28 C
Mumbai
August 23, 2026
Mumbai News Kannada
ಪ್ರಕಟಣೆ

ಡೊಂಬಿವಲಿ ಶ್ರೀ ಜಗದಂಬಾ ಮಂದಿರ: ಏಪ್ರಿಲ್ 4 ಮತ್ತು 5ರಂದು 11ನೇ ವಾರ್ಷಿಕ ಮಹೋತ್ಸವ





ಡೊಂಬಿವಲಿ: ಇಲ್ಲಿನ ನ್ಯೂ ದೇವೀಚಪಾಡಾ, ಜಗದಂಬಾ ರೋಡ್‌ನಲ್ಲಿರುವ ಶ್ರೀ ಜಗದಂಬಾ ಮಂದಿರದ (ರಿ.) 11ನೇ ವಾರ್ಷಿಕ ಮಹೋತ್ಸವ ಹಾಗೂ ಪಲ್ಲಕ್ಕಿ ಉತ್ಸವವು ಇದೇ ಏಪ್ರಿಲ್ 4 ಮತ್ತು 5ರಂದು ಸಡಗರದಿಂದ ಜರುಗಲಿದೆ.

​ಯಕ್ಷಕಲಾ ಸಂಸ್ಥೆಯ (ರಿ.) ಸ್ಥಾಪಕತ್ವದಲ್ಲಿ, ಶ್ರೀ ಜಗದಂಬಾ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಆಯೋಜಿಸಲಾಗಿರುವ ಈ ಮಹೋತ್ಸವವು ಸುಬ್ರಮಣ್ಯ ರಾವ್ ಅವರ ಸಾರಥ್ಯದಲ್ಲಿ ಹಾಗೂ ಮಂದಿರದ ಪ್ರಧಾನ ಅರ್ಚಕರಾದ ಶ್ರೀ ಜಗದೀಶ ಭಟ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಮಂದಿರದ ಆಡಳಿತ ಮಂಡಳಿ ತಿಳಿಸಿದೆ.

ಕಾರ್ಯಕ್ರಮದ ವಿವರ:

ಏಪ್ರಿಲ್ 4, ಶನಿವಾರ:

ಬೆಳಿಗ್ಗೆ 8:00 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ, ದೀಪ ಪ್ರಜ್ವಲನೆ ಹಾಗೂ ಪುಣ್ಯಾಹವಾಚನ ನಡೆಯಲಿದೆ. 8:30ಕ್ಕೆ ಗಣಪತಿ ಹೋಮ, 10:30ಕ್ಕೆ ಸಾಮೂಹಿಕ ಸತ್ಯನಾರಾಯಣ ಪೂಜೆ ಜರುಗಲಿದ್ದು, ಮಧ್ಯಾಹ್ನ 12:00ಕ್ಕೆ ಮಹಾಮಂಗಳಾರತಿ ನೆರವೇರಲಿದೆ. 12:30ರಿಂದ ಶ್ರೀ ಜಗದಂಬಾ ಮಂದಿರದ ಸದಸ್ಯರಿಂದ ಶನಿಪೂಜೆ ಹಾಗೂ ಶನಿಗ್ರಂಥ ಪಾರಾಯಣ ‘ಯಕ್ಷಗಾನ ತಾಳಮದ್ದಳೆ’ ರೂಪದಲ್ಲಿ ನಡೆಯಲಿದೆ. ಇದೇ ವೇಳೆ ಮಂಡಳಿಯ ಸದಸ್ಯರಾದ ಶ್ರೀ ಸುರೇಶ ಟಿ. ಅಂಚನ್ ಅವರಿಂದ ಕಲಶ ಪ್ರತಿಷ್ಠಾಪನೆ ನಡೆಯಲಿದ್ದು, ಮಧ್ಯಾಹ್ನ 1:00 ಗಂಟೆಗೆ ಪಲ್ಲಪೂಜೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಏಪ್ರಿಲ್ 5, ಆದಿತ್ಯವಾರ:

