September 6, 2026
Mumbai News Kannada
ಸುದ್ದಿ

ಉದ್ಯಮಿ ಕಾಂತಿ ಶೆಟ್ಟಿಯವರಿಗೆ ‘ಉದ್ಯೋಗ ಯೋಗದಾನ ಪುರಸ್ಕಾರ’





ಬೆಂಗಳೂರು: ಬಂಟರ ಸಂಘ ಬೆಂಗಳೂರಿನ ಉಪಾಧ್ಯಕ್ಷೆ , ಉದ್ಯಮಿ ಹಾಗೂ ಸಮಾಜ ಸೇವಕಿ ಕಾಂತಿ ಶೆಟ್ಟಿ ಅವರಿಗೆ ಮಾರ್ಚ್ 29 ರಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ‘ಉದ್ಯೋಗ ಯೋಗದಾನ ಪುರಸ್ಕಾರ – 2026’ ಪ್ರಶಸ್ತಿಯನ್ನು ಚಿತ್ರನಟಿ ಶಿಲ್ಪಾ ಶೆಟ್ಟಿ ಅವರು ಪ್ರದಾನ ಮಾಡಿ ಸನ್ಮಾನಿಸಿದರು,
ಮೂಲತಃ ತುಳುನಾಡಿನವರಾದ ಕಾಂತಿ ಶೆಟ್ಟಿ ಅವರು ಬೆಂಗಳೂರಿನಲ್ಲಿ ನೆಲೆಸಿದ್ದು, ‘Aircom Solutions Private Limited’ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಮತ್ತು ‘ನಮ್ಮ ಕುಟೀರ’ ಫೌಂಡೇಶನ್‌ನ ಸಂಸ್ಥಾಪಕ ಟ್ರಸ್ಟಿಯಾಗಿ ಉದ್ಯಮ ಹಾಗೂ ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.


ಇವರು ಕೇವಲ ಉದ್ಯಮ ಕ್ಷೇತ್ರವಷ್ಟೇ ಅಲ್ಲದೆ, ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದು, ಯಶಸ್ವಿ ಕನ್ನಡ ಚಲನಚಿತ್ರ ‘Case No. 18/9’ ಗೆ ಸಹ-ನಿರ್ಮಾಪಕಿಯಾಗಿ ಹಾಗೂ ‘ಚೆಲುವಿ’ ಎಂಬ ಕನ್ನಡ ಧಾರವಾಹಿಯ ನಿರ್ಮಾಪಕಿಯಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಬಿಜೆಪಿಯ ವಕ್ತಾರೆಯಾಗಿ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿರುವ ಇವರ ನಿರಂತರ ಸಮಾಜಮುಖಿ ಸೇವೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.



Related posts

ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ ರಾಮಾಂಜನೇಯ.. ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Mumbai News Desk

ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರಿಗೆ ಆಸ್ಟ್ರೇಲಿಯಾದಿಂದ ವಿಶಿಷ್ಟ ಸಾಧನೆಯೊಂದಿಗೆ ನಗರ ಯೋಜನೆ ಮತ್ತು ಪರಿಸರದಲ್ಲಿ ಸ್ನಾತಕೋತ್ತರ ಪದವಿ

Mumbai News Desk

ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳನ್ನು ದಾಟಿದ ಮೊದಲ ವಿಶ್ವ ನಾಯಕ ಪ್ರಧಾನಿ ಮೋದಿ

Mumbai News Desk

ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರಿಗೆ ಅತ್ಯುತ್ತಮ ಬ್ಯಾಂಕ್ ಕಾರ್ಯಧ್ಯಕ್ಷ ಪ್ರಶಸ್ತಿ.

Mumbai News Desk

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

ಕರ್ನಿರೆ  ವಿಶ್ವನಾಥ ಶೆಟ್ಟಿ  ಪರಿವಾರ ದಿಂದ ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚ ಸಮರ್ಪಣೆ,

Mumbai News Desk