30.9 C
Mumbai
June 8, 2026
Mumbai News Kannada
ಸುದ್ದಿ

ಬಂಟ್ವಾಳ : ತೆಂಕುತಿಟ್ಟು ಯಕ್ಷಗಾನದ ‘ದಶಾವತಾರಿ’ ಹಿರಿಯ ಕಲಾವಿದ, ಗೋವಿಂದ ಭಟ್‌ ಅಸ್ತಂಗತ





ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಆಟ-ಕೂಟಗಳ ಸರದಾರ, ಯಕ್ಷರಂಗದ ಸವ್ಯಸಾಚಿ ಸೂರಿಕುಮೇರು ಕೆ.ಗೋವಿಂದ ಭಟ್ (90) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ತಮ್ಮ ಹಿರಿಯ ಪುತ್ರನ‌ ನಿವಾಸದಲ್ಲಿ ನಿಧನ ಹೊಂದಿದರು. ಅವರು ಮೂವರು ಪುತ್ರರನ್ನು ಅಗಲಿದ್ದಾರೆ.

ಯಕ್ಷಗಾನ ಕ್ಷೇತ್ರದ ‘ನಡೆದಾಡುವ ವಿಶ್ವಕೋಶ’, ‘ದಶಾವತಾರಿ’ ಎಂದೇ ಖ್ಯಾತರಾಗಿದ್ದ ಗೋವಿಂದ ಭಟ್ ತೆಂಕುತಿಟ್ಟು ಯಕ್ಷಗಾನ ಇದುವರೆಗೆ ಕಂಡ ಸರ್ವಶ್ರೇಷ್ಠ ಕಲಾವಿದರು ಎನಿಸಿಕೊಂಡಿದ್ದರು. ಅವರು ಯಕ್ಷಗಾನ ಗುರುಗಳೂ ಆಗಿದ್ದರು.
ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 70 ವರ್ಷ ಸೇವೆ ಸಲ್ಲಿಸಿದ ಇವರು, ಧರ್ಮಸ್ಥಳ ಯಕ್ಷಗಾನ ಮೇಳದ ಪ್ರಮುಖ ಕಲಾವಿದರಾಗಿ, ಒಂದೇ ಮೇಳದಲ್ಲಿ 54 ವರ್ಷಗಳಿಗೂ ಹೆಚ್ಚು ಕಾಲ ತಿರುಗಾಟ ನಡೆಸಿ ದಾಖಲೆ ಮೆರೆದವರು. ಜೊತೆಗೆ ಮೂಲ್ಕಿ, ಕೂಡ್ಲು, ಸುರತ್ಕಲ್ (ಕೆಳಗಿನ ಮಾರಿಗುಡಿ) ಇರಾ ಸೋಮನಾಥೇಶ್ವರ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ.

ಮಣಿಮೇಖನೆ, ಕಾವೇರಿ ಮಹಾತ್ಮ, ಮೂರುವರೆ ವಜ್ರಗಳು, ರಾಜಶೇಖರ ವಿಲಾಸ, ಮಹಾವೀರ ಸಾಮ್ರಾಟ ಅಶೋಕ, ನಹುಷೇಂದ್ರ ಪ್ರಸಂಗಗಳನ್ನು ಅವರು ರಚಿಸಿದ್ದಾರೆ. ಗೋವಿಂದ ಭಟ್ ಅವರು ವಿಶೇಷವಾಗಿ ರಕ್ತಬೀಜ, ಇಂದ್ರಜಿತ್, ಭೀಷ್ಮ, ಕೌರವ ಮುಂತಾದ ನಾನಾ ಪಾತ್ರಗಳ ಮೂಲಕ ಮನೆಮಾತಾಗಿದ್ದಾರೆ.

ಛಂದೋಬದ್ಧವಾದ ಮಾತಿನ ಜತೆಗೆ ನೃತ್ಯದಲ್ಲೂ ಪ್ರಾವೀಣ್ಯ ಪಡೆದಿದ್ದರು. ಅವರಿಗೆ 2008ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2016ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತ್ ಪುರಸ್ಕಾರ, ಕರ್ನಾಟಕ ಜಾನಪದ ಅಕಾಡೆಮಿ ಸಾಧನಾ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಗೌರವ ಸನ್ಮಾನಗಳು ದೊರೆತಿವೆ.



Related posts

ಶಬರಿಮಲೆ ಯಾತ್ರೆಗೆ ನವೆಂಬರ್ 1ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

Mumbai News Desk

ಹೋಟೆಲ್ ಎಸಿ ಸ್ಫೋಟ, ತಾರಾನಾಥ ವಿ ಬಂಜನ್ ಮೃತ್ಯು: ಮಾನವೀಯತೆ ಮೆರೆದ ಉದ್ಯಮಿ ಎನ್ ಟಿ ಪೂಜಾರಿ.

Mumbai News Desk

ಮುಂಬಯಿಯಲ್ಲಿ ಜರಗಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥರ ಜನ್ಮವರ್ದಂತಿ ಬಗ್ಗೆ ಪೂರ್ವಭಾವಿ ಸಭೆ.

Mumbai News Desk

ಲೇಖಕ,ಪ್ರಸಿದ್ಧ ರಂಗ ನಟ   ಸುಂದರ ಮೂಡಬಿದ್ರಿ ಯವರಿಗೆಅಮೂಲ್ಯ   ಪತ್ರಿಕೆ ಯ  ಬೆಳ್ಳಿ ಹಬ್ಬದ ವಿಶೇಷ  ಸನ್ಮಾನ

Mumbai News Desk

ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ” ಬಂಟರ ಮಹಾಸಮಾಗಮ

Mumbai News Desk

ಶ್ರದ್ಧಾಂಜಲಿ: ದಿನೇಶ್ ಆನಂದ್ ಹೆಗ್ಡೆ ಅವರ ನಿಧನ

Mumbai News Desk