31 C
Mumbai
September 18, 2026
Mumbai News Kannada
ಕ್ರೀಡೆ

ಉದಯ ಶೆಟ್ಟಿ ನೇತೃತ್ವದಲ್ಲಿ ಹರಿಯಾಣದಲ್ಲಿ 5ನೇ ಮಾಸ್ಟರ್ಸ್ ರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್





ಮುಂಬಯಿ : ಹರಿಯಾಣ ರಾಜ್ಯದ ಲೋಹಾರು ನಗರದಲ್ಲಿ ನಡೆದ 5ನೇ ಮಾಸ್ಟರ್ಸ್ ರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ಯಶಸ್ವಿಯಾಗಿ ನಡೆಯಿತು. ಇಂಡಿಯನ್ ಮಾಸ್ಟರ್ಸ್  ವೈಟ್ ಲಿಫ್ಟಿಂನ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ 

ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದು ದೇಶದ ವಿವಿಧ ಭಾಗಗಳಿಂದ ಬಂದ ಸುಮಾರು 200ಕ್ಕೂ ಹೆಚ್ಚು ಪುರುಷ ಮತ್ತು ಮಹಿಳಾ ವೇಟ್‌ಲಿಫ್ಟರ್‌ಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧಾರ್ಥಿಗಳಿಗೆ ಸರಿಯಾದ ವಸತಿ ಮತ್ತು ಆಹಾರದ ವ್ಯವಸ್ಥೆಯನ್ನು ಒದಗಿಸಲಾಗಿದ್ದು, ಕಾರ್ಯಕ್ರಮವು ಅತ್ಯುತ್ತಮವಾಗಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಲೋಹಾರು ನಗರದ ಮಹಾಪೌರರು ನೆರವೇರಿಸಿದರೆ, ಸಮಾರೋಪ ಸಮಾರಂಭದಲ್ಲಿ ಉದಯ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಗ್ರೀಸ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್ ಹಾಗೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್‌ಗಾಗಿ ಆಟಗಾರರ ಆಯ್ಕೆ ಪ್ರಕ್ರಿಯೆಯನ್ನು ಆಯ್ಕೆ ಸಮಿತಿಯೊಂದಿಗೆ  ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಅವರ ಉಪಸ್ಥಿತಿಯಲ್ಲಿ  ನಡೆಸಲಾಯಿತು.

ಒಟ್ಟು ಪುರುಷರ ವಿಭಾಗದ ಚಾಂಪಿಯನ್‌ಶಿಪ್ ಪಟ್ಟವನ್ನು 6 ಚಿನ್ನದ ಪದಕಗಳನ್ನು ಗೆದ್ದ ಪಂಜಾಬ್ ತಂಡ ಪಡೆದರೆ, ಮಹಿಳಾ ವಿಭಾಗದ ಚಾಂಪಿಯನ್‌ಶಿಪ್ ಪಟ್ಟವನ್ನು ರಾಜಸ್ಥಾನ ತಂಡ ತನ್ನದಾಗಿಸಿಕೊಂಡಿತು.



Related posts

Jai Hind Sports Club Hosts 59th R. N. Utchil Memorial Athletics Meet

Mumbai News Desk

ಐತಿಹಾಸಿಕ ಜಯ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವನಿತೆಯರ ತಂಡಕ್ಕೆ ಭರ್ಜರಿ ಗೆಲುವು

Mumbai News Desk

ಬ್ಯಾಡ್ಮಿಂಟನ್ ಸಾಧಕಿ  ದಿಯಾ ಮನೋಜ್ ಶೆಟ್ಟಿ ಮಾಜಿ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗೌರವ

Mumbai News Desk

ರಾಜಸ್ತಾನ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಐತಿಹಾಸಿಕ ಐಪಿಎಲ್ ದಾಖಲೆ: ಲಕ್ನೋ ವಿರುದ್ಧ ರಾಜಸ್ತಾನಕ್ಕೆ ಭರ್ಜರಿ ಜಯ

Mumbai News Desk

ಮುಂಬೈ ಕುಲಾಲ ಸಂಘದಿಂದ ಅದ್ಧೂರಿ ‘ಕುಲಾಲ ಕ್ರೀಡೋತ್ಸವ-2026’

Mumbai News Desk

ಬಹುಮುಖ ಪ್ರತಿಭೆಯ ಬಾಲ ಪ್ರತಿಭೆ ಬೆಳ್ತಂಗಂಡಿಯ ಶ್ರೇಯಸ್ ಯೋಗೇಶ್ ಪೂಜಾರಿ.

Mumbai News Desk