July 23, 2026
Mumbai News Kannada
ಪ್ರಕಟಣೆ

ಕುಲಾಲ ಸಂಘ ಮುಂಬಯಿ: ಮಾರ್ಚ್ 28ರಂದು ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಸತ್ಯನಾರಾಯಣ ಪೂಜೆ ಮತ್ತು 150ನೇ ತಿಂಗಳ ಭಜನಾ ಸಂಕೀರ್ತನೆ







ನವಿ ಮುಂಬಯಿ: ಕುಲಾಲ ಸಂಘ ಮುಂಬಯಿಯ ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, 150ನೇ ತಿಂಗಳ ಭಜನಾ ಸಂಕೀರ್ತನೆ, ಮಂಗಳಾರತಿ ಮತ್ತು ಹಳದಿ ಕುಂಕುಮ ಕಾರ್ಯಕ್ರಮವು ಮಾರ್ಚ್ 28ರಂದು ಶನಿವಾರ ಸಂಜೆ 2:30 ರಿಂದ ಖರ್ಘರ್‌ನ ಸೆಕ್ಟರ್-7, ಪ್ಲಾಟ್ ನಂಬರ್ 15 ಮತ್ತು 17ರಲ್ಲಿರುವ ಪಟೇಲ್ ಹೆರಿಟೇಜ್ ಸೊಸೈಟಿ ಹಾಲ್‌ನಲ್ಲಿ ನಡೆಯಲಿದೆ.

​ಶ್ರೀ ಸತ್ಯನಾರಾಯಣ ಪೂಜೆ ಮತ್ತು ಭಜನಾ ಸಂಕೀರ್ತನೆಯ ನಂತರ ನಡೆಯಲಿರುವ ಸಭಾ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ರಘು ಮೂಲ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಮುಖ್ಯ ಅತಿಥಿಗಳಾಗಿ ಸಾನ್ಪಾಡದ ನಗರ ಸೇವಕಿ ಶೈಲಾ ಜೆ. ಕುಲಾಲ್ (ಪಾಟೀಲ್) ಮತ್ತು ನೆರೂಲ್ ಶ್ರೀ ಶನಿ ಮಂದಿರದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸರೋಜಿನಿ ಜೆ. ಪೂಜಾರಿ ಆಗಮಿಸಲಿದ್ದಾರೆ.

​ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ದೇವದಾಸ್ ಕುಲಾಲ್, ನವಿ ಮುಂಬಯಿ ಕಾರ್ಯಾಧ್ಯಕ್ಷರಾದ ಸದಾನಂದ ಕುಲಾಲ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತಾ ಬಂಜನ್, ನವಿ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಬೇಬಿ ಬಂಗೇರ ಉಪಸ್ಥಿತರಿರುವರು.

​ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಸಂಘದ ಉಪಾಧ್ಯಕ್ಷ ಡಿ. ಐ. ಮೂಲ್ಯ, ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ್ ಸಾಲಿಯಾನ್, ಗೌರವ ಪ್ರಧಾನ ಕೋಶಾಧಿಕಾರಿ ಜಯ ಅಂಚನ್, ಆಧ್ಯಾತ್ಮಿಕ ಸಮಿತಿಯ ಕಾರ್ಯಾಧ್ಯಕ್ಷ ಸುಂದರ ಮೂಲ್ಯ, ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷರಾದ ಕೃಪೇಶ್ ಕುಲಾಲ್, ಪ್ರಸಾದ್ ಮೂಲ್ಯ, ಸಿ.ಎ. ಅಕ್ಷತ್ ಮೂಲ್ಯ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಶೋಭಾ ಎನ್. ಬಂಗೇರ, ಕಾರ್ಯದರ್ಶಿ ಉಷಾ ಆರ್. ಮೂಲ್ಯ, ಕೋಶಾಧಿಕಾರಿ ಪ್ರೇಮಾ ಮೂಲ್ಯ ಮತ್ತು ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಉಪ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಜ‌ 5, ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ, 42 ವರ್ಷದ ಮಹಾಪೂಜೆ ಇರುಮುಡಿ ಸೇವೆ

Mumbai News Desk

ಆಗಸ್ಟ್ 10 ರಂದು ಡೊಂಬಿವಲಿಯಲ್ಲಿ ‘ಚತುರ್ಜನ್ಮ ಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk

ಎ. 12 ರಿಂದ 18 ರ ವರಗೆ ಶ್ರೀ ಕ್ಷೇತ್ರ ಉಂಡಾರು ಶ್ರೀವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ವಾರ್ಷಿಕ ಉತ್ಸವ.

Mumbai News Desk

ಶ್ರೀ ಮಹಾ ವಿಷ್ಣು ಮಂದಿರ – ಡೊಂಬಿವಲಿ, ತಾ.25 ಮತ್ತು 26 ನವೆಂಬರ್ ರಂದು ವಾರ್ಷಿಕ ಭಜನಾ ಮಂಗಲೋತ್ಸವ ಮತ್ತು ಏಕಾಹ ಭಜನಾ ಕಾರ್ಯಕ್ರಮ.

Mumbai News Desk

ಜ 22: ಯಕ್ಷ ಪ್ರಿಯ ಬಳಗ ಮೀರಾ ಭಯಂದರ್ ಇದರ ವತಿಯಿಂದ* ಶ್ರೀ ರಾಮ*  ಯಕ್ಷಗಾನ

Mumbai News Desk

ಫೆ.3 ರಂದು ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk