July 23, 2026
Mumbai News Kannada
ಪ್ರಕಟಣೆ

ಮಾ.7, ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಶ್ರೀ ಶನೀಶ್ವರ ಗ್ರಂಥ ಪಾರಾಯಣ.







ಭಾಯಂದರ್. ಮಾ.2: ಬಿಲ್ಲವರ ಅಸೋಸಿಯೇಶನ್ ಇದರ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಶ್ರೀ ಶನೀಶ್ವರ ಗ್ರಂಥ ಪಾರಾಯಣವು ಮಾ.7ರ ಶನಿವಾರ ಮಧ್ಯಾಹ್ನ ಗಂಟೆ 1ರಿಂದ ನಡೆಯಲಿದೆ.
ಈ ಧಾರ್ಮಿಕ ಕಾರ್ಯಕ್ರಮವು ಭಾಯಂದರ್ ಪೂರ್ವ, ಬಿ.ಪಿ.ರೋಡ್ ನಾಕಾದ ಭಾರತ್ ಬ್ಯಾಂಕ್ ಮೇಲ್ಗಡೆ ಇರುವ ಮಂಗಳಮೂರ್ತಿ ಹಾಲ್ ನಲ್ಲಿ ವೆಸ್ಟರ್ನ್ ಇಂಡಿಯಾ ಶನಿ ಮಹಾತ್ಮಾ ಸೇವಾ ಸಮಿತಿಯವರಿಂದ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಜರುಗಲಿದೆ.
ಅಂದು ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಅಧ್ಯಕ್ಷ ಹರೀಶ್ ಜಿ.ಅಮೀನ್ ಅವರಿಂದ ದೀಪ ಪ್ರಜ್ವಲನೆ ಯೊಂದಿಗೆ ಪೂಜಾ ಕಾರ್ಯಕ್ರಮವು ಆರಂಭಗೊಳ್ಳಲಿದೆ. ತದನಂತರ ಗಂಟೆ 1.30ಕ್ಕೆ ಕಲಶ ಪ್ರತಿಷ್ಠಾಪನೆಯಾಗಿ ಶನಿಗ್ರಂಥ ಪಾರಾಯಣ ನಡೆದು ಸಾಯಂಕಾಲ ಗಂಟೆ 7.30ಕ್ಕೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಮೀರಾಬಾಯಂದರ್ ಮಹಾನಗರ ಪಾಲಿಕೆಯ ನಗರಸೇವಕ ಗಣೇಶ್ ಶೆಟ್ಟಿಯವರ ವತಿಯಿಂದ ಅನ್ನಸಂತರ್ಪಣೆ ನಡೆಯಲಿದೆ.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸದ್ಭಕ್ತರಾದ ತಾವೆಲ್ಲರೂ ಬಂಧು ಮಿತ್ರರೊಂದಿಗೆ ಉಪಸ್ಥಿತರಿರಬೇಕಾಗಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಗೌರವಾಧ್ಯಕ್ಷ ಎಲ್.ವಿ.ಅಮೀನ್, ಗೌರವ ಕಾರ್ಯದರ್ಶಿ ಹರೀಶ್ ಜಿ.ಸಾಲ್ಯಾನ್, ಗೌರವ ಕೋಶಾಧಿಕಾರಿ ರವಿ ಎಸ್.ಸನಿಲ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಳಾ ಕೆ. ಕೋಟ್ಯಾನ್, ಕೇಂದ್ರ ಕಚೇರಿಯ ಪ್ರಭಾರಿ ಮೋಹನ್ ಸಿ.ಕೋಟ್ಯಾನ್, ಕೇಂದ್ರ ಕಚೇರಿಯ ಪ್ರತಿನಿಧಿ ಜಿ.ಕೆ.ಕೆಂಚನಕೆರೆ, ಧಾರ್ಮಿಕ ಮತ್ತು ಸಾಮಾಜಿಕ ಉಪಸಮಿತಿಯ ಅಧ್ಯಕ್ಷ ಧರ್ಮಪಾಲ್ ಜಿ.ಅಂಚನ್, ಕಾರ್ಯದರ್ಶಿ ಸದಾಶಿವ ವೈ.ಕೋಟ್ಯಾನ್, ಭಾಯಂದರ್ ಸ್ಥಳೀಯ ಕಚೇರಿಯ ಗೌರವಾಧ್ಯಕ್ಷ ಪ್ರಮೋದ್ ಕೆ.ಕೋಟ್ಯಾನ್, ಕಾರ್ಯಾಧ್ಯಕ್ಷ ಶೇಕರ್ ಆರ್.ಪೂಜಾರಿ, ಉಪಕಾರ್ಯಾಧ್ಯಕ್ಷರುಗಳಾದ ಸುಧಾಕರ್ ಜಿ.ಪೂಜಾರಿ, ಸತೀಶ್ ಜೆ.ಪೂಜಾರಿ , ಕಾರ್ಯದರ್ಶಿ ಜ್ಯೋತಿ ಆರ್.ಪೂಜಾರಿ, ಕೋಶಾಧಿಕಾರಿ ಹರೀಶ್ ಎಂ.ಸಾಲ್ಯಾನ್, ಜೊತೆ ಕಾರ್ಯದರ್ಶಿಗಳಾದ ಜಯಶ್ರೀ ಸಂತೋಷ್ ಕರ್ಕೇರ, ದೀಪಕ್ ಎಸ್.ಕರ್ಕೇರ, ಜೊತೆ ಕೋಶಾಧಿಕಾರಿ ಅಶೋಕ್ ಟಿ.ಪೂಜಾರಿ, ಅರ್ಚಕರಾದ ರಾಕೇಶ್ ಅಮೀನ್, ಬಾಲಕೃಷ್ಣ ಸುವರ್ಣ , ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಫೆಬ್ರವರಿ 1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ: ಸಾಮೂಹಿಕ ನೃತ್ಯ ಸ್ಪರ್ಧೆಗೆ ಆಹ್ವಾನ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಅಗಸ್ಟ್ 15 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ

Mumbai News Desk

ದೋಲ್ಗೊಟ್ಟು, ಕೆಲ್ಲಪುತ್ತಿಗೆ, ಶ್ರೀ ಧರ್ಮಶಾಸ್ತ ಭಕ್ತವೃಂದ,ಜ.11 ರಂದು 23ನೇ ಅಯ್ಯಪ್ಪ ಮಹಾಪೂಜೆ ಅನ್ನಸಂತರ್ಪಣೆ,

Mumbai News Desk

ಮಲಾಡ್: ಜ. 3ರಂದು ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಅಯ್ಯಪ್ಪ ಮಹಾಪೂಜೆ

Mumbai News Desk

ಉದ್ಯಾವರ ಶ್ರೀ ಭಗವತಿ ಕ್ಷೇತ್ರ ಮಂಜೇಶ್ವರ : ಡಿ. 14ರಿಂದ 17ರ ತನಕ ನಡಾವಳಿ ಮಹೋತ್ಸವ ಹಾಗೂ ಭೇಟಿ ಉತ್ಸವ

Mumbai News Desk

ಮಾ. 15, ತುಳು ಸಂಘ, ಬೋರಿವಲಿ 15ನೇ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ, ತುಳು ನಾಟಕ ಪ್ರದರ್ಶನ

Mumbai News Desk