September 6, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ, ಕಲ್ಯಾಣ: ಮಾ.8 ರಂದು ಮಹಿಳಾ ದಿನಾಚರಣೆ






ಕಲ್ಯಾಣ(ಪ) : ಪ್ರತಿ ವರ್ಷದಂತೆ ಈ ವರ್ಷವೂ ಸಂಘದ ವಾರ್ಷಿಕ ಮಹಿಳಾ ದಿನಾಚರಣೆಯನ್ನು ಬರುವ 8 ಮಾರ್ಚ್ ರಂದು ಕಲ್ಯಾಣ(ಪ)ದ ಬ್ರಾಹ್ಮಣ ಸೊಸೈಟಿ ಸಭಾಗ್ರಹದಲ್ಲಿ ಸಂಜೆ 5ದ ರಿಂದ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ DMD Architect ಮಾಲಿಕರಾದ ಶ್ರೀಮತಿ ಶೈಲಜ ವೈದ್ಯರವರು ಹಾಗೂ ಗೌರವ ಅತಿಥಿಯಾಗಿ ಛಾಯಾಕಿರಣ ಪತ್ರಿಕೆಯ ಉಪ ಸಂಪಾದಕಿಯಾದ ಶ್ರೀಮತಿ ಶಾಲಿನಿ ಶೆಟ್ಟಿಯವರು ಆಗಮಿಸಲಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಈ ಸಂದರ್ಭದಲ್ಲಿ ಕಲ್ಯಾಣ ಡೊಂಬಿವಲಿ ಪರಿಸರದ ಸಮಾಜ ಸೇವಕಿ, ಮುಂಬೈ ಮಹಾನಗರ ಕನ್ನಡ ಸಂಘದ ಮಹಿಳಾಧ್ಯಕ್ಷೆಯಾದ ಶ್ರೀಮತಿ ವಿದ್ಯಾ ಸತೀಶ್ ಅಲಗೂರ್ ರವರನ್ನು ಸನ್ಮಾನಿಸಲಾಗುವುದು. ಈ ಸಂದರ್ಭದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ತಾವೆಲ್ಲರೂ ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ ಸಂಘದ ಅಧ್ಯಕ್ಷ ಶ್ರೀ ಜಯಂತ ದೇಶಮುಖ್, ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಗೋಪಾಲ ಹೆಗ್ಡೆ, ಮಹಿಳಾಧ್ಯಕ್ಷೆ ಶ್ರೀಮತಿ ವೀಣಾ ಕಾಮತ್ ಹಾಗೂ ಪೂರ್ವ ಅಧ್ಯಕ್ಷೆ ದರ್ಶನಾ ಸೋನ್ಕರ್ ರವರು ಸಂಘದ ಪರವಾಗಿ ವಿನಂತಿಸಿಕೊಂಡಿದ್ದಾರೆ.



Related posts

ಪದ್ಮಶಾಲಿ ಸಮಾಜ ಸೇವಾ ಸಂಘ,ಪದ್ಮಶಾಲಿ ಎಜ್ಯುಕೇಶನ್ ಸೊಸೈಟಿ, ಮಹಿಳಾ ಬಳಗ – ಸೆ. 15ಕ್ಕೆ ವಾರ್ಷಿಕ ಮಹಾಸಭೆ.

Mumbai News Desk

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.

Mumbai News Desk

ಬೊರಿವಿಲಿ ಶ್ರೀ ಮಹೀಷಮರ್ದಿನಿ ದೇವಸ್ಥಾನ ದಲ್ಲಿ ಶ್ರೀ ರಾಮ ಪ್ರತಿಷ್ಠಾ ಮಹೋತ್ಸವ

Mumbai News Desk

ಮಾ7:   ಒಕ್ಕಲಿಗರ ಸಂಘ ಮಹಾರಾಷ್ಟ್ರ, (ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪುಸ್ತಕ ವಿತರಣೆ,

Mumbai News Desk

ಕುಲಾಲ ಸಂಘ ಮುಂಬಯಿಯ ಕೇಂದ್ರ ಕಾರ್ಯಾಲಯದಲ್ಲಿ  ಗುರು ಪೂರ್ಣಿಮೆ ಆಚರಣೆ.

Mumbai News Desk

ಎ. 25-26 ರಂದು ಬೊರಿವಲಿ ಮಂಡಪೇಶ್ವರ ಗುಹೆಯ ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮ ಕಲಶೋತ್ಸವ

Mumbai News Desk