32.3 C
Mumbai
June 7, 2026
Mumbai News Kannada
ಸುದ್ದಿ

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ





ಬಾಲಾಲಯ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವು ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಮಂಗಳವಾರ ಅದ್ದೂರಿಯಾಗಿ ನೆರವೇರಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ನ್ಯಾಯವಾದಿ ಅಶ್ವಿನಿ ಕುಮಾರ್ ರೈ ಅವರು, ಸಮಾಜದ ನಿರ್ಮಾಣದಲ್ಲಿ ಮಹಿಳೆ ಮತ್ತು ಪುರುಷರು ಸಮಾನವಾಗಿ ತೊಡಗಿಸಿಕೊಳ್ಳುವುದು ಅತ್ಯಗತ್ಯ ಎಂದು ಪ್ರತಿಪಾದಿಸಿದರು. ಮುಂದಿನ ಪೀಳಿಗೆಯನ್ನು ಉತ್ತಮ ಸಂಸ್ಕಾರದೊಂದಿಗೆ ರೂಪಿಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂಬ ಮಹತ್ವದ ಸಂದೇಶವನ್ನು ಅವರು ನೀಡಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ವೈದ್ಯೆ ಡಾ. ಶಶಿಕಲಾ ಆರ್. ಸೋಮಯಾಜಿ, ಸಮಾಜ ಸೇವಕಿಯರಾದ ಡಾ. ಸಂಸದ್ ಕುಂಜತ್‌ಬೈಲು, ಪ್ರಭಾ ನಾರಾಯಣ ಸುವರ್ಣ ಮುಂಬಯಿ ಮತ್ತು ಶಿಕ್ಷಕಿ ಸಂಗೀತ ಶರ್ಮ ಅವರಿಗೆ ಪ್ರತಿಷ್ಠಿತ ‘ಗಿರಿಜಾ ರತ್ನ ರಾಜ್ಯ ಪ್ರಶಸ್ತಿ’ಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಶೈಲಜಾ ರಾಜೇಶ್ ವಹಿಸಿದ್ದು, ಪ್ರಸ್ತಾವನೆಗೈದರು. ವೇದಿಕೆಯಲ್ಲಿ ಮಂಗಳೂರು ಆತ್ಮಶಕ್ತಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಉದ್ಯಮಿ ಶೈಲೇಂದ್ರ ಸುವರ್ಣ, ಕೃಷ್ಣ ಸುವರ್ಣ, ಪ್ರಕಾಶ್ ಕೆವಾರ್ಲೆ, ಶೌರ್ಯ ಎಸ್.ಆರ್ ಮತ್ತು ಡಾ. ರಾಜೇಶ್ ಪೂಜಾರಿ ಅವರಂತಹ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಕಳೆ ನೀಡಿದರು. ಪ್ರತಿಭಾವಂತ ಮಕ್ಕಳಾದ ಅನೀಶ್ ಪೂಜಾರಿ, ಧನಲಕ್ಷ್ಮಿ, ವೈಷ್ಣವಿ ಶೆಟ್ಟಿ, ಶಾನ್ವಿ ಪೂಜಾರಿ ಮತ್ತು ಯಶಸ್ವಿನಿ ಅವರನ್ನು ಅವರ ಸಾಧನೆಗಾಗಿ ಅಭಿನಂದಿಸಲಾಯಿತು. ಕೇವಲ ಸಂಭ್ರಮಕ್ಕೆ ಸೀಮಿತವಾಗದೆ, ಸಾಮಾಜಿಕ ಕಳಕಳಿಯೊಂದಿಗೆ ಕ್ಯಾನ್ಸರ್ ಪೀಡಿತರಿಗೆ ಹಾಗೂ ವಿಕಲಚೇತನರಿಗೆ ಆರ್ಥಿಕ ನೆರವು ನೀಡುವ ಮೂಲಕ ಈ ಸಮಾರಂಭವು ಮಾದರಿಯಾಯಿತು. ವಿವಿಧ ಸ್ಪರ್ಧೆಗಳು ಮತ್ತು ಸಂವಾದ ಕಾರ್ಯಕ್ರಮಗಳು ಮಕ್ಕಳಲ್ಲಿ ಉತ್ಸಾಹ ತುಂಬಿದವು.



Related posts

ಬೆಂಗಳೂರಲ್ಲಿ ಮುಂಬಯಿಯ ನಿಶಿತ ಸೂರ್ಯಕಾಂತ್ ಸುವರ್ಣರ ಇಮೇಜ್ ಕನ್ಸಲ್ಟೆಂಟ್ ನ ಅದ್ದೂರಿಯ ಕರ್ನಾಟಕ ಸ್ಟೈಲ್ ಐಕಾನ್ 2023 ಕಾರ್ಯಕ್ರಮ

Mumbai News Desk

ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ “ಲೀಡಿಂಗ್ ಬ್ಯಾಂಕ್ ಅವಾರ್ಡ್ “

Mumbai News Desk

ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ

Mumbai News Desk

ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ – ಸಂಭ್ರಮ ಆಚರಣೆ

Mumbai News Desk

ಭಾರತ್ ಬ್ಯಾಂಕ್‌ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಐಕಾನಿಕ್ ಲೀಡರ್ಸ್ – ಯೂತ್ ಚೇರ್ಮನ್ ಅವಾರ್ಡ್ 2025’ ಗೌರವ

Mumbai News Desk

ಸಾಹಿತಿ ಡಾ. ವಿಶ್ವನಾಥ್ ಕಾರ್ನಡ್ ಅವರಿಗೆ ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ವತಿಯಿಂದ ಅಭಿನಂದನೆ

Mumbai News Desk