July 22, 2026
Mumbai News Kannada
ಸುದ್ದಿ

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ್ ಪೂಜಾರಿ ನಿಧನ







ಮುಂಡ್ಕೂರು ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ (60) ಫೆಬ್ರವರಿ 15 ರಂದು ನಿಧನ ಹೊಂದಿದರು.ಕಾಸರಗೋಡಿನಲ್ಲಿ‌ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತಕ್ಕೊಳಗಾದ ದಿವಾಕರ ಪೂಜಾರಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಫಲಕಾರಿಯಾಗದೆ ಮೃತಪಟ್ಟರು.ಮುಂಡ್ಕೂರಿನ ಜಾರಿಗೆಕಟ್ಟೆಯಲ್ಲಿ ಕೊರಗಜ್ಜ,ಕೊರಗರ ಪಂಜುರ್ಲಿ ಸಹಿತ ವಿವಿಧ ಪರಿವಾರ ಶಕ್ತಿಗಳ ಕೇಂದ್ರಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಿದ್ದು ಕ್ಷೇತ್ರದಲ್ಲಿ ನಿರಂತರ ಕೋಲ,ಅಗೇಲು ಸೇವೆಗಳು ನಡೆಯುತ್ತಿದ್ದವು.ಕ್ಷೇತ್ರದಲ್ಲಿ‌ ಕ್ರೈಸ್ತ,ಮುಸ್ಲಿಂ ಸಮಾಜದ ಬಂಧುಗಳೂ ಹರಕೆಯ ಕೋಲ‌ ಹಾಗೂ ಅಗೇಲು ಸೇವೆ ನೀಡುತ್ತಿದ್ದು ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರ ಕಾರಣಿಕ ಕ್ಷೇತ್ರವೆನಿಸಿತ್ತು. ಮೃತರು ಮುಂಡ್ಕೂರು ಪೊಸ್ರಾಲು ಬ್ರಹ್ಮ ಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷರಾಗಿದ್ದು ಇತ್ತೀಚೆಗೆ ಸಂಘದ ನೂತನ ಕಟ್ಟಡ ನಿರ್ಮಾಣದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.
ಮೃತರು ಪತ್ನಿ,ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ನಿಧನಕ್ಕೆ‌ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್,ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ, , ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಸಂತಾಪ ಸೂಚಿಸಿದ್ದಾರೆ.



Related posts

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

Mumbai News Desk

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ತೃತೀಯ ವಾರ್ಷಿಕ ಪ್ರತಿಷ್ಠ ಮಹೋತ್ಸವ.

Mumbai News Desk

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ

Mumbai News Desk

2018 ರ ರೆಮೋ ಡಿಸೋಜಾ ಸುಲಿಗೆ ಪ್ರಕರಣದ ಗ್ಯಾಂಗ್ ಸ್ಟರ್ ರವಿ ಪೂಜಾರಿ ಬಂಧನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (30/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk