30.5 C
Mumbai
June 8, 2026
Mumbai News Kannada
ಸುದ್ದಿ

ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನೇಮಕ





ಮುಂಬೈ: ಭಾರತ ಸರ್ಕಾರದ ನೀತಿ ಆಯೋಗ ಹಾಗೂ MSME ಅಡಿಯಲ್ಲಿ ನೋಂದಾಯಿತವಾಗಿರುವ ಪ್ರತಿಷ್ಠಿತ ‘ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್’ (HRIF) ಸಂಸ್ಥೆಯ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ (State Chairman) ಹಿರಿಯ ಪತ್ರಕರ್ತ ಯೋಗೇಶ್ ವಾಮನ್ ಪುತ್ರನ್ ಅವರು ನೇಮಕಗೊಂಡಿದ್ದಾರೆ.

​ಈ ಮಹತ್ವದ ಜವಾಬ್ದಾರಿಯ ಕುರಿತು ಸಂಸ್ಥೆಯ ಸಂಸ್ಥಾಪಕ ನರೇಂದ್ರ ಅರೋರಾ ಅವರು ಮಾರ್ಚ್ 18, 2026 ರಂದು ಅಧಿಕೃತ ನೇಮಕಾತಿ ಪತ್ರವನ್ನು ಹೊರಡಿಸಿದ್ದು, ಯೋಗೇಶ್ ಅವರ ಸುದೀರ್ಘ ಅನುಭವವು ಸಂಘಟನೆಯ ಬೆಳವಣಿಗೆಗೆ ಹೆಚ್ಚಿನ ಬಲ ತುಂಬಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಷ್ಟ್ರದ ಏಕತೆಯನ್ನು ಕಾಪಾಡುವ ಜೊತೆಗೆ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಈ ಪತ್ರದ ಮೂಲಕ ಅವರಿಗೆ ಕರೆ ನೀಡಲಾಗಿದೆ.

​ಮೂಲತಃ ಬ್ಯಾಂಕಿಂಗ್ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಯೋಗೇಶ್ ಪುತ್ರನ್ ಅವರು, ಮೊಗವೀರ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ 20 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದವರು. ಪತ್ರಿಕೋದ್ಯಮದ ಮೇಲಿನ ಆಸಕ್ತಿಯಿಂದಾಗಿ ‘ಈ ಸಂಜೆ ಸುದ್ದಿ’, ‘ಜನವಾಹಿನಿ’, ‘ಕರ್ನಾಟಕ ಮಲ್ಲ’ ಹಾಗೂ ‘ಉದಯವಾಣಿ’, ‘ದೆಹಲಿ ವಾರ್ತೆ’, ‘ಟೈಮ್ಸ್ ಆಫ್ ಕುಡ್ಲ’ (ತುಳು ವಾರಪತ್ರಿಕೆ) ಅಂತಹ ಪ್ರಮುಖ ದಿನಪತ್ರಿಕೆಗಳಲ್ಲಿ ಛಾಯಗ್ರಾಹಕರಾಗಿ ಕಾರ್ಯನಿರ್ವಹಿಸಿ ಗುರುತಿಸಿಕೊಂಡಿದ್ದಾರೆ.

​ಪ್ರಸ್ತುತ ‘ಮುಂಬೈ ನ್ಯೂಸ್’ ವಾಹಿನಿಯಲ್ಲಿ ವಿಡಿಯೋ ಜರ್ನಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು, ಮುಂಬೈ ಕನ್ನಡಿಗರ ಪತ್ರಕರ್ತರ ಸಂಘ ಹಾಗೂ ಆಲ್ ಇಂಡಿಯಾ ಮೀಡಿಯಾ ಅಸೋಸಿಯೇಷನ್‌ನ ಸಕ್ರಿಯ ಸದಸ್ಯರಾಗಿದ್ದಾರೆ. ಮುಂಬೈಯ ಪ್ರತಿಷ್ಠಿತ ಮೊಗವೀರ ವ್ಯವಸ್ಥಾಪಕ ಮಂಡಳಿ, ಕರ್ನಾಟಕ ಸಂಘ ಮಾತುಂಗ, ವಸಯಿ ತಾಲೂಕು ಮೊಗವೀರ ಸಂಘ, ವಸಯಿ ಕರ್ನಾಟಕ ಸಂಘ ಹಾಗೂ ಮುಂಬೈ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ನಲ್ಲಿ ಸಕ್ರಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

​1976ರಲ್ಲಿ ಮುಂಬೈಗೆ ಆಗಮಿಸಿದ ಇವರು ಕಳೆದ 50 ವರ್ಷಗಳಿಂದ ಮಹಾನಗರದ ವಿವಿಧ ಕ್ಷೇತ್ರಗಳಲ್ಲಿ ಪ್ರಾಮಾಣಿಕವಾಗಿ, ನಿಷ್ಠೆಯಿಂದ ದುಡಿದಿದ್ದಾರೆ. ಸಾಮಾಜಿಕ ಕಳಕಳಿಯುಳ್ಳ ಇವರ ಈ ನೂತನ ನೇಮಕಕ್ಕೆ ಸಾರ್ವಜನಿಕ ವಲಯ ಹಾಗೂ ಮಾಧ್ಯಮ ರಂಗದಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.



Related posts

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು

Mumbai News Desk

77ನೇ ಗಣರಾಜ್ಯೋತ್ಸವದ ಸಂಭ್ರಮ: ಭಾರತದ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ವಜ್ರೇಶ್ವರಿ ಶಿಕ್ಷಣ ಪ್ರಸಾರಕ ಮಂಡಳಿ, ಸುರೇಂದ್ರ ಕಲ್ಯಾಣ್ ಪುರ್ ನಿರ್ಮಿತ ನೂತನ ಕಟ್ಟಡದ ಉದ್ಘಾಟನೆ

Mumbai News Desk