30.9 C
Mumbai
June 8, 2026
Mumbai News Kannada
ಪ್ರಕಟಣೆ

ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ, ಮಾ. 8ಕ್ಕೆ , ಸಮಾಜ ಕಲ್ಯಾಣ ಸಮಿತಿ ವತಿಯಿಂದ ಆರ್ಥಿಕ ಸಹಾಯದ ಅರ್ಜಿ ವಿತರಣೆ,





   ಮೀರಾ ರೋಡ್:  ಬಂಟರ ಸಂಘ ಮುಂಬಯಿ ಇದರ ಸಮಾಜ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಕೊಡಲ್ಪಡುವ ಧನ ಸಹಾಯವು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸಮಾಜದ ಬಂಟ ಬಂಧುಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು, ವಾರ್ಷಿಕ ವಿಧವಾ ವೇತನ, ಮತ್ತು ಮಾನಸಿಕ ಅಸ್ವಸ್ಥೆಯಲ್ಲಿರುವ ಯಾ ವಿಕಲಾಂಗ ಚೇತನರಿಗೆ ಆರ್ಥಿಕ ನೆರವು ವಿತರಣೆ ಕಾರ್ಯಕ್ರಮ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಹಾಗೂ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ್ ಶೆಟ್ಟಿಯವರ ನೇತೃತ್ವದಲ್ಲಿಜೂನ್ ತಿಂಗಳಲ್ಲಿ ನಡೆಯಲಿದೆ.

ಈ ಪ್ರಯುಕ್ತ ಅರ್ಜಿ ವಿತರಣೆಯು ಬಂಟರ ಸಂಘ ಮುಂಬಯಿ ಇದರ ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾ‌ರ್ ರವೀಂದ್ರ ಶೆಟ್ಟಿಯವರ ಸಮಕ್ಷಮದಲ್ಲಿ ಹಾಗೂ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಸಂಪತ್ ಶೆಟ್ಟಿ ಪಂಜದಗುತ್ತು ಇವರ ಮುಂದಾಳತ್ವದಲ್ಲಿ ಮಾ. 8ರ ರವಿವಾರದಂದು ಹೋಟೆಲ್ ಸ್ವಸ್ತಿಕ್, ಅಂಬರ್ ಪ್ಲಾಜಾ, ವಿಜಯ ಪಾರ್ಕ್ ಮೀರಾ ರೋಡ್ ಇಲ್ಲಿ ಸಂಜೆ ಗಂಟೆ 4 ರಿಂದ 6 ರ ತನಕ ನಡೆಯಲಿರುವುದು.

