September 6, 2026
Mumbai News Kannada
ಪ್ರಕಟಣೆ

ಡೊಂಬಿವಲಿ: ಫೆ. 14ರಂದು ಶ್ರೀ ಜೈ ಭವಾನಿ ಶನೀಶ್ವರ ಮಂದಿರದ 36ನೇ ವಾರ್ಷಿಕ ಮಂಗಳೋತ್ಸವ





ಡೊಂಬಿವಲಿ: ಇಲ್ಲಿನ ಅಜ್ದೇಗಾಂವ್ ತಿಲಕ್ ಕಾಲೇಜು ಸಮೀಪವಿರುವ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ 36ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿ ಮಹಾಪೂಜಾ ಮಹೋತ್ಸವವು ಫೆಬ್ರವರಿ 14, ಶನಿವಾರದಂದು ಅದ್ದೂರಿಯಾಗಿ ಜರಗಲಿದೆ.

​ವಿಶ್ವಾವಸು ನಾಮ ಸಂವತ್ಸರದ ಮಾಘ ಮಾಸದ ಈ ಶುಭ ದಿನದಂದು, ಮಂದಿರದ ಪ್ರಧಾನ ಅರ್ಚಕರಾದ ಶ್ರೀ ಪ್ರಕಾಶ್ ಭಟ್ ಕಾನಂಗಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ.

ಧಾರ್ಮಿಕ ಕಾರ್ಯಕ್ರಮಗಳ ವಿವರ:

ಅಂದು ಮುಂಜಾನೆ 6.00 ಗಂಟೆಗೆ ತೋರಣ ಮುಹೂರ್ತ ಹಾಗೂ ಗಣಹೋಮದೊಂದಿಗೆ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಬೆಳಿಗ್ಗೆ 10.30ಕ್ಕೆ ಶ್ರೀ ಸತ್ಯನಾರಾಯಣ ಮಹಾಪೂಜೆ ನೆರವೇರಲಿದ್ದು, ಮಧ್ಯಾಹ್ನ 1.30ರಿಂದ ಶ್ರೀ ಶನಿದೇವರ ಕಲಶ ಪ್ರತಿಷ್ಠೆ ಹಾಗೂ ಗ್ರಂಥ ಪಾರಾಯಣ ನಡೆಯಲಿದೆ. ಈ ಸಂದರ್ಭದಲ್ಲಿ ವಿಶೇಷ ಆಕರ್ಷಣೆಯಾಗಿ ‘ಯಕ್ಷಗಾನ ತಾಳಮದ್ದಳೆ’ ರೂಪದಲ್ಲಿ ಪಾರಾಯಣ ಸೇವೆಯು ಭಕ್ತಾದಿಗಳನ್ನು ರಂಜಿಸಲಿದೆ.

​ರಾತ್ರಿ 8.30ಕ್ಕೆ ಮಹಾಮಂಗಳಾರತಿ ನೆರವೇರಿ, 9.00 ಗಂಟೆಗೆ ತೀರ್ಥಪ್ರಸಾದ ವಿತರಣೆ ಹಾಗೂ ಮಹಾಪ್ರಸಾದ (ಅನ್ನಸಂತರ್ಪಣೆ) ವಿತರಣೆಯಾಗಲಿದೆ ಎಂದು ಮಂದಿರದ ಆಡಳಿತ ಮಂಡಳಿ ತಿಳಿಸಿದೆ.

ಗೌರವಾಧ್ಯಕ್ಷ ರವಿ ಎಂ. ಸುವರ್ಣ, ಅಧ್ಯಕ್ಷ ಸೂರಜ್ ಡಿ. ಸಪಲಿಗ, ಉಪಾಧ್ಯಕ್ಷ ಸಂಜೀವ ಪಿ. ಪಾಲನ್, ಕಾರ್ಯದರ್ಶಿ ಸಂತೋಷ್ ಜಿ. ಪೂಜಾರಿ, ಕೋಶಾಧಿಕಾರಿ ಜೈಕಿಶ್ ಆರ್. ಸನಿಲ್, ಜೊತೆ ಕಾರ್ಯದರ್ಶಿ ಪ್ರದೀಪ್ ಎಸ್ ಸಾಲ್ಯಾನ್, ಜೊತೆ ಕೋಶಾಧಿಕಾರಿ ರಕ್ಷಣ್ ಸಾಲ್ಯಾನ್, ಪ್ರದಾನ ಅರ್ಚಕ ಪ್ರಕಾಶ್ ಭಟ್ ಕಾನಂಗಿ, ಸಹ ಅರ್ಚಕ ಪ್ರವೀಣ್ ಪೂಜಾರಿ ಹಾಗೂ ಮಹಿಳಾ ವಿಭಾಗದ ಅಧ್ಯಕ್ಷೆ ಪಾರ್ವತಿ ಸಾಲ್ಯಾನ್ ಮತ್ತು ಪದಾಧಿಕಾರಿಗಳು, ಯುವ ವಿಭಾಗದ ಸದಸ್ಯರು ಸಮಸ್ತ ಭಕ್ತಾದಿಗಳನ್ನು ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸ್ವಾಗತಿಸಿದ್ದಾರೆ.



Related posts

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.

Mumbai News Desk

ಆಗಸ್ಟ್ 22 ರಂದು ಭಾರತ್ ಬ್ಯಾಂಕಿನ 49ನೇ ವಾರ್ಷಿಕ ಮಹಾಸಭೆ

Mumbai News Desk

ನಮ ಜವನೆರ್ (ರಿ) ಮೀರಾ ಭಾಯಾಂದರ್: “ಶ್ರೀ ಕೃಷ್ಣ ಜನ್ಮೋತ್ಸವ 2026” ಪೂರ್ವಭಾವಿ ಸಭೆ

Mumbai News Desk

ಮುಂಬಯಿ ವಿವಿ ಕನ್ನಡ ವಿಭಾಗ: ಮಾ. 20ರಂದು ಪ್ರಭಾಕರ ದೇವಾಡಿಗ ಆರೂರು ಅವರ ‘ಲಲಿತ ರಂಗ ಗುಣನಾಯಕ’ ಕೃತಿ ಲೋಕಾರ್ಪಣೆ

Mumbai News Desk

ಮಲಾಡ್ ಕನ್ನಡ ಸಂಘ, ಮಾ.8ರಂದು ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Mumbai News Desk

ಸಾಂತಾಕ್ರೂಜ್ ಶ್ರೀ ಪೇಜಾವರ ಮಠದಲ್ಲಿಸೆ. 18ರಂದು ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಗೆ ಗುರುವಂದನೆ.

Mumbai News Desk