30.9 C
Mumbai
June 8, 2026
Mumbai News Kannada
ಸುದ್ದಿ

ರಾಷ್ಟ್ರೀಯ ಫುಟ್ಬಾಲ್ ಆಟಗಾರ ರವೀಂದ್ರನಾಥ ಶೆಟ್ಟಿ ನಿಧನ





ಮಂಗಳೂರು, ಮಾ. 27: ಮುಂಬೈ ಕ್ರೀಡಾ ಕ್ಷೇತ್ರದಲ್ಲಿ ಕನ್ನಡಿಗರಲ್ಲಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಆಟಗಾರರಾಗಿ ಗುರುತಿಸಿಕೊಂಡಿದ್ದ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಶೆಟ್ಟಿ (73) ಅವರು ಮಾರ್ಚ್ 27ರಂದು ಮಂಗಳೂರಿನ ಕದ್ರಿ ನಿವಾಸದಲ್ಲಿ ನಿಧನರಾದರು.

​ಅವರು ಕೆಮ್ತೂರು ಮೇಲ್ಮನೆ ಪಟೇಲ್ ಶಾಮರಾಯ ಶೆಟ್ಟಿ ಮತ್ತು ಮುಂಡ್ಕೂರು ದೊಡ್ಡಮನೆ ಸರೋಜಿನಿ ಶೆಟ್ಟಿ ದಂಪತಿಯ ಪುತ್ರರಾಗಿದ್ದರು. ಇವರು ಮಂಗಳೂರು ಬಂಟರ ಸಂಘದ ಮಾಜಿ ಕೋಶಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

​ಮೃತರು ಪತ್ನಿ ವೀಣಾ ಶೆಟ್ಟಿ, ಮೂವರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರು ಕಾಂದಿವಳಿ ಪಶ್ಚಿಮದ ಡ್ರೀಮ್ ಪ್ಯಾಲೇಸ್ ಹೋಟೆಲ್ ಮಾಲೀಕರಾದ ಸತೀಶ್ ಶೆಟ್ಟಿ ಅವರ ಭಾವರಾಗಿದ್ದರು.

ಕ್ರೀಡಾ ಸಾಧನೆ:

ರವೀಂದ್ರನಾಥ ಶೆಟ್ಟಿ ಅವರು ತಮ್ಮ ಪ್ರತಿಭೆಯಿಂದ ಮುಂಬೈಯ ಯೂನಿಯನ್ ಬ್ಯಾಂಕ್‌ನಲ್ಲಿ ಉದ್ಯೋಗಕ್ಕೆ ಸೇರಿದರು. ಮಹಾರಾಷ್ಟ್ರ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಫುಟ್ಬಾಲ್ ಆಡುವ ಮೂಲಕ ರಾಜ್ಯ ಹಾಗೂ ಬ್ಯಾಂಕನ್ನು ಪ್ರತಿನಿಧಿಸಿದ್ದರು. ಅವರು ಕೇವಲ ಉತ್ತಮ ಆಟಗಾರರಲ್ಲದೆ, ಸಮರ್ಥ ಆಡಳಿತಗಾರ, ತರಬೇತುದಾರ ಮತ್ತು ಅನೇಕ ಕ್ರೀಡಾಪಟುಗಳಿಗೆ ಮಾರ್ಗದರ್ಶಕರಾಗಿದ್ದರು.

​ಅವರ ಮಾರ್ಗದರ್ಶನದಲ್ಲಿ ನೂರಾರು ಕ್ರೀಡಾಪಟುಗಳು ಯೂನಿಯನ್ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆದು ತಮ್ಮ ವೃತ್ತಿಜೀವನವನ್ನು ರೂಪಿಸಿಕೊಂಡಿದ್ದಾರೆ. ಅವರಿಂದ ತರಬೇತಿ ಪಡೆದ ಹಲವರು ಮಹಾರಾಷ್ಟ್ರ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಕ್ರೀಡಾ ಕ್ಷೇತ್ರಕ್ಕೆ ಇವರ ಕೊಡುಗೆ ಅಪಾರವಾಗಿದ್ದು, ಇವರ ನಾಯಕತ್ವದಲ್ಲಿ ಯೂನಿಯನ್ ಬ್ಯಾಂಕ್ ತಂಡವು ಅನೇಕ ಪ್ರಮುಖ ಟ್ರೋಫಿಗಳನ್ನು ಮುಡಿಗೇರಿಸಿಕೊಂಡಿದೆ.

ಯುವ ಆಟಗಾರರ ಮೇಲಿನ ಅವರ ಪ್ರೀತಿ ಮತ್ತು ಬೆಂಬಲ ಅಪ್ರತಿಮವಾಗಿತ್ತು. ತಮ್ಮ ವೈಯಕ್ತಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಆಟಗಾರರಿಗೆ ನೆರವು ನೀಡುತ್ತಿದ್ದರು. ಕ್ರೀಡಾ ಆಸಕ್ತಿಗಾಗಿ ತಮ್ಮ ಸಮಯ ಮತ್ತು ಹಣವನ್ನು ತ್ಯಾಗ ಮಾಡಿದ ಅದ್ಭುತ ವ್ಯಕ್ತಿ ಇವರು. ತಮ್ಮ ಸಂಬಳದ ಬಹುಭಾಗವನ್ನು ಯುವ ಫುಟ್ಬಾಲ್ ಆಟಗಾರರ ಮಾಸಿಕ ರೈಲು ಪಾಸ್ ಹಾಗೂ ಕ್ಯಾಂಟೀನ್ ಉಪಾಹಾರಕ್ಕಾಗಿ ವ್ಯಯಿಸುತ್ತಿದ್ದರು.

​ಮುಂಬೈಯ ಕರ್ನಾಟಕ ಮೈದಾನದಲ್ಲಿ ಯುವ ಆಟಗಾರರಿಗೆ ತರಬೇತಿ ನೀಡುತ್ತಾ, ಅವರ ಬೆಳವಣಿಗೆಗೆ ಸದಾ ಪ್ರೋತ್ಸಾಹ ನೀಡುತ್ತಿದ್ದರು. ಅಂಧೇರಿ ಪಶ್ಚಿಮದ ಉದಯ್ ಶೆಟ್ಟಿ ಮತ್ತು ಇತರ ಅನೇಕ ತುಳು ಕನ್ನಡಿಗರಿಗೆ ವೇಟ್‌ಲಿಫ್ಟಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಲು ಇವರೇ ಪ್ರೇರಣೆಯಾಗಿದ್ದರು. ಉದಯ್ ಶೆಟ್ಟಿಯವರಂತಹ ಕ್ರೀಡಾಳುಗಳಿಗೆ ಬ್ಯಾಂಕಿನಲ್ಲಿ ಉದ್ಯೋಗ ಕೊಡಿಸುವಲ್ಲಿಯೂ ಇವರು ಪ್ರಮುಖ ಪಾತ್ರ ವಹಿಸಿದ್ದರು.

​ರವೀಂದ್ರನಾಥ ಶೆಟ್ಟಿ ಅವರ ನಿಧನಕ್ಕೆ ಅವರಿಂದ ತರಬೇತಿ ಪಡೆದ ಹಾಗೂ ಯೂನಿಯನ್ ಬ್ಯಾಂಕ್‌ನಲ್ಲಿ ಉದ್ಯೋಗದಲ್ಲಿರುವ ನೂರಾರು ಅಭಿಮಾನಿಗಳು ಮತ್ತು ಕ್ರೀಡಾಪಟುಗಳು ತೀವ್ರ ಸಂತಾಪ ಸೂಚಿಸಿದ್ದಾರೆ.



Related posts

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk

ಬಂಟ್ವಾಳ : ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳುತ್ತಿದ್ದ ಕಾರು ಅಪಘಾತ; ಪೊಲೀಸ್ ಅಧಿಕಾರಿ ಪತ್ನಿ ಸೇರಿ ಮೂವರ ದುರ್ಮರಣ

Mumbai News Desk

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ: ಡಾ. ಬೋರಲಿಂಗಯ್ಯ ಚಾಲನೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ   ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್  ಗೆ ಆಹ್ವಾನ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ, ಮುಂಬಯಿ ಇದರ ನವಿ ಮುಂಬಯಿ ಶಾಖೆಯ ಸದಸ್ಯರಿಂದ ಪನ್ವೇಲ್‌ನ ಗಿರಿಜಾ ವೆಲ್ಫೇರ್‌ ಆಶ್ರಮಕ್ಕೆ ಭೇಟಿ

Mumbai News Desk

ಮಂಗಳೂರು-ಮುಂಬೈ ರೈಲುಗಳ ನಿರಂತರ ವಿಳಂಬ: ಪ್ರಯಾಣಿಕರ ಪರದಾಟ

Mumbai News Desk