28 C
Mumbai
September 18, 2026
Mumbai News Kannada
ಸುದ್ದಿ

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ನೇತೃತ್ವವದಲ್ಲಿ ದೀಪೋತ್ಸವ : ಮುಂಬೈಯ ನವೀನ್ ಶೆಟ್ಟಿ ತೋನ್ಸೆಗೆ ಗೌರವ





ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪವಿತ್ರ ಅಂಗಳದಲ್ಲಿ ಇತ್ತೀಚೆಗೆ ಭಕ್ತಿ ಮತ್ತು ಆಧ್ಯಾತ್ಮದ ಅಲೆ ಎದ್ದಿತು. ಗಣೇಶಪುರಿಯ ಪರಮ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ದಿವ್ಯ ನೇತೃತ್ವದಲ್ಲಿ ನಡೆದ ಪಾರಾಯಣ ಮತ್ತು ದೀಪೋತ್ಸವ ಕಾರ್ಯಕ್ರಮವು ನೆರೆದಿದ್ದ ಸಾವಿರಾರು ಭಕ್ತರ ಕಣ್ಮನ ಸೆಳೆಯಿತು. ಮಂದಿರದ ಪ್ರಾಂಗಣವು ಮಂತ್ರಘೋಷಗಳಿಂದ ಮೊಳಗುತ್ತಿದ್ದರೆ, ಸಾಲು ಸಾಲಾಗಿ ಬೆಳಗಿದ ಹಣತೆಗಳು ಅಯೋಧ್ಯೆಯ ಧರ್ಮದೀಪ್ತಿಯನ್ನು ಜಗತ್ತಿಗೆ ಸಾರುವಂತಿದ್ದವು.
ಈ ಶುಭ ಸಂದರ್ಭದಲ್ಲಿ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮುಲುಂಡು ನಿವಾಸಿ, ಖ್ಯಾತ ಉದ್ಯಮಿ ನವೀನ್ ಶೆಟ್ಟಿ ತೋನ್ಸೆ ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.

ಶ್ರೀ ಬಾಲಯೋಗಿ ಸದಾನಂದ ಸ್ವಾಮೀಜಿಯವರು ನವೀನ್ ಶೆಟ್ಟಿ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾಗಿ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಗಳಾದ ಚಂಪತ್ ರಾಯ್ ಜಿ ಅವರು ಉಪಸ್ಥಿತರಿದ್ದು, ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು. ಭಕ್ತರ ಸಮ್ಮುಖದಲ್ಲಿ ನಡೆದ ಈ ದೀಪೋತ್ಸವವು ಕೇವಲ ಒಂದು ಧಾರ್ಮಿಕ ವಿಧಿಯಾಗಿರದೆ, ಭಕ್ತಿ ಮತ್ತು ಸಮರ್ಪಣಾ ಭಾವದ ಮಹಾಸಂಗಮವಾಗಿ ಮೂಡಿಬಂತು.



Related posts

ಶ್ರೀ ಸಚ್ಚಿದಾನಂದ ಸರಸ್ವತೀ ಕೃಪಾಪೋಷಿತ ಯಕ್ಷಗಾನ ಮಂಡಳಿಯ 23 ನೆಯ ವಾರ್ಷಿಕೋತ್ಸವ

Mumbai News Desk

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿಯವರು ಆಯ್ಕೆ.

Mumbai News Desk

ಕುಲಾಲ ಸಂಘ ಮುಂಬಯಿಯ ಮುಖವಾಣಿ “ಅಮೂಲ್ಯ” ದ ಬೆಳ್ಳಿ ಹಬ್ಬ ಸಮಾರೋಪ . ವಿಶೇಷ ಸಂಚಿಕೆ ಲೋಕಾರ್ಪಣೆ.

Mumbai News Desk

ಮಹಾರಾಷ್ಟ್ರದಲ್ಲಿ ಈದ್ ಮಿಲಾದ್ ರಜೆ ಸೆ.16 ರ ಬದಲು ಸೆ. 18ಕ್ಕೆ.

Mumbai News Desk

ಅಂಬರ್‌ನಾಥ್‌ನ ಬಿಲ್ಡರ್ ಜಗದೀಶ್ ರಾಮ ಬಂಜನ್ ಅವರಿಗೆ ಲೋಕಮತ್ ಪ್ರಶಸ್ತಿ,

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.

Mumbai News Desk