34 C
Mumbai
March 6, 2026
Mumbai News Kannada
ಪ್ರಕಟಣೆ

ಪೌರಾಣಿಕ ವಾಚಕ ಸಮಿತಿ ಮುಂಬಯಿ : ಫೆ. 28ಕ್ಕೆ 50ನೇ ವಾರ್ಷಿಕ ಶನಿ ಮಹಾಪೂಜೆ, ಮಾ.1ರಂದು ಸುವರ್ಣ ಮಹೋತ್ಸವ ಆಚರಣೆ





ಮುಂಬೈನ ಪೌರಾಣಿಕ ವಾಚಕ ಸಮಿತಿಯು ತನ್ನ ಸ್ಥಾಪನೆಯ ಸುವರ್ಣ ಮಹೋತ್ಸವ ಹಾಗೂ 50ನೇ ವರ್ಷದ ವಾರ್ಷಿಕ ಶನಿ ಮಹಾಪೂಜೆ ಮತ್ತು ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸಡಗರದಿಂದ ಆಯೋಜಿಸಿದೆ.
1975ರಲ್ಲಿ ದಿ. ಗೋಪಾಲ ಎ. ಕೋಟ್ಯಾಂಕರ್, ನಾರಾಯಣ ಪದ್ಮಶಾಲಿ, ಕೇಶವ ಬಂಗೇರ, ರತ್ನಾಕರ ಬಂಗೇರ ಮುಂತಾದ ಧಾರ್ಮಿಕ ಚಿಂತಕರ ನೇತೃತ್ವದಲ್ಲಿ ಸ್ಥಾಪಿಸಲ್ಪಟ್ಟ ಈ ಸಮಿತಿಯು ತನ್ನ 50 ವರ್ಷಗಳ ಸಾರ್ಥಕ ಪಯಣದ ಸಂಭ್ರಮದಲ್ಲಿದೆ.
ಫೆ. 28ಕ್ಕೆ ಸಮಿತಿಯ 50ನೇ ವಾರ್ಷಿಕ ಶ್ರೀ ಶನಿ ಮಹಾಪೂಜೆ ಮತ್ತು ಮಾ. 1ರಂದು ಸುವರ್ಣ ಮಹೋತ್ಸವ ಆಚರಣೆ, ಮುಂಬೈನ ಅಂಧೇರಿ (ಪಶ್ಚಿಮ) ವೀರಾ ದೇಸಾಯಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ ನಾರಾಯಣ ಮಂದಿರದಲ್ಲಿ ನಡೆಯಲಿದೆ.
ಸಮಿತಿಯ ಅಧ್ಯಕ್ಷರಾದ ರತ್ನಾಕರ ಬಿ. ಬಂಗೇರ, ಗೌರವ ಪ್ರಧಾನ ಕಾರ್ಯದರ್ಶಿ ಲೋಕನಾಥ ಪಿ. ಕಾಂಚನ್ ಹಾಗೂ ಗೌರವ ಕೋಶಾಧಿಕಾರಿ ಸದಾಶಿವ ಎನ್. ಸುವರ್ಣ ಅವರ ನೇತೃತ್ವದಲ್ಲಿ ಈ ಸಮಾರಂಭವು ಜರುಗಲಿದೆ. ಕಾರ್ಯಕ್ರಮದ ಭಾಗವಾಗಿ ನಡೆಯುವ ‘ಗ್ರಂಥ ಪಾರಾಯಣ’ದಲ್ಲಿ ವಾಚಕರಾಗಿ ಸಂಜೀವ ಸಿ. ಬಂಗೇರ, ವ್ಯಾಖ್ಯಾನಕಾರರಾಗಿ ಚಂದ್ರಶೇಖರ್ ಬಿ. ಬಂಗೇರ, ಅರ್ಚಕರಾಗಿ ಚಂದ್ರಶೇಖರ ಬಿ ಬಂಗೇರ, ಕೇಶವ ಬಂಗೇರ, ಹಾಗೂ ಭಜನಾ ಭುವಜಿಯಾಗಿ ಲೋಕನಾಥ ಪಿ. ಕಾಂಚನ್ ಅವರು ಪಾಲ್ಗೊಳ್ಳಲಿದ್ದಾರೆ.
ಸಮಿತಿಯ ಪದಾಧಿಕಾರಿಗಳು ಈ ಭಕ್ತಿಪೂರ್ವಕ ಕಾರ್ಯಕ್ರಮಕ್ಕೆ ಎಲ್ಲಾ ಸದ್ಧರ್ಮ ಪ್ರೇಮಿಗಳನ್ನು ಕುಟುಂಬ ಸಮೇತವಾಗಿ ಪ್ರೀತಿಯಿಂದ ಆಹ್ವಾನಿಸಿದ್ದಾರೆ.

