28 C
Mumbai
September 18, 2026
Mumbai News Kannada
ಪ್ರಕಟಣೆ

ವಿದ್ಯಾವಿಹಾರ್ ದೇವಸ್ಥಾನದಲ್ಲಿ ನಾಳೆ (ಮಾರ್ಚ್ 15) ‘ಶ್ರೀ ರಾಮ ವನಗಮನ’ ತಾಳಮದ್ದಳೆ: ಇಬ್ಬರು ಹಿರಿಯ ಕಲಾವಿದರಿಗೆ ಸನ್ಮಾನ





ಮುಂಬಯಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ಮತ್ತು ಮುಂಬಯಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ 24 ಕಂತುಗಳ ‘ಶ್ರೀ ರಾಮ ಕಥಾ ಹೃದಯಂ’ ತಾಳಮದ್ದಳೆ ಸರಣಿಯ ಮೂರನೇ ಪ್ರಸ್ತುತಿಯು ನಾಳೆ ನಡೆಯಲಿದೆ.

​ದಿನಾಂಕ ಮಾರ್ಚ್ 15ರ ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ, ವಿದ್ಯಾವಿಹಾರ್ (ಪಶ್ಚಿಮ) ಗಾಮ್‌ದೇವಿ ಮಾರ್ಗದ ಶ್ರೀ ಅಂಬಿಕಾ ಆದಿನಾಥೇಶ್ವರ ಗಣಪತಿ ದೇವಸ್ಥಾನದಲ್ಲಿ ‘ಶ್ರೀ ರಾಮ ವನಗಮನ’ ಪ್ರಸಂಗದ ತಾಳಮದ್ದಳೆ ಆಯೋಜಿತವಾಗಿದೆ.

​ಪ್ರಭು ರಾಮಚಂದ್ರನ ಅವತಾರದಿಂದ ನಿರ್ಯಾಣದವರೆಗಿನ ಸಂಪೂರ್ಣ ರಾಮ ಚರಿತ್ರೆಯನ್ನು ಪುಣ್ಯಪ್ರದವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಸರಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಭಾಗವಾಗಿ, ಮುಂಬಯಿ ಯಕ್ಷಗಾನ ಕ್ಷೇತ್ರದಲ್ಲಿ ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಇಬ್ಬರು ಹಿರಿಯ ಕಲಾವಿದರನ್ನು ಅಂದು ವಿಶೇಷವಾಗಿ ಗೌರವಿಸಲಾಗುವುದು.

​ವೇದಮೂರ್ತಿ ಪೆರ್ಣಂಕಿಲ ಶ್ರೀ ಹರಿದಾಸ ಭಟ್ ಅವರ ಆಶಯದಂತೆ, ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು ಮತ್ತು ಭಕ್ತಾದಿಗಳು ಪಾಲ್ಗೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.



Related posts

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆ, ಮೇ 1ಕ್ಕೆ 90ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಕೋಟೆ, ನಾಲಾಸೋಪಾರ : ಫೆ. 1ರಿಂದ 81ನೇ ವಾರ್ಷಿಕ ಶನಿಮಹಾ ಪೂಜೆ ಮತ್ತು ಜಾತ್ರಾ ಮಹೋತ್ಸವ

Mumbai News Desk

ಜೋಗೇಶ್ವರಿ ಶ್ರೀ ಮಹಾಕಾಳಿ ಮಂದಿರ, ಜುಲೈ 8: ಬ್ರಹ್ಮಕಲಶೋತ್ಸವದ 10ನೇ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ

Mumbai News Desk

ಜು 27: ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ, ತುಳು ನಾಟಕ,

Mumbai News Desk

ಮೇ. 16: ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ,, ಕನ್ನಡ ಸಾಂಸ್ಕೃತಿಕ ಉತ್ಸವ : ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರಧಾನ

Mumbai News Desk

ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ (ರಿ.) ತೋನ್ಸೆ :ಜುಲೈ 5 ರಂದು “ಶ್ರೀ ಜಗನ್ನಾಥ ಕ್ಷೇತ್ರ ಮಹಿಮೆ” ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ

Mumbai News Desk