29.6 C
Mumbai
June 20, 2026
Mumbai News Kannada
ಸುದ್ದಿ

ಮುಂಬಯಿ: ನಾಪತ್ತೆಯಾಗಿದ್ದ ವಿರಾರ್ ನಿವಾಸಿ ನಿಶಾಂತ್ ಬಂಗೇರ ಪತ್ತೆ; ನಿಟ್ಟುಸಿರು ಬಿಟ್ಟ ಕುಟುಂಬ ಮತ್ತು ಸಮಾಜ ಬಾಂಧವರು





​ಮುಂಬಯಿ: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿ ತೀವ್ರ ಆತಂಕ ಸೃಷ್ಟಿಸಿದ್ದ ವಿರಾರ್ ನಿವಾಸಿ ನಿಶಾಂತ್ ಬಂಗೇರ ಅವರು ಇಂದು ಭಾನುವಾರ (ಮಾರ್ಚ್ 8) ಸುರಕ್ಷಿತವಾಗಿ ಪತ್ತೆಯಾಗಿದ್ದು, ಇದರೊಂದಿಗೆ ಅವರ ಹೆತ್ತವರ, ಸಂಬಂದಿಕರ ಮತ್ತು ಹಿತೈಷಿಗಳ ಏಳು ದಿನಗಳ ಸುದೀರ್ಘ ಕಾಯುವಿಕೆಗೆ ಸುಖಾಂತ್ಯ ಸಿಕ್ಕಂತಾಗಿದೆ.
​ವಿರಾರಿನ ನಿವಾಸಿಯಾಗಿರುವ ನಿಶಾಂತ್ ಬಂಗೇರ ಅವರು ಕಳೆದ ಮಾರ್ಚ್ 2ರ ಸೋಮವಾರ ಬೆಳಿಗ್ಗೆ 7:30ರ ಸುಮಾರಿಗೆ ಗೋರೆಗಾಂವ್ ರೈಲು ನಿಲ್ದಾಣದ ಬಳಿಯಿಂದ ಕಾಣೆಯಾಗಿದ್ದರು. ಅಂದಿನಿಂದ ಅವರ ಯಾವುದೇ ಸುಳಿವು ಸಿಗದೆ ಹೆತ್ತವರು, ಅವರ ತಂದೆ -ತಾಯಿಯ ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದರು. ಅವರ ಪತ್ತೆಗಾಗಿ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ, ಸ್ಥಳೀಯ ಸಮಿತಿಯ ಕಾರ್ಯಧ್ಯಕ್ಷ ಆನಂದ ಕುಲಾಲ್, ಸುಕುಮಾರ್ ಸಾಲ್ಯಾನ್, ಪತ್ರಕರ್ತ ದಿನೇಶ್ ಕುಲಾಲ್, ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಸುವರ್ಣ ಮತ್ತು ಸಿಬ್ಬಂದಿ ವರ್ಗ, ಬೊರಿವಲಿ ನಗರಸೇವಕ ಶಿವಶೆಟ್ಟಿ ಕಳೆದ ಒಂದು ವಾರದಿಂದ ಮುಂಬಯಿಯ ಮೂಲೆ ಮೂಲೆಯಲ್ಲಿ ವ್ಯಾಪಕ ಹುಡುಕಾಟ ನಡೆಸಿದ್ದರು. ಸೋಶಿಯಲ್ ಮೀಡಿಯಾ ಹಾಗೂ ಸಮಾಜದ ವಿವಿಧ ಸ್ತರಗಳ ಮೂಲಕ ಮಾಹಿತಿ ಕಲೆಹಾಕಲು ನಡೆಸಿದ ಸತತ ಪ್ರಯತ್ನ ಹಾಗೂ ದೈವಕೃಪೆಯಿಂದಾಗಿ ಇಂದು ಮಧ್ಯಾಹ್ನ ಮುಂಬಯಿ ಪಶ್ಚಿಮ ರೈಲ್ವೆಯ ಚರ್ನಿ ರೋಡ್ ನಿಲ್ದಾಣದಲ್ಲಿ ಅವರು ಪತ್ತೆಯಾಗಿದ್ದಾರೆ.
​ನಿಶಾಂತ್ ನಾಪತ್ತೆಯಾಗಲು ನಿಖರವಾದ ಕಾರಣಗಳು ಸದ್ಯಕ್ಕೆ ಬಹಿರಂಗಗೊಂಡಿಲ್ಲವಾದರೂ, ಮಗ ಸುಕ್ಷೇಮವಾಗಿ ಮರಳಿರುವ ಸಂಗತಿ ಹೆತ್ತವರ ಪಾಲಿಗೆ ದೊಡ್ಡ ಸಮಾಧಾನ ತಂದಿದೆ. ಸಮಾಜ ಬಾಂಧವರ ಮತ್ತು ಹಿತೈಷಿಗಳ ಶ್ರಮಕ್ಕೆ ಇದೀಗ ಫಲ ಸಿಕ್ಕಂತಾಗಿದ್ದು, ಕುಟುಂಬದಲ್ಲಿ ಮತ್ತೆ ಸಂತಸದ ವಾತಾವರಣ ನೆಲೆಸಿದೆ.



Related posts

ಜಗದಂಬ ಯುವ ವಿಭಾಗದ ವತಿಯಿಂದ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ.

Mumbai News Desk

ಇರಾನ್-ಅಮೆರಿಕ ಸಂಘರ್ಷ: ಶಾಂತಿ ಮಾತುಕತೆ ವಿಫಲ ಮತ್ತೆ ಯುದ್ಧದ ಅಂಚಿನಲ್ಲಿ ಮಧ್ಯಪ್ರಾಚ್ಯ

Mumbai News Desk

ಆರ್ಥಿಕ ಕ್ರಾಂತಿಯ ಹರಿಕಾರ, ಸಮಾಜ ಸೇವಕ ವರದ ಉಳ್ಳಾಲ್ ಅಸ್ತಂಗತ : ಮುಂಬೈನಲ್ಲಿ ಇಂದು ಅಂತ್ಯಕ್ರಿಯೆ

Mumbai News Desk

ಫರಂಗಿಪೇಟೆ : ನಾಪತ್ತೆಯಾದ ದಿಗಂತ್ 10 ದಿನಗಳ ಬಳಿಕ ಇಂದು (ಮಾ. 8) ಉಡುಪಿಯಲ್ಲಿ ಪತ್ತೆ

Mumbai News Desk

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

Mumbai News Desk

ವೃತ್ತಿಯಲ್ಲಿ ಇಂಜಿನಿಯರಿಂಗ್ ಪ್ರೊಫೆಸರ್, ಪ್ರವೃತ್ತಿಯಲ್ಲಿ ದೈವ ನರ್ತಕ: ಡಾ. ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿವಿ ಗೌರವ

Mumbai News Desk