30 C
Mumbai
April 24, 2026
Mumbai News Kannada
ಸುದ್ದಿ

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ್ ಪೂಜಾರಿ ನಿಧನ





ಮುಂಡ್ಕೂರು ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ (60) ಫೆಬ್ರವರಿ 15 ರಂದು ನಿಧನ ಹೊಂದಿದರು.ಕಾಸರಗೋಡಿನಲ್ಲಿ‌ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತಕ್ಕೊಳಗಾದ ದಿವಾಕರ ಪೂಜಾರಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಫಲಕಾರಿಯಾಗದೆ ಮೃತಪಟ್ಟರು.ಮುಂಡ್ಕೂರಿನ ಜಾರಿಗೆಕಟ್ಟೆಯಲ್ಲಿ ಕೊರಗಜ್ಜ,ಕೊರಗರ ಪಂಜುರ್ಲಿ ಸಹಿತ ವಿವಿಧ ಪರಿವಾರ ಶಕ್ತಿಗಳ ಕೇಂದ್ರಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಿದ್ದು ಕ್ಷೇತ್ರದಲ್ಲಿ ನಿರಂತರ ಕೋಲ,ಅಗೇಲು ಸೇವೆಗಳು ನಡೆಯುತ್ತಿದ್ದವು.ಕ್ಷೇತ್ರದಲ್ಲಿ‌ ಕ್ರೈಸ್ತ,ಮುಸ್ಲಿಂ ಸಮಾಜದ ಬಂಧುಗಳೂ ಹರಕೆಯ ಕೋಲ‌ ಹಾಗೂ ಅಗೇಲು ಸೇವೆ ನೀಡುತ್ತಿದ್ದು ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರ ಕಾರಣಿಕ ಕ್ಷೇತ್ರವೆನಿಸಿತ್ತು. ಮೃತರು ಮುಂಡ್ಕೂರು ಪೊಸ್ರಾಲು ಬ್ರಹ್ಮ ಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷರಾಗಿದ್ದು ಇತ್ತೀಚೆಗೆ ಸಂಘದ ನೂತನ ಕಟ್ಟಡ ನಿರ್ಮಾಣದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.
ಮೃತರು ಪತ್ನಿ,ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ನಿಧನಕ್ಕೆ‌ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್,ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ, , ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಸಂತಾಪ ಸೂಚಿಸಿದ್ದಾರೆ.



Related posts

ಹಿರಿಯ ರಂಗಕರ್ಮಿ, ಚಿತ್ರ ನಿರ್ಮಾಪಕ ಸದಾನಂದ ಸುವರ್ಣ ನಿಧನ

Mumbai News Desk

ಸಂಸದ ಕೋಟ ಅವರ ಅವಿರತ ಪ್ರಯತ್ನದ ಫಲ :ಫೆ. 17ರಿಂದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅತ್ಯಾಧುನಿಕ ತಂತ್ರಜ್ಞಾನದ ಎಲ್ಎಚ್ ಬಿ ಕೋಚ್ ಮೂಲಕ ಪ್ರಯಾಣ

Mumbai News Desk

ಪಶ್ಚಿಮ ಏಷ್ಯಾ ಸಂಘರ್ಷ: ಉದ್ವಿಗ್ನತೆ ಕಡಿಮೆಯಾಗುತ್ತಿದ್ದಂತೆ ಮುಂಬೈ ತಲುಪಿದ ಎಲ್‌ಪಿಜಿ ತುಂಬಿದ ಹಡಗು

Mumbai News Desk

” ಸಾಧನೆಯ ಮೂಲಕ ಮನಸ್ಸನ್ನು ತಿಳಿಗೊಳಿಸುವುದೇ ಜೀವನದ ಮುಖ್ಯ ಉದ್ದೇಶ “: ಶ್ರೀ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ.

Mumbai News Desk

ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರಿನ ಸಹೋದರ, ಸಹೋದರಿಯರು.

Mumbai News Desk

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಉದ್ಯಾವರ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಮುದ್ರಣ ಯಂತ್ರ ಕೊಡುಗೆ

Mumbai News Desk