ಬೆಳಿಗ್ಗೆ 8:00 ಗಂಟೆಗೆ 25 ಕಲಶಗಳ ಆರಾಧನೆ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕ ಹಾಗೂ ಪರಿವಾರ ದೇವರಿಗೆ ನವಕಕಲಶ ಅಭಿಷೇಕ ನಡೆಯಲಿದೆ. ಬೆಳಿಗ್ಗೆ 10:00 ಗಂಟೆಗೆ ಶ್ರೀ ದೇವಿಯ ಬಲಿ ಮೂರ್ತಿಯ ಭವ್ಯ ಮೆರವಣಿಗೆಯು ಮಂದಿರದಿಂದ ಹೊರಟು ಗೋಪಿನಾಥ ಚೌಕಿನ ಹರಿ ಹರೇಶ್ವರ ಮಂದಿರದವರೆಗೆ ಸಾಗಿ, ನಂತರ ಉತ್ಸವ ಬಲಿ ಕಟ್ಟೆಪೂಜೆ ನೆರವೇರಲಿದೆ.

​ಮಧ್ಯಾಹ್ನ 12:00ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5:00 ಗಂಟೆಗೆ ಕುಂಕುಮಾರ್ಚನೆ ಮಹಾಪೂಜೆ, ರಂಗಪೂಜೆ ಹಾಗೂ ಪ್ರಸಾದ ವಿತರಣೆಯೊಂದಿಗೆ ಮಹೋತ್ಸವ ಸಂಪನ್ನಗೊಳ್ಳಲಿದೆ.

ವಿಶೇಷ ಸೂಚನೆ:

ಸಾಮೂಹಿಕ ಶನಿಪೂಜೆಯಲ್ಲಿ ಭಾಗವಹಿಸುವ ಭಕ್ತರು ರೂ. 301/- ಪಾವತಿಸಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಶನಿಪೂಜಾ ಸಮಿತಿ, ಯುವ ಹಾಗೂ ಮಹಿಳಾ ವಿಭಾಗದ ಸದಸ್ಯರು ಸರ್ವ ಭಕ್ತಾದಿಗಳನ್ನು ಈ ಧಾರ್ಮಿಕ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.



Related posts

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ,ಫೆ. 15ರಂದು, 26ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿಮಹಾಪೂಜೆ

Mumbai News Desk

ವಿದ್ಯಾವಿಹಾರ್ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಜೂನ್ 14ರಂದು ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ.

Mumbai News Desk

ಮೊಗವೀರ ಪ್ರೀಮಿಯರ್ ಲೀಗ್ (ಎಂಪಿಎಲ್) ಕ್ರಿಕೆಟ್ ಟೂರ್ನಮೆಂಟ್ – 2026ಕ್ಕೆ ಆಹ್ವಾನ

Mumbai News Desk

ಉಡುಪಿ : ನೇಜಾರು ಶ್ರೀ ಭಗವತೀ ತೀಯಾ ಯುವ ಘಟಕದಿಂದ ಮೇ 24 ರಂದು ಭವ್ಯ ‘ಯುವ ಸಮ್ಮಿಲನ’ ಕಾರ್ಯಕ್ರಮ

Mumbai News Desk

ಜ.5 ರಂದು ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಇದರ 11ನೇ ವರ್ಷದ ಅಯ್ಯಪ್ಪ ಸ್ವಾಮಿಯ ಪಡಿ ಪೂಜೆ ಮತ್ತು ಮಹಾಪೂಜೆ.

Mumbai News Desk

ಓಂ ಶ್ರೀ ಜಗದೀಶ್ವರಿ ದೇವಸ್ಥಾನ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬೊರಿವಲಿಜ.20ಕ್ಕೆ ಸುವರ್ಣ ಮಹೋತ್ಸವದ ನಿಮ್ಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ.

Mumbai News Desk