July 23, 2026
Mumbai News Kannada
ಕರ್ನಾಟಕ

ಬೈಂದೂರು ಅಗ್ನಿಶಾಮಕ ಅಧಿಕಾರಿ ರಾಜೇಶ್ ಶೆಟ್ಟಿಯವರಿಗೆ ಮುಖ್ಯಮಂತ್ರಿ ಪದಕ







ಬೈಂದೂರು, ಮಾ.5.ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜೇಶ್ ಶೆಟ್ಟಿಯವರು ಪ್ರಸ್ತುತ ವರ್ಷದಲ್ಲಿ ಕೊಡಮಾಡಿದ ಮುಖ್ಯಮಂತ್ರಿಗಳ ಪದಕವನ್ನು ಫೆ.24ರಂದು ಬೆಂಗಳೂರಿನ ಆರ್.ಎ. ಮುಂಡ್ಕಾರ್ ಟ್ರೈನಿಂಗ್ ಸೆಂಟರಿನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಗೃಹಮಂತ್ರಿ ಜಿ.ಪರಮೇಶ್ವರ್ ರವರಿಂದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಗ್ನಿಶಾಮಕ ವಿಭಾಗದ ಡಿಜಿಪಿ ಪ್ರಶಾಂತ್ ಕುಮಾರ್ ಥಾಕುರ್, ಐಜಿಪಿ ಎಮ್.ನಂಜುಂಡ ಸ್ವಾಮಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜೇಶ್ ಶೆಟ್ಟಿಯವರು ಸುರತ್ಕಲ್ ಕಾಟಿಪಳ್ಳ ನಿವಾಸಿಯಾಗಿದ್ದು 1996ರಲ್ಲಿ ಅಗ್ನಿಶಾಮಕ ಇಲಾಖೆಯಲ್ಲಿ ಫಯರ್ಮೇನ್ ಆಗಿ ಸೇವೆಗೆ ಸೇರಿದ್ದರು. 2002ರಲ್ಲಿ ಅಗ್ನಿಶಾಮಕ ಚಾಲಕನಾಗಿ ಸೇವೆಯಲ್ಲಿ ಮುಂದುವರಿದು ಕದ್ರಿ, ಪಾಂಡೇಶ್ವರ, ಮೂಡುಬಿದಿರೆ, ಬೆಂಗಳೂರು , ಬಂಟ್ವಾಳದಲ್ಲಿ ಕಾರ್ಯ ನಿರತರಾಗಿ ಪ್ರಸ್ತುತ ಪದೋನ್ನತಿ ಗೊಂಡು ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರನ್ನು ಬೈಂದೂರು ಅಗ್ನಿಶಾಮಕ ಠಾಣೆಯ ಸರ್ವ ಸಿಬ್ಬಂದಿಗಳು, ಸಿವೈಸಿ ಕಾಟಿಪಳ್ಳ ಇದರ ಪದಾಧಿಕಾರಿಗಳು ಮತ್ತು ಸದಸ್ಯರು, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸಹಿತ ಅವರ ಅಪಾರ ಅಭಿಮಾನಿಗಳು ಅಭಿನಂದಿಸಿದ್ದಾರೆ.



Related posts

ಬೆಳಗಾವಿ : ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; ತಪ್ಪೊಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Mumbai News Desk

ಕರ್ನಾಟಕ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಿಜೆಪಿ

Mumbai News Desk

“ಸಹಕಾರ ರತ್ನ” ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಹಾಗೂ ಅಭಿವಂದನಾ ಕಾರ್ಯಕ್ರಮ

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನವಂಬರ್ 12ರವರೆಗೆ ಮಧ್ಯಂತರ ತಡೆ.

Mumbai News Desk

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 96% ಅಂಕ ಗಳಿಸಿ ಸಾಧನೆ ಮಾಡಿದ ಆಶ್ವಿ ಎಚ್. ಬಂಗೇರ

Mumbai News Desk

ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ

Mumbai News Desk