಟ್‌ನ ವರ್ಷಾ ನಗರದ ಜನಕಲ್ಯಾಣ್ ಸೊಸೈಟಿಯಲ್ಲಿ ಭೂಕುಸಿತ, ಇಬ್ಬರು ಸಾವು

Mumbai News Desk

ಶಾರದೆಯ ವೈಭವ: ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಸಂಭ್ರಮ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ವಸಯಿ ಸ್ಥಳೀಯ ಕಚೇರಿಯ ವತಿಯಿಂದ ಆಟಿ ಡೊಂಜಿ ದಿನ ತುಳು ಕಾರ್ಯಕ್ರಮ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೋಕ್ಷ ರವಿ ಶೆಟ್ಟಿಗೆ ಶೇ 91.80 ಅಂಕ

Mumbai News Desk