July 22, 2026
Mumbai News Kannada
ಪ್ರಕಟಣೆ

ಎ. 5 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿವತಿಯಿಂದ ಹಸಿರುವಾಣಿ ಹೊರೆಕಾಣಿಕೆ ಪೂರ್ವಭಾವಿ ಸಮಾಲೋಚನಾ ಸಭೆ







ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಹಸಿರುವಾಣಿ ಹೊರೆ ಕಾಣಿಕೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರಮುಖ ಸಭೆಯು ಬರುವ ಏಪ್ರಿಲ್ 05, 2026ನೇ ಆದಿತ್ಯವಾರ ಸಂಜೆ 3.30 ಗಂಟೆಗೆ ಪಡುಬಿದ್ರಿಯ ಬಂಟರ ಸಂಘದಲ್ಲಿ ನಡೆಯಲಿದೆ. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಹಾಗೂ ಹೊರೆ ಕಾಣಿಕೆ ಮೆರವಣಿಗೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ವೈಭವಯುತವಾಗಿ ನಡೆಸುವ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುವುದು.
ಈ ಕಾರ್ಯಕ್ರಮದ ಯಶಸ್ಸಿಗಾಗಿ ಸಮಸ್ತ ಸಮಾಜದ ಬಂಧುಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಧಾರ್ಮಿಕ ಕೇಂದ್ರಗಳ ಪ್ರತಿನಿಧಿಗಳು ಹಾಗೂ ಭಜನಾ ಮಂಡಳಿಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೊರೆಕಾಣಿಕೆ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿ ವತಿಯಿಂದ ವಿನಂತಿಸಲಾಗಿದೆ. ಭಗವದ್ಭಕ್ತರೆಲ್ಲರೂ ಈ ಸಭೆಯಲ್ಲಿ ಉಪಸ್ಥಿತರಿದ್ದು ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



Related posts

ಜ. 12. ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಕೋಟಿ -ಚೆನ್ನಯ ಕ್ರೀಡೋತ್ಸವ

Mumbai News Desk

ಸೆ.20 : ಮಾತೃಭೂಮಿ ಕೋ -ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ 37ನೇ ವಾರ್ಷಿಕ ಮಹಾಸಭೆ

Mumbai News Desk

ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ

Mumbai News Desk

ಮಲಾಡ್ ಕನ್ನಡ ಸಂಘ, ಮಾ.8ರಂದು ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Mumbai News Desk

ಜ.7 ರಂದು ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ ಇದರ 41ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ

Mumbai News Desk

ಒಕ್ಕಲಿಗರ ಸಂಘ ಮಹಾರಾಷ್ಟ್ರ: ಜ. 18ರಂದು ಸಂಕ್ರಾಂತಿ ಸಂಭ್ರಮ .

Mumbai News Desk