ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯ ವತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು 2026ರ ಮಾರ್ಚ್ 28ನೇ ಶನಿವಾರದಂದು ಮುಂಬೈನ ಅಂಧೇರಿ ಪೂರ್ವ ಸಾಕಿನಾಕಾದ ಸಾಕಿ ವಿಹಾರ್ ರಸ್ತೆಯಲ್ಲಿರುವ ಪ್ರಾಣಿಕ್ ಚೇಂಬರ್ಸ್ನ ಬ್ಯಾಂಕ್ ಶಾಖೆಯಲ್ಲಿ ಜರಗಲಿದೆ.
ಅಂದು ಬೆಳಿಗ್ಗೆ 9:30ರಿಂದ 11:00 ಗಂಟೆಯವರೆಗೆ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಲಿದ್ದು, ನಂತರ 11:00ರಿಂದ ಮಧ್ಯಾಹ್ನ 12:30ರವರೆಗೆ ಸಿಬ್ಬಂದಿ ವರ್ಗದವರಿಂದ ಭಜನಾ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ 12:30ರಿಂದ ಪ್ರಸಾದ ವಿನಿಯೋಗ ಆರಂಭವಾಗಲಿದ್ದು, ಮಧ್ಯಾಹ್ನ 1:30ರವರೆಗೆ ಮಹಾ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.
ಭಕ್ತಾಭಿಮಾನಿಗಳು ಕುಟುಂಬ ಸಮೇತರಾಗಿ ಶ್ರೀ ಸತ್ಯ ನಾರಾಯಣ ಪೂಜೆಯಲ್ಲಿ ಪಾಲ್ಗೊಳ್ಳುವಂತೆ
ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯ ಪರವಾಗಿ ಅಧ್ಯಕ್ಷರಾದ ದಿನೇಶ್ ಕೋಟ್ಯಾನ್, ಕಾರ್ಯದರ್ಶಿ ಪ್ರಮೋದ್ ಪುತ್ರನ್ ಮತ್ತು ಕೋಶಾಧಿಕಾರಿ ಅನಿಕೇತ್ ಕರ್ಕೇರ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಪ್ರಕಟಣೆ ಮೂಲಕ ಕೇಳಿಕೊಂಡಿದ್ದಾರೆ.




