July 23, 2026
Mumbai News Kannada
ಪ್ರಕಟಣೆ

ಮುಂಬಯಿ: ವಡಾಲಾ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಇಂದು (ಮಾ. 22) ಶ್ರೀ ಮಹಾವೀರ ಕಾಲೇಜು ಹಳೆಯ ವಿದ್ಯಾರ್ಥಿಗಳ ವಿಶೇಷ ಸ್ನೇಹ ಮಿಲನ







ಮುಂಬಯಿಯ ವಡಾಲಾ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಶ್ರೀ ಮಹಾವೀರ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಹಾಗೂ ವಜ್ರ ಮಹೋತ್ಸವ ಸಂಘಟನಾ ಸಮಿತಿಯ ವಿಶೇಷ ಸ್ನೇಹ ಮಿಲನ ಕಾರ್ಯಕ್ರಮವು ಇಂದು ಸಂಜೆ 4ಗಂಟೆಗೆ ಜರುಗಲಿದೆ. ಹಳೆಯ ನೆನಪುಗಳನ್ನು ಮೆಲುಕು ಹಾಕುವ ಮತ್ತು ಬಾಂಧವ್ಯವನ್ನು ಮರುಸ್ಥಾಪಿಸುವ ಉದ್ದೇಶದಿಂದ ಹಾಗೂ 2026ರ ಏಪ್ರಿಲ್ ನಲ್ಲಿ ನಡೆಯಲಿರುವ ವಜ್ರ ಮಹೋತ್ಸವದ ಸಿದ್ಧತೆ ಬಗ್ಗೆ ಚರ್ಚಿಸಲು ಆಯೋಜಿಸಲಾಗಿರುವ ಈ ಸಮಾವೇಶದಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಹಾಗೂ ವಜ್ರ ಮಹೋತ್ಸವ ಸಂಘಟನಾ ಸಮಿತಿಯ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಸುಚರಿತ ಶೆಟ್ಟಿ, ಪ್ರೊ. ಹರೀಶ್, ನಿರಂಜನ್ ರಾವ್ ಹಾಗೂ ಹರಿಪ್ರಸಾದ್ ನಾಯಕ್ ಅವರು ಉಪಸ್ಥಿತರಿರಲಿದ್ದಾರೆ. ಸಂಘಟನಾ ತಂಡದ ಪ್ರಮುಖರಾದ ಮೋಹನ್‌ದಾಸ್ ಶೆಟ್ಟಿ, ಸತೀಶ್ ಬಂಗೇರ ಹಾಗೂ ಮೋಹನ್ ಸುವರ್ಣ ಅವರ ನೇತೃತ್ವದಲ್ಲಿ ಕಾರ್ಯಕ್ರಮವು ಆಯೋಜನೆಗೊಂಡಿದ್ದು, ಇಂದು ಸಂಜೆ 4:00 ರಿಂದ 7:00 ರವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಮಹಾವೀರ ಕಾಲೇಜ್ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವಂತ್ತೆ ಆಯೋಜಕರು ವಿನಂತಿಸಿದ್ದಾರೆ.



Related posts

ಅ.10 ; ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಸಾಂಸ್ಕೃತಿಕ ವೈಭವ, ಯಕ್ಷಗಾನ ತಾಳಮದ್ದಳೆ, ಸನ್ಮಾನ.

Mumbai News Desk

ಜ.21 ರಂದು ವಸಾಯಿ ತಾಲೂಕು ಮೊಗವೀರ ಸಂಘ, ತುಳು-ಕನ್ನಡಿಗರಿಗಾಗಿ ವಾಲಿಬಾಲ್, ತ್ರೋಬಾಲ್ ಪಂದ್ಯಾಟ

Mumbai News Desk

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆ ಪೆ 23 ರಂದು 12ನೇ ವಾರ್ಷಿಕ ಮಹಾಪೂಜೆ

Mumbai News Desk

ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗ, ಪೆ 18ರಂದು   ಅರಶಿನ ಕುಂಕುಮ

Mumbai News Desk

ಮಾ.15 ರಂದು ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk