August 4, 2026
Mumbai News Kannada
ಕ್ರೀಡೆ

ಉದಯ ಶೆಟ್ಟಿ ನೇತೃತ್ವದಲ್ಲಿ ಹರಿಯಾಣದಲ್ಲಿ 5ನೇ ಮಾಸ್ಟರ್ಸ್ ರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್





ಮುಂಬಯಿ : ಹರಿಯಾಣ ರಾಜ್ಯದ ಲೋಹಾರು ನಗರದಲ್ಲಿ ನಡೆದ 5ನೇ ಮಾಸ್ಟರ್ಸ್ ರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ಯಶಸ್ವಿಯಾಗಿ ನಡೆಯಿತು. ಇಂಡಿಯನ್ ಮಾಸ್ಟರ್ಸ್  ವೈಟ್ ಲಿಫ್ಟಿಂನ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ 

ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದು ದೇಶದ ವಿವಿಧ ಭಾಗಗಳಿಂದ ಬಂದ ಸುಮಾರು 200ಕ್ಕೂ ಹೆಚ್ಚು ಪುರುಷ ಮತ್ತು ಮಹಿಳಾ ವೇಟ್‌ಲಿಫ್ಟರ್‌ಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧಾರ್ಥಿಗಳಿಗೆ ಸರಿಯಾದ ವಸತಿ ಮತ್ತು ಆಹಾರದ ವ್ಯವಸ್ಥೆಯನ್ನು ಒದಗಿಸಲಾಗಿದ್ದು, ಕಾರ್ಯಕ್ರಮವು ಅತ್ಯುತ್ತಮವಾಗಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಲೋಹಾರು ನಗರದ ಮಹಾಪೌರರು ನೆರವೇರಿಸಿದರೆ, ಸಮಾರೋಪ ಸಮಾರಂಭದಲ್ಲಿ ಉದಯ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಗ್ರೀಸ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್ ಹಾಗೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್‌ಗಾಗಿ ಆಟಗಾರರ ಆಯ್ಕೆ ಪ್ರಕ್ರಿಯೆಯನ್ನು ಆಯ್ಕೆ ಸಮಿತಿಯೊಂದಿಗೆ  ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಅವರ ಉಪಸ್ಥಿತಿಯಲ್ಲಿ  ನಡೆಸಲಾಯಿತು.

ಒಟ್ಟು ಪುರುಷರ ವಿಭಾಗದ ಚಾಂಪಿಯನ್‌ಶಿಪ್ ಪಟ್ಟವನ್ನು 6 ಚಿನ್ನದ ಪದಕಗಳನ್ನು ಗೆದ್ದ ಪಂಜಾಬ್ ತಂಡ ಪಡೆದರೆ, ಮಹಿಳಾ ವಿಭಾಗದ ಚಾಂಪಿಯನ್‌ಶಿಪ್ ಪಟ್ಟವನ್ನು ರಾಜಸ್ಥಾನ ತಂಡ ತನ್ನದಾಗಿಸಿಕೊಂಡಿತು.



Related posts

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ವಾರ್ಷಿಕ ಮಹಾಸಭೆ : ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಿ – ಲವ ಕರ್ಕೇರ.

Mumbai News Desk

ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್   ಲೀಗ್ ಕ್ರಿಕೆಟ್ ಟೂರ್ನಮೆಂಟ್ ಆರಂಭ.

Mumbai News Desk

ವರ್ಲ್ಡ್ ಮಾಸ್ಟರ್ಸ್ ಸ್ಪೋರ್ಟ್ಸ್ ಚಾಂಪಿಯನ್‌ಪ್; ಶುಭಾ ಗುಜರನ್ ಇವರಿಗೆ ಎರಡು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕ

Mumbai News Desk

ಸುರತ್ಕಲ್ ಬಂಟರ  ವಾರ್ಷಿಕ ಕ್ರೀಡಾಕೂಟ

Mumbai News Desk

ಮುಂಬೈ ಮ್ಯಾರಥಾನ್‌ನಲ್ಲಿ ವೈದ್ಯನ ‘ಗೋಲ್ಡನ್’ ಓಟ: ಆರ್ಥೋಪೆಡಿಕ್ ಸರ್ಜನ್ ಕಾರ್ತಿಕ್ ಕರ್ಕೇರಗೆ ಚಿನ್ನದ ಪದಕ

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿ: ವಿಜೃಂಭಣೆಯಿಂದ ಜರುಗಿದ 79ನೇ ವರ್ಷದ ಕಂಬಳೋತ್ಸವ

Mumbai News Desk