30.9 C
Mumbai
June 8, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ, ಕಲ್ಯಾಣ: ಮಾ.8 ರಂದು ಮಹಿಳಾ ದಿನಾಚರಣೆ






ಕಲ್ಯಾಣ(ಪ) : ಪ್ರತಿ ವರ್ಷದಂತೆ ಈ ವರ್ಷವೂ ಸಂಘದ ವಾರ್ಷಿಕ ಮಹಿಳಾ ದಿನಾಚರಣೆಯನ್ನು ಬರುವ 8 ಮಾರ್ಚ್ ರಂದು ಕಲ್ಯಾಣ(ಪ)ದ ಬ್ರಾಹ್ಮಣ ಸೊಸೈಟಿ ಸಭಾಗ್ರಹದಲ್ಲಿ ಸಂಜೆ 5ದ ರಿಂದ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ DMD Architect ಮಾಲಿಕರಾದ ಶ್ರೀಮತಿ ಶೈಲಜ ವೈದ್ಯರವರು ಹಾಗೂ ಗೌರವ ಅತಿಥಿಯಾಗಿ ಛಾಯಾಕಿರಣ ಪತ್ರಿಕೆಯ ಉಪ ಸಂಪಾದಕಿಯಾದ ಶ್ರೀಮತಿ ಶಾಲಿನಿ ಶೆಟ್ಟಿಯವರು ಆಗಮಿಸಲಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಈ ಸಂದರ್ಭದಲ್ಲಿ ಕಲ್ಯಾಣ ಡೊಂಬಿವಲಿ ಪರಿಸರದ ಸಮಾಜ ಸೇವಕಿ, ಮುಂಬೈ ಮಹಾನಗರ ಕನ್ನಡ ಸಂಘದ ಮಹಿಳಾಧ್ಯಕ್ಷೆಯಾದ ಶ್ರೀಮತಿ ವಿದ್ಯಾ ಸತೀಶ್ ಅಲಗೂರ್ ರವರನ್ನು ಸನ್ಮಾನಿಸಲಾಗುವುದು. ಈ ಸಂದರ್ಭದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ತಾವೆಲ್ಲರೂ ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ ಸಂಘದ ಅಧ್ಯಕ್ಷ ಶ್ರೀ ಜಯಂತ ದೇಶಮುಖ್, ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಗೋಪಾಲ ಹೆಗ್ಡೆ, ಮಹಿಳಾಧ್ಯಕ್ಷೆ ಶ್ರೀಮತಿ ವೀಣಾ ಕಾಮತ್ ಹಾಗೂ ಪೂರ್ವ ಅಧ್ಯಕ್ಷೆ ದರ್ಶನಾ ಸೋನ್ಕರ್ ರವರು ಸಂಘದ ಪರವಾಗಿ ವಿನಂತಿಸಿಕೊಂಡಿದ್ದಾರೆ.



Related posts

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ ಇದರ ಬೆಳ್ಳಿ ಹಬ್ಬದ ಸಲುವಾಗಿ ಜ.14 ರಂದು ಸಾರ್ವಜನಿಕ ಭಜನಾ ಕಾರ್ಯಕ್ರಮ

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ,  ಎ13 ; ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ,

Mumbai News Desk

ಡಿ. 29. ಕನಕದಾಸ ಜಯಂತಿ, ಕುವೆಂಪು ಜಯಂತಿ ಗೌರವಾರ್ಥ,ಕರ್ನಾಟಕ ರಾಜ್ಯೋತ್ಸವ ಸಂಭ್ರಮ – ಕರುನಾಡ ಡಿಂಡಿಮ – 2024.

Mumbai News Desk

ನ. 19 ರಂದು ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ಆರಂಗೇಟ್ರಂ

Mumbai News Desk

ಆ. 3 ರಿಂದ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯಲ್ಲಿಶರನ್ನವರಾತ್ರಿ ಮಹೋತ್ಸವ.

Mumbai News Desk

ಡೊಂಬಿವಲಿ: ಫೆ. 28ರಂದು ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ ಮತ್ತು ಭಜನಾ ಸ್ಪರ್ಧೆ

Mumbai News Desk