31 C
Mumbai
September 18, 2026
Mumbai News Kannada
ತುಳುನಾಡು

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ





ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ವಿನಯ್ ಕುಮಾರ್ ಸೊರಕೆಯವರ ಆದೇಶದ ಮೇರೆಗೆ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್ ಅವರ ಶಿಫಾರಸ್ಸಿನಂತೆ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಅವರನ್ನು ನೇಮಕ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಕಾಪು ರಾಜೀವ ಭವನದಲ್ಲಿ ಸನ್ಮಾನ್ಯ ವಿನಯ್ ಕುಮಾರ್ ಸೊರಕೆ ಅವರು ಪ್ರಭೋದ್ ಚಂದ್ರ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ಸದಸ್ಯರಾದ ಸುಧೀರ್ ಎಸ್ ಕರ್ಕೇರ,ಸುಭಾಶ್ ಸಾಲ್ಯಾನ್, ಶೇಖರ್, ಯೋಗೀಶ್ ಹೆಜಮಾಡಿ ಉಪಸ್ಥಿತರಿದ್ದರು, ನೂತನವಾಗಿ ಆಯ್ಕೆಯಾದ ಪ್ರಭೋದ್ ಚಂದ್ರ ಅವರು ಪಕ್ಷವನ್ನು ಗ್ರಾಮೀಣ ಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಈ ನೇಮಕಾತಿಯ ಮೂಲಕ ಹೆಜಮಾಡಿ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಇನ್ನಷ್ಟು ಬಲವತ್ತಾಗಲಿ ಎಂದು ಹಾರೈಸಲಾಯಿತು.

​ಪ್ರಬೋದ್ ಚಂದ್ರ ಅವರು ಈ ಹಿಂದೆ ಡಿಸಿಸಿ ಬ್ಯಾಂಕ್‌ನಲ್ಲಿ ಉಡುಪಿ ಜಿಲ್ಲೆಯ ವಿವಿಧ ಶಾಖೆಗಳಲ್ಲಿ ಹಿರಿಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಉತ್ತಮ ಆಡಳಿತ ಮತ್ತು ಸೇವೆಯಿಂದ ಗುರುತಿಸಿಕೊಂಡಿದ್ದಾರೆ. ತಮ್ಮ ಕರ್ತವ್ಯದ ಮೂಲಕ ಸಾವಿರಾರು ಮಂದಿಯ, ಎಲ್ಲಾ ಜಾತಿ-ಧರ್ಮದ ಜನರ ಪ್ರೀತಿ ಹಾಗೂ ಗೌರವಕ್ಕೆ ಪಾತ್ರರಾಗಿದ್ದಾರೆ



Related posts

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ. ಮೂಲ್ಕಿ : ಆಗಸ್ಟ್ 17ರಂದು ಮೂಲ್ಕಿ ಸೀಮೆಯ ಭಕ್ತರ ಸಮಾಲೋಚನಾ ಸಭೆ

Mumbai News Desk

ಉಡುಪಿ: ವಿಶ್ವ ಗೀತಾ ಪರ್ಯಾಯದ ವೈಭವ; ಶ್ರೀಕೃಷ್ಣ ಮಠದಲ್ಲಿ 2 ಕೋಟಿ ರೂ. ವೆಚ್ಚದ ‘ಸ್ವರ್ಣ ಭಗವದ್ಗೀತೆ’ ಲೋಕಾರ್ಪಣೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.

Mumbai News Desk

ಹೆಜಮಾಡಿ ಬಿರುವೆರ್ ಬ್ರದರ್ಸ್ ನ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಪೂಜಾರಿ ಆಯ್ಕೆ.

Mumbai News Desk

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಲಕ್ಷದೀಪೋತ್ಸವ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ – ವಿಜೃಂಭಣೆಯಿಂದ ಜರಗಿದ ಗುರುಪೂರ್ಣಿಮ ಮಹೋತ್ಸವ.

Mumbai News Desk