34 C
Mumbai
March 6, 2026
Mumbai News Kannada
ಮುಂಬಯಿ

ತುಳು ಸಂಘ ಬೊರಿವಲಿ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ





ತುಳು ನಾಡಿನ ಮಹಿಳೆಯರನ್ನು ಒಗ್ಗೂಡಿಸುವ ಕಾರ್ಯ ಪ್ರಶಂಸನೀಯ – ಕವಿತಾ ವೇದಪ್ರಕಾಶ್ ಶ್ರೀಯಾನ್

 ಮುಂಬಯಿ : ತುಳು ನಾಡಿನ ಸಂಸ್ಕೃತಿಯನ್ನು ಹೊರನಾಡಿನಲ್ಲಿ ಉಳಿಸಿ, ಇಲ್ಲಿರುವ ನಾಡಿನ ಮಹಿಳೆಯರನ್ನು ಅರಸಿನ ಕುಂಕುಮ ದಂತಹ ಕಾರ್ಯಕ್ರಮದ ಮೂಲಕ ಒಗ್ಗೂಡಿಸುತ್ತಿರುವ ತುಳು ಸಂಘ ಬೊರಿವಲಿ ಯನ್ನು ಅಭಿನಂದಿಸಬೇಕಾಗಿದೆ ಎಂದು ಉದ್ಯಮಿ, ದಿವ್ಯ ಲೋಜಿಸ್ಠಿಕ್ ಗ್ರೂಪ್ ನ ಕವಿತಾ ವೇದಪ್ರಕಾಶ್ ಶ್ರೀಯಾನ್ ಅಭಿಪ್ರಾಯ ಪಟ್ಟರು.

 ಫೆಬ್ರವರಿ  28 ರಂದು ಬೋರಿವಲಿ ಪಶ್ಚಿಮದ ಮ್ಹಾತ್ರೆ ಗಾರ್ಡನ್ಸ್ ಹಾಲ್ ನಲ್ಲಿ ತುಳು ಸಂಘ, ಬೋರಿವಲಿ ಇದರ ಮಹಿಳಾ ವಿಭಾಗದಿಂದ ಜರಗಿದ ಹಳದಿ ಕುಂಕುಮ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಮಾತನಾದುತ್ತಾ ಹಳದಿ ಕುಂಕುಮದ ಮಹತ್ವದ ಬಗ್ಗೆ ತಿಳಿಸಿ, ಮಹಿಳೆಯರ ಏಕತೆ, ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ವಿವರಿಸಿದರು.

ಸಂಘದ ಅಧ್ಯಕ್ಷರಾದ ಹರೀಶ್ ಮೈಂದನ್ ಮಾತನಾಡುತ್ತ ಸಂಘದ ಇತ್ತೀಚಿನ ಕಾರ್ಯಕ್ರಮಗಳು ಹಾಗೂ ಸಾಧನೆಗಳ ಮಾಹಿತಿಯಿತ್ತರು. ಮಹಿಳಾ ಅಧ್ಯಕ್ಷೆ  ಶೋಭಾ ಶೆಟ್ಟಿ ಅವರು ಮುಖ್ಯ ಅತಿಥಿ ಕವಿತಾ ವೇದಪ್ರಕಾಶ್ ಶ್ರೀಯಾನ್ ಅವರನ್ನು ಪರಿಚಯಿಸಿದರು. ಮಹಿಳಾ ಕಾರ್ಯದರ್ಶಿ ವಿಜಯಲಕ್ಷ್ಮಿ ದೇವಾಡಿಗ ಅವರು ಸ್ವಾಗತಿಸಿದರು. ಸಂಘದ ಜೊತೆ ಕಾರ್ಯದರ್ಶಿ ತಿಲ್ಲೋತ್ತಮಾ ವೈದ್ಯ ಸಂಘದ ಚಟುವಟಿಕೆಗಳ ಬಗ್ಗೆ ತಿಳಿಸಿದರು. 

ಮಹಿಷಮರ್ಧಿನಿ ಭಜನಾ ಮಂಡಳಿಯವರಿಂದ ಭಕ್ತಿಗೀತೆ ನಡೆಯಿತು.

 ಈ ಸಂದರ್ಭದಲ್ಲಿ 2026ರ ಎನ್‌ಪಿಎಲ್ ಪಂದ್ಯದಲ್ಲಿ ವಿಜೇತರಾದ ತುಳು ಯುವ ಕ್ರಿಕೆಟ್ ತಂಡದ ಸದಸ್ಯರನ್ನು ಸನ್ಮಾನಿಸಲಾಯಿತು. ತಂಡದ ನಾಯಕ ರೋಹಿತ್ ಪೂಜಾರಿ, ಆಕರ್ಷ್ ಪೂಜಾರಿ,

ಅಕ್ಷಯ್ ಸುವರ್ಣ, ಧೀರಜ್ ಶೆಟ್ಟಿ, ವಿಜಯ್ ಆಚಾರ್ಯ, ವಿಕಾಸ್ ಆಚಾರ್ಯ, ಹರ್ಷ ಸೋಲಂಕಿ ಮತ್ತು  ಸಚಿನ್ ಆಚಾರ್ಯ ಅವರನ್ನು ಗೌರವಿಸಲಾಯಿತು. ತಂಡಕ್ಕೆ ಬೆಂಬಲ ನೀಡಿದ ನ್ಯಾ. ರಾಘವ ಎಂ ಅವರಿಗೂ ಅಭಿನಂದನೆ ಸಲ್ಲಿಸಲಾಯಿತು.

