September 6, 2026
Mumbai News Kannada
ಸುದ್ದಿ

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ್ ಪೂಜಾರಿ ನಿಧನ





ಮುಂಡ್ಕೂರು ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ (60) ಫೆಬ್ರವರಿ 15 ರಂದು ನಿಧನ ಹೊಂದಿದರು.ಕಾಸರಗೋಡಿನಲ್ಲಿ‌ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತಕ್ಕೊಳಗಾದ ದಿವಾಕರ ಪೂಜಾರಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಫಲಕಾರಿಯಾಗದೆ ಮೃತಪಟ್ಟರು.ಮುಂಡ್ಕೂರಿನ ಜಾರಿಗೆಕಟ್ಟೆಯಲ್ಲಿ ಕೊರಗಜ್ಜ,ಕೊರಗರ ಪಂಜುರ್ಲಿ ಸಹಿತ ವಿವಿಧ ಪರಿವಾರ ಶಕ್ತಿಗಳ ಕೇಂದ್ರಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಿದ್ದು ಕ್ಷೇತ್ರದಲ್ಲಿ ನಿರಂತರ ಕೋಲ,ಅಗೇಲು ಸೇವೆಗಳು ನಡೆಯುತ್ತಿದ್ದವು.ಕ್ಷೇತ್ರದಲ್ಲಿ‌ ಕ್ರೈಸ್ತ,ಮುಸ್ಲಿಂ ಸಮಾಜದ ಬಂಧುಗಳೂ ಹರಕೆಯ ಕೋಲ‌ ಹಾಗೂ ಅಗೇಲು ಸೇವೆ ನೀಡುತ್ತಿದ್ದು ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರ ಕಾರಣಿಕ ಕ್ಷೇತ್ರವೆನಿಸಿತ್ತು. ಮೃತರು ಮುಂಡ್ಕೂರು ಪೊಸ್ರಾಲು ಬ್ರಹ್ಮ ಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷರಾಗಿದ್ದು ಇತ್ತೀಚೆಗೆ ಸಂಘದ ನೂತನ ಕಟ್ಟಡ ನಿರ್ಮಾಣದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.
ಮೃತರು ಪತ್ನಿ,ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ನಿಧನಕ್ಕೆ‌ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್,ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ, , ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಸಂತಾಪ ಸೂಚಿಸಿದ್ದಾರೆ.



Related posts

ಪ್ರಭಾ ಸುವರ್ಣ ಅವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿಯ ಗೌರವ…

Mumbai News Desk

ಪ್ರತಿಷ್ಠಿತ ಬೂಖರ್ ಪ್ರಶಸ್ತಿ ಮೂಡಿಗಿರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ : ಕನ್ನಡದ ಮೊಟ್ಟ ಮೊದಲ ಕೃತಿಗೆ ಪ್ರಶಸ್ತಿ ಗರಿ

Mumbai News Desk

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಎನ್ಐಎ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಶಾರೀಕ್

Mumbai News Desk

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ರಂಗಸಾರಥಿ ಶ್ರೀವಿಶ್ವನಾಥ್ ಶೆಟ್ಟಿ ಅಯ್ಕೆ

Mumbai News Desk

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.

Mumbai News Desk

ಮುಂಬೈ : ಶ್ರೇಯಸ್ ಆರ್ ಪೂಜಾರಿ ಗೆ Jee Main ನಲ್ಲಿ ಶೇ. 99.36, ಎಚ್ ಎಸ್ ಸಿ ಯಲ್ಲಿ ಶೇ.89 ಅಂಕ

Mumbai News Desk