July 23, 2026
Mumbai News Kannada
ಮುಂಬಯಿ

ನವಿ ಮುಂಬಯಿ ಘನ್ಸೋಲಿಯ ದೇವಿ ಮೂಕಾಂಬಿಕಾಗೆ ಸೋಮನಾಥ ಎಸ್‌. ಕರ್ಕೇರರ ನೂತನ ತುಳು ಕೃತಿ ‘ಪೆರ್ಗ’ ದ ಮೊದಲ ಪ್ರತಿ ಅರ್ಪಣೆ








ಅನೇಕ ತುಳು ಹಾಗೂ ಕನ್ನಡ ಕೃತಿಗಳನ್ನು ರಚಿಸಿರುವ ಸೋಮನಾಥ ಎಸ್‌.ಕರ್ಕೇರರ ಹೊಸ ತುಳು ಕೃತಿ ‘ಪೆರ್ಗ’ವು ಇದೀಗ ಅಚ್ಚಿನ ಮನೆಯಿಂದ ಹೊರ ಬಂದಿದ್ದು ಇದರ ಮೊತ್ತ ಮೊದಲನೆಯ ಪ್ರತಿಯನ್ನು ಶುಕ್ರವಾರ ದಿನಾಂಕ 20-2-2026 ರಂದು ನವಿ ಮುಂಬಯಿಯ ಘನ್ಸೋಲಿಯ ಮೂಕಾಂಬಿಕಾ ದೇವಿಯ ಚರಣ ಕಮಲಗಳಿಗೆ ಅರ್ಪಿಸಲಾಯ್ತು.

ಈ ಸಂಧರ್ಭದಲ್ಲಿ ಮಂದಿರದ ಧರ್ಮದರ್ಶಿ ಅಣ್ಣಿ ಸಿ.ಶೆಟ್ಟಿಯವರು ದೇವಸ್ಥಾನದ ಪರವಾಗಿ ‘ಪೆರ್ಗ”ದ ಪ್ರತಿಯನ್ನು ಸ್ವೀಕರಿಸಿದರು. ಈ ಪ್ರಯುಕ್ತ ಸರಳ ಪೂಜೆ ಹಾಗೂ ಮಂಗಳಾರತಿಯನ್ನು ಮಾಡಲಾಗಿ ಲೇಖಕರಿಗೆ ದೇವಿ ಮೂಕಾಂಬಿಕೆಯ ಪ್ರಸಾದ ನೀಡಿ ಅವರಿಂದ ಇನ್ನೂ ಹೆಚ್ಚು ಮೌಲಿಕ ಕೃತಿಗಳು ರಚಿಸಲ್ಪಟ್ಟು ಓದುಗರ ಕೈ ಸೇರಲಿ ಎಂದು ಅಣ್ಣಿ ಶೆಟ್ಟಿಯವರು ಆಶಿರ್ವದಿಸಿದರು. ಕೃತಿ ಅರ್ಪಣೆಯ ಈ ಸಂದರ್ಭದಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ಮುಖ್ಯ ಕಛೇರಿಯ ಸಮಿತಿ ಸದಸ್ಯ ಹಾಗೂ ಜೊತೆ ಕೋಶಾಧಿಕಾರಿ ಚಂದ್ರಕಾಂತ ಸಾಲ್ಯಾನ್‌, ದೇವಸ್ಥಾನದ ಕಾರ್ಯಕಾರಿ ಸಮಿತಿ ಸದಸ್ಯ ಕುಟ್ಟಿ ಕೆಂದರ್‌ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ನವಿ ಮುಂಬಯಿ ಶಾಖೆಯ ಮಹಿಳಾ ವಿಭಾಗದ ಸದಸ್ಯೆ ಪ್ರತಿಭಾ ಸಾಲ್ಯಾನ್‌ ಉಪಸ್ಥಿತರಿದ್ದರು.


ತುಳು ಹನಿಗವನ, ಹನಿ ಕಥೆ, ಹಾಸ್ಯ ತುಣುಕುಗಳಿಂದ ಕೂಡಿದ ‘ಪೆರ್ಗ’ ವು ಸದ್ಯದಲ್ಲೇ ಮುಂಬಯಿ ಮತ್ತು ಉಡುಪಿ ಜಿಲ್ಲೆಯಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಕೃತಿಯಯನ್ನು ಮುಂಬಯಿಯ ಪ್ರತಿಯೊಬ್ಬ ತುಳುವರ ಮನೆ ಮನೆಗೆ ತಲುಪಿಸಲಾಗುವುದು ಎಂದು ಈ ಕೃತಿಯ ಪ್ರಕಾಶಕರಾದ ಮುಂಬಯಿಯ ಅಕ್ಷರಗಂಗಾ ಪ್ರಕಾಶನದವರು ತಿಳಿಸಿದ್ದಾರೆ.



Related posts

ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ  ಯುವ ವಿಭಾಗದ ಅಶ್ರಯದಲ್ಲಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

Mumbai News Desk

ಬಂಟರ ಸಂಘ ಮುಂಬಯಿ,  ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಅಷ್ಟಾದಶ ಸಂಭ್ರಮ

Mumbai News Desk

ಬಿಲ್ಲವರ ಅಸೋಸಿಯೇಶನ್, ಜೋಗೇಶ್ವರಿ ಸ್ಥಳೀಯ ಕಚೇರಿಯಲ್ಲಿ, ಸಂಭ್ರಮದ “ಆಟಿದ ಒಂಜಿ ದಿನ” ಆಚರಣೆ.

Mumbai News Desk

ಮುಂಬಯಿ : ಏನ್ ಸಿ ಪಿ ಮುಖಂಡ ಬಾಬಾ ಸಿದ್ಧಿಕ್ ಅವರನ್ನು ಗುಂಡಿಕ್ಕಿ ಹತ್ಯೆ

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ಶೈಕ್ಷಣಿಕ ಪ್ರವಾಸ

Mumbai News Desk

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್‌ ನಿಂದಟೀಮ್ ಮುಷಕ್‌ಗೆ ರೂ. 2 ಎರಡು ಲಕ್ಷ ದೇಣಿಗೆ

Mumbai News Desk