35 C
Mumbai
May 10, 2026
Mumbai News Kannada
ಪ್ರಕಟಣೆ

ಡೊಂಬಿವಲಿ ಶ್ರೀ ಜಗದಂಬಾ ಮಂದಿರ: ಏಪ್ರಿಲ್ 4 ಮತ್ತು 5ರಂದು 11ನೇ ವಾರ್ಷಿಕ ಮಹೋತ್ಸವ





ಡೊಂಬಿವಲಿ: ಇಲ್ಲಿನ ನ್ಯೂ ದೇವೀಚಪಾಡಾ, ಜಗದಂಬಾ ರೋಡ್‌ನಲ್ಲಿರುವ ಶ್ರೀ ಜಗದಂಬಾ ಮಂದಿರದ (ರಿ.) 11ನೇ ವಾರ್ಷಿಕ ಮಹೋತ್ಸವ ಹಾಗೂ ಪಲ್ಲಕ್ಕಿ ಉತ್ಸವವು ಇದೇ ಏಪ್ರಿಲ್ 4 ಮತ್ತು 5ರಂದು ಸಡಗರದಿಂದ ಜರುಗಲಿದೆ.

​ಯಕ್ಷಕಲಾ ಸಂಸ್ಥೆಯ (ರಿ.) ಸ್ಥಾಪಕತ್ವದಲ್ಲಿ, ಶ್ರೀ ಜಗದಂಬಾ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಆಯೋಜಿಸಲಾಗಿರುವ ಈ ಮಹೋತ್ಸವವು ಸುಬ್ರಮಣ್ಯ ರಾವ್ ಅವರ ಸಾರಥ್ಯದಲ್ಲಿ ಹಾಗೂ ಮಂದಿರದ ಪ್ರಧಾನ ಅರ್ಚಕರಾದ ಶ್ರೀ ಜಗದೀಶ ಭಟ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಮಂದಿರದ ಆಡಳಿತ ಮಂಡಳಿ ತಿಳಿಸಿದೆ.

ಕಾರ್ಯಕ್ರಮದ ವಿವರ:

ಏಪ್ರಿಲ್ 4, ಶನಿವಾರ:

ಬೆಳಿಗ್ಗೆ 8:00 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ, ದೀಪ ಪ್ರಜ್ವಲನೆ ಹಾಗೂ ಪುಣ್ಯಾಹವಾಚನ ನಡೆಯಲಿದೆ. 8:30ಕ್ಕೆ ಗಣಪತಿ ಹೋಮ, 10:30ಕ್ಕೆ ಸಾಮೂಹಿಕ ಸತ್ಯನಾರಾಯಣ ಪೂಜೆ ಜರುಗಲಿದ್ದು, ಮಧ್ಯಾಹ್ನ 12:00ಕ್ಕೆ ಮಹಾಮಂಗಳಾರತಿ ನೆರವೇರಲಿದೆ. 12:30ರಿಂದ ಶ್ರೀ ಜಗದಂಬಾ ಮಂದಿರದ ಸದಸ್ಯರಿಂದ ಶನಿಪೂಜೆ ಹಾಗೂ ಶನಿಗ್ರಂಥ ಪಾರಾಯಣ ‘ಯಕ್ಷಗಾನ ತಾಳಮದ್ದಳೆ’ ರೂಪದಲ್ಲಿ ನಡೆಯಲಿದೆ. ಇದೇ ವೇಳೆ ಮಂಡಳಿಯ ಸದಸ್ಯರಾದ ಶ್ರೀ ಸುರೇಶ ಟಿ. ಅಂಚನ್ ಅವರಿಂದ ಕಲಶ ಪ್ರತಿಷ್ಠಾಪನೆ ನಡೆಯಲಿದ್ದು, ಮಧ್ಯಾಹ್ನ 1:00 ಗಂಟೆಗೆ ಪಲ್ಲಪೂಜೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಏಪ್ರಿಲ್ 5, ಆದಿತ್ಯವಾರ:

ಬೆಳಿಗ್ಗೆ 8:00 ಗಂಟೆಗೆ 25 ಕಲಶಗಳ ಆರಾಧನೆ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕ ಹಾಗೂ ಪರಿವಾರ ದೇವರಿಗೆ ನವಕಕಲಶ ಅಭಿಷೇಕ ನಡೆಯಲಿದೆ. ಬೆಳಿಗ್ಗೆ 10:00 ಗಂಟೆಗೆ ಶ್ರೀ ದೇವಿಯ ಬಲಿ ಮೂರ್ತಿಯ ಭವ್ಯ ಮೆರವಣಿಗೆಯು ಮಂದಿರದಿಂದ ಹೊರಟು ಗೋಪಿನಾಥ ಚೌಕಿನ ಹರಿ ಹರೇಶ್ವರ ಮಂದಿರದವರೆಗೆ ಸಾಗಿ, ನಂತರ ಉತ್ಸವ ಬಲಿ ಕಟ್ಟೆಪೂಜೆ ನೆರವೇರಲಿದೆ.

​ಮಧ್ಯಾಹ್ನ 12:00ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5:00 ಗಂಟೆಗೆ ಕುಂಕುಮಾರ್ಚನೆ ಮಹಾಪೂಜೆ, ರಂಗಪೂಜೆ ಹಾಗೂ ಪ್ರಸಾದ ವಿತರಣೆಯೊಂದಿಗೆ ಮಹೋತ್ಸವ ಸಂಪನ್ನಗೊಳ್ಳಲಿದೆ.

ವಿಶೇಷ ಸೂಚನೆ:

ಸಾಮೂಹಿಕ ಶನಿಪೂಜೆಯಲ್ಲಿ ಭಾಗವಹಿಸುವ ಭಕ್ತರು ರೂ. 301/- ಪಾವತಿಸಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಶನಿಪೂಜಾ ಸಮಿತಿ, ಯುವ ಹಾಗೂ ಮಹಿಳಾ ವಿಭಾಗದ ಸದಸ್ಯರು ಸರ್ವ ಭಕ್ತಾದಿಗಳನ್ನು ಈ ಧಾರ್ಮಿಕ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.



Related posts

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಜೂಲೈ 21 ರಂದು ಬೊಯಿಸರ್ ನ  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  ಗುರುಪೂರ್ಣಿಮೆ ಆಚರಣೆ 

Mumbai News Desk

ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್. ಶನಿ ಕಥೆ ಪ್ರವಚನ ಮತ್ತು  ಗ್ರಂಥ ವಾಚನ ಶಿಕ್ಷಣ ತರಬೇತಿ – 

Mumbai News Desk

ಜ.6 ರಂದು ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಇದರ 38ನೇ ವರ್ಷದ ವಾರ್ಷಿಕ ಮಹಾಪೂಜೆ

Mumbai News Desk

ಸಾಂತಾಕ್ರೂಜ್ ಶ್ರೀ ಪೇಜಾವರ ಮಠದಲ್ಲಿಸೆ. 18ರಂದು ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಗೆ ಗುರುವಂದನೆ.

Mumbai News Desk

ಆಗಸ್ಟ್ 3ರಂದು ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ಥಾಣೆ, ಆಶ್ರಯದಲ್ಲಿ ಮಂದಾರ್ತಿ ಮೇಳದ ಕಲಾವಿದರಿಂದ “ಜಗನ್ಮಾತೆ ಶ್ರೀ ವನದುರ್ಗಿ” ಯಕ್ಷಗಾನ ಪ್ರದರ್ಶನ

Mumbai News Desk