ಕಾರ್ಯಕ್ರಮಗಳ ವಿವರ :

2026ರ ಫೆಬ್ರವರಿ 28ರ ಶನಿವಾರದಂದು ಬೆಳಿಗ್ಗೆ 10.00 ರಿಂದ 10.30 ರವರೆಗೆ ಕಲಶ ಮುಹೂರ್ತದೊಂದಿಗೆ ಪಾರಾಯಣ ಚಾಲನೆಗೊಳ್ಳಲಿದೆ. ತದನಂತರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ಗ್ರಂಥ ಪಾರಾಯಣ ನಡೆಯಲಿದ್ದು, ಮಧ್ಯಾಹ್ನ 12.30 ರಿಂದ 2.00 ರವರೆಗೆ ಸಾರ್ವಜನಿಕ ಅನ್ನಸಂತರ್ಪಣೆ ಇರಲಿದೆ. ಸಂಜೆ 3.30 ರಿಂದ 4.00 ರವರೆಗೆ ಭಜನೆ ಹಾಗೂ 4.00 ರಿಂದ 4.30 ರವರೆಗೆ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗದೊಂದಿಗೆ ಮೊದಲ ದಿನದ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿವೆ.

ಎರಡನೇ ದಿನವಾದ ಮಾರ್ಚ್ 1ರ ಭಾನುವಾರದಂದು ಬೆಳಿಗ್ಗೆ 9.00 ಗಂಟೆಯಿಂದ ವಿವಿಧ ಆಹ್ವಾನಿತ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮವು ಆರಂಭವಾಗಲಿದೆ. ಅಂದು ಮಧ್ಯಾಹ್ನ 12.30 ರಿಂದ 2.00 ರವರೆಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30 ರಿಂದ 5.30 ರವರೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ ನಡೆಯಲಿದ್ದು, ಸಂಜೆ 6.00 ಗಂಟೆಯ ನಂತರ ಕುಣಿತ ಭಜನೆ ನಡೆಯಲಿದೆ.

ಶ್ರೀ ಶನಿ ಮಹಾದೇವನಿಗೆ ವಿವಿಧ ಸೇವೆಗಳನ್ನು ಅರ್ಪಿಸಲು ಇಚ್ಛಿಸುವ ಭಕ್ತರಿಗಾಗಿ ಸಮಿತಿಯು ಅವಕಾಶ ಕಲ್ಪಿಸಿದೆ. ಅನ್ನಸಂತರ್ಪಣೆಗೆ 15,000 ರೂ., ಪ್ರಸಾದ ಸೇವೆಗೆ 2,500 ರೂ., ಹೂವಿನ ಅಲಂಕಾರಕ್ಕೆ 2,000 ರೂ. ಹಾಗೂ ಲೈಟಿಂಗ್ ಮತ್ತು ಸೌಂಡ್ ಸಿಸ್ಟಮ್ ಸೇವೆಗೆ 2,000 ರೂ. ನಿಗದಿಪಡಿಸಲಾಗಿದೆ. ಇದರೊಂದಿಗೆ ಎಳ್ಳೆಣ್ಣೆ ಸೇವೆಗೆ 201 ರೂ. ನೀಡಿ ಭಕ್ತರು ಪುನೀತರಾಗಬಹುದಾಗಿದೆ.



Related posts

ನ. 26, 27 ಕಾಪುವಿನ ಮೂರೂ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಜಾರ್ದೆ ಮಾರಿಪೂಜೆ

Mumbai News Desk

ಆಗಸ್ಟ್ 10 : ಬಿಲ್ಲವ ಘಾಟ್ಕೋಪರ್ ಹಾಗೂ ತುಳು ಕೂಟ ಅಸಲ್ಪಾ, ಇದರ ಆಶ್ರಯದಲ್ಲಿ ‘ಘಾಟ್ಕೋಪರ್ ದ ಆಟಿದ ಒಂಜಿ ದಿನ’

Mumbai News Desk

ಶ್ರೀ ಮಕ್ಕೆಕಟ್ಟು ಮೇಳ ಮತ್ತು ಶ್ರೀ ಹಟ್ಟಿಯಂಗಡಿ ಮೇಳದ ಪ್ರಮುಖ ಕಲಾವಿದರು ತಂಡ, ಜುಲೈ 9 ರಿಂದ 20 ರವರೆಗೆ  ಮಹಾನಗರದ ವಿವಿಧ ಉಪ ನಗರಗಳಲ್ಲಿ    ವೈಶಿಷ್ಟ್ಯ ಪೂರ್ಣವಾದ ಯಕ್ಷಗಾನ ಪ್ರದರ್ಶನ

Mumbai News Desk

  ಜ 22 :  ಪುಣೆ  ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ವತಿಯಿಂದ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ರಿಂದ  “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .

Mumbai News Desk

ಅವಧೂತ ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಧ್ಯಾನ ಮಂದಿರ ಪರೆಂಕಿಲ, ಶಿಮಂತೂರು : ಫೆ. 4ರಿಂದ 6, ನೂತನ ಶಿಲಾಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು, ಮೂಡಬಿದೆರೆ ಶತಮಾನೋತ್ಸವದ ಸಂಭ್ರಮದಲ್ಲಿ ನಮ್ಮ ಶಾಲೆ :

Mumbai News Desk