ನಂತರ ಮಹಿಳೆಯರಿಂದ ಹಳದಿ ಕುಂಕುಮ ಕಾರ್ಯಕ್ರಮ ನೆರವೇರಿತು. ಚಂದ್ರಿಕಾ ಭಟ್ ಅವರ ತೀರ್ಪಿನಲ್ಲಿ ಪ್ರತಿಭಾ ಸ್ಪರ್ಧೆ ಆಯೋಜಿಸಲಾಯಿತು. ಬಹುಮಾನಗಳನ್ನು ಸರಸ್ವತಿ ರಾವ್ ಹಾಗೂ ಶೋಭಾ ಶೆಟ್ಟಿ ಪ್ರಾಯೋಜಿಸಿದರು.

ಸಂಘದ ಗೌರವ ಕೋಶಾಧಿಕಾರಿ ದಿವಾಕರ ಕರ್ಕೇರ ವಂದನಾರ್ಪಣೆ ಮಾಡಿದರು. 

ಸಂಘದ ಉಪಾಧ್ಯಕ್ಷ ರಜಿತ್ ಸುವರ್ಣ, ಮಾಜಿ ಅಧ್ಯಕ್ಷ ಪೇಟೆಮನೆ ಪ್ರಕಾಶ್ ಶೆಟ್ಟಿ, ರತಿ ಶಂಕರ್ ಶೆಟ್ಟಿ  ಕುಸುಮಾ ಶೆಟ್ಟಿ, ಟಿ.ವಿ. ಪೂಜಾರಿ, ಲಕ್ಷ್ಮಿ ದೇವಾಡಿಗ,  ಮಾಜಿ ಮಹಿಳಾ ಅಧ್ಯಕ್ಷೆ  ಹರಿಣಿ ಶೆಟ್ಟಿ, ಸುನಂದ ಶೆಟ್ಟಿ, ವೇದ ಶೆಟ್ಟಿ ಪ್ರಿಯಲಕ್ಷ್ಮಿ ಉಪ್ಪೊರ್ ವಸುದಾ ಪೈ ಜಯಂತಿ ಶೆಟ್ಟಿ, ಕಸ್ತೂರಿ ಶೆಟ್ಟಿ, ಜಯಂತಿ ಶೆಟ್ಟಿ, ಕೃಷ್ಣ ಸಾಲಿಯನ್, ಅಶೋಕ್ ಪೂಜಾರಿ, ಯಶವಂತ್ ಪೂಜಾರಿ, ಬಾಲಕೃಷ್ಣ ಬಂಗೇರ, ವಿಜಯಕುಮರ್ ಮೂಲ್ಕಿ, ಸಮಿತಿಯ ಮತ್ತು ಉಪಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ  ಉಪಸ್ಥಿತರಿದ್ದರು.

ಚಿತ್ರ / ವರದಿ : ಈಶ್ವರ ಎಂ. ಐಲ್



Related posts

ಹೊಸಬೆಟ್ಟು ಮೊಗವೀರ ಸಂಘ ಮುಂಬಯಿ,ಮಹಿಳಾ ವಿಭಾಗದ ವತಿಯಿಂದ ಆಟಿಡ್ ಒಂಜಿ ಕೂಟ

Mumbai News Desk

ಶ್ರೀ ರಜಕ ಸಂಘ (ಮುಂಬಯಿ) ವಸಾಯಿ ಪ್ರಾದೇಶಿಕ ವಲಯದಿಂದ 14ನೇ ವರ್ಷದ ಶಾರದಾ ಪೂಜೆ ವೈಭವ

Mumbai News Desk

ಪೇಜಾವರ ಮಠದಲ್ಲಿ ಮನಸೂರೆಗೊಂಡ ಪುತ್ತೂರು ನರಸಿಂಹ ನಾಯಕ್ ಭಕ್ತಿ ಸಂಗೀತ ಕಚೇರಿ

Mumbai News Desk

ವಸಯಿ ಕರ್ನಾಟಕ ಸಂಘ 38ನೇ ವಾರ್ಷಿಕೋತ್ಸವ ಸಂಭ್ರಮ ಸಾಧಕರಿಗೆ ಸನ್ಮಾನ, ನೃತ್ಯ ವೈಭವ, ನಾಟಕ

Mumbai News Desk

“ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜಿನಲ್ಲಿ ಎರಡು ದಿನ ಪಾರಿತೋಷಕ ವಿತರಣಾ ಸಮಾರಂಭ, ಅಧ್ಯಕ್ಷ ಶ್ರೀ ವಿ. ಎನ್ ಹೆಗಡೆ ಅವರಿಂದ ಕಾಲೇಜಿನ ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ”

Mumbai News Desk

ನವ ತರುಣ ಮಿತ್ರ ಮಂಡಳ (ರಿ.) ಮೀರಾ ಭಾಯಂದ‌ರ್ ಆಶ್ರಯದಲ್ಲಿ ಮೀರಾ ರೋಡ್ ನಲ್ಲಿ ಅಮ್ಮು.. ಆಮುಂಡರಾ..? ತುಳು ನಾಟಕ,

Mumbai News Desk