ಆ ಪ್ರಯುಕ್ತ ಇದರ ಪ್ರಯೋಜನವನ್ನು ಪಡೆಯಲಿಚ್ಚಿಸುವ ಸಮಾಜ ಬಾಂಧವರು ಸಮಯಕ್ಕೆ ಸರಿಯಾಗಿ ಹಾಜರಿದ್ದು ಸಹಾಯ ಧನ ವಿತರಣೆಯ ಲಾಭವನ್ನು ಪಡೆದುಕೊಳ್ಳಬಹುದು. ಅರ್ಜಿಯನ್ನು ಪಡೆಯಲಿಚ್ಛಿಸುವ ಸಮಾಜ ಬಾಂಧವರು ತಮ್ಮ ಗುರುತು ಪತ್ರ ,ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮನೆಯ ವಿದ್ಯುತ್ ಬಿಲ್ ಪ್ರತಿ, ಮಕ್ಕಳ ಇತ್ತೀಚಿನ ಶಾಲಾ ದಾಖಲೆ (ಮಾರ್ಕ್ಸ್ ಕಾರ್ಡ್), ಭಾವ ಚಿತ್ರ, ವಿಧವಾ ವೇತನ ಮತ್ತು ವಿಕಲಾಂಗ ಚೇತನದ ಲಾಭ ಪಡೆಯಲಿಚ್ಛಿಸುವ ಸಮಾಜ ಬಾಂಧವರು ಸಂಬಂಧ ಪಟ್ಟ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತೀಕರಿಸ ಬೇಕು. ಅರ್ಜಿ ಪಡೆಯಲಿಚ್ಚಿಸುವ ಅರ್ಜಿದಾರರು ಬಂಟರ ಸಂಘ ಮುಂಬಯಿ ಇದರ ಸದಸ್ಯತ್ವವನ್ನು ಹೊಂದಿರಬೇಕು. ಮಾತ್ರವಲ್ಲದೆ ಸದಸ್ಯತನದ ಪ್ರತಿಯನ್ನು ಅರ್ಜಿಯಲ್ಲಿ ಲಗತ್ತೀಕರಿಸ ತಕ್ಕದ್ದು, ಅರ್ಜಿಯನ್ನು ಕೇವಲ ವಿದ್ಯಾರ್ಥಿಗಳಿಗೆ, ವಿಧವೆಯರಿಗೆ, ವಿಕಲಾಂಗ ಚೇತನರಿಗೆ ಸ್ವತಃ ಯಾ ಅವರವರ ಮಾತಾ ಪಿತಾ ಯಾ ಪೋಷಕರಿಗೆ ಮಾತ್ರ ನೀಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಮೀರಾ-ಭಾಯಾಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ  ರವೀಂದ್ರ ಶೆಟ್ಟಿ ಕೊಟ್ಟಪಾಡಿಗುತ್ತು ( 9967325878), ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಸಂಪತ್ ಶೆಟ್ಟಿ ಪಂಜದಗುತ್ತು (. 9223481670), ಕಾರ್ಯಾದರ್ಶಿ ಕಿಶೋರ್ ಕುಮಾರ್ ಕುತ್ಯಾರ್ (ಮೊ. ನಂ. 9930090328),  ಸಂಚಾಲಕ ಶಿವಪ್ರಸಾದ್ ಶೆಟ್ಟಿ ಮಾಣಿ ಗುತ್ತು ( 9819040608), ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ವಸಂತಿ ಎಸ್ ಶೆಟ್ಟಿ (9892097549) ಇವರುಗಳನ್ನು ಸಂಪರ್ಕಿಸಬಹುದು.



Related posts

ಎ. 11, ವಿದ್ಯಾದಾಯಿನಿ ಸಭಾ ಮುಂಬಯಿ ಮತ್ತು ತುಳು ಧಾರ್ಮಿಕ ಸಂಶೋಧನಾ ಕೇಂದ್ರ ಪೇರೂರು ಇದರ ಜಂಟಿ ಆಯೋಜಕತ್ವದಲ್ಲಿ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ.

Mumbai News Desk

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk

ಜಗಜ್ಯೋತಿ ಕಲಾವೃಂದ ಮುಂಬಯಿ : ಫೆ. 9ರಂದು 38ನೇ ವಾರ್ಷಿಕೋತ್ಸವ, ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ಸಾಂತಾಕ್ರೂಸ್ :  ಶ್ರೀ ಮಂತ್ರ ದೇವಿ ದೇವಸ್ಥಾನದಲ್ಲಿ ಅ 3 ರಿಂದ 11 ವರೆಗೆ ನವರಾತ್ರಿ ಉತ್ಸವ.

Mumbai News Desk

ಅಗಸ್ಟ್ 23, ತುಲುವೆರ ಕಲ(ರಿ), ಸಂಸ್ಥೆಯ ಊರು ಮತ್ತು ಮುಂಬೈಯ ಜಂಟಿ ಆಯೋಜನೆಯಲ್ಲಿ ಬಂಟರ ಸಂಘ ಕುರ್ಲಾದ ಎನೆಕ್ಸ್ ಹಾಲ್‌ನಲ್ಲಿ ‘ತುಲುವೆರ ಮಿನದನ’ ಕಾರ್ಯಕ್ರಮ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬೈ ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. 

Mumbai News Desk