30 C
Mumbai
April 24, 2026
Mumbai News Kannada
ಮುಂಬಯಿ

ಮುಂಬೈ : ಮೊಗವೀರ ಕೋ-ಆಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿ: 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವ ಸಂಪನ್ನ





ಮೊಗವೀರ ಕೋ-ಆಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಪೂಜಾ ಸಮಿತಿಯ ವತಿಯಿಂದ ಮಾರ್ಚ್ 28 ರಂದು 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವವನ್ನು ಅತ್ಯಂತ ಅಂಧೇರಿ ಪೂರ್ವ ಸಾಕಿನಾಕ ಸಾಕಿ ವಿಹಾರ್ ರೋಡ್ ನಲ್ಲಿರುವ ಪ್ರಣೀಕ್ ಚೇಂಬರ್ ನ ಜಿ 18, 19ರ ಮೊಗವೀರ ಬ್ಯಾಂಕ್ ಶಾಖೆಯಲ್ಲಿ ಶ್ರದ್ಧಾ ಭಕ್ತಿಯಿಂದ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಂಡಿತು.
ಅಂದು ಬೆಳಿಗ್ಗೆ ಪುರೋಹಿತರಾದ ರಘುಪತಿ ಭಟ್ ಅವರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯು ಸಮಿತಿಯ ಸದಸ್ಯೆ ದೀಕ್ಷಾ ಜಯೇಶ್ ಕೋಟ್ಯಾನ್ ಅವರ ಯಜಮಾನಿಕೆಯಲ್ಲಿ ಭಕ್ತಿಪೂರ್ವಕವಾಗಿ ಜರುಗಿತು. ಪೂಜಾ ವಿಧಿಯಾದ ಬಳಿಕ ಬ್ಯಾಂಕ್ ನ ಸಿಬ್ಬಂದಿ ವರ್ಗ ಹಾಗೂ ಮಾಜಿ ಸಿಬ್ಬಂದಿಗಳು ಭಜನಾ ಕಾರ್ಯಕ್ರಮವನ್ನು ನೆರವೇರಿಸಿದರು.


ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕ ಭಾಸ್ಕರ್ ಬಿ ಸಾಲ್ಯಾನ್, ಹರೀಶ್ಚಂದ್ರ ಕಾಂಚನ್, ಸಿ ಇ ಓ ಸ್ಮಿತಾ ಕಾಂಚನ್, ಎ ಜಿ ಎಂ ಯದುವೀರ್ ಪುತ್ರನ್, ಬ್ಯಾಂಕ್ ನ ಕಾರ್ಮಿಕ ನಾಯಕ ಮುಖೇಶ್ ಮೆಂಡನ್, ಅಧ್ಯಕ್ಷ ದಿನೇಶ್ ಕೋಟ್ಯಾನ್, ಕಾರ್ಯದರ್ಶಿ ಪ್ರಮೋದ್ ಪುತ್ರನ್, ಕೋಶಾಧಿಕಾರಿ ಅನಿಕೇತ್ ಕರ್ಕೇರ ಸೇರಿದಂತೆ ಸಮಿತಿಯ ಸದಸ್ಯರು, ಮಾಜಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ಕೆ ತನು -ಮನ -ಧನದ ಸಹಕಾರವನವಿತ್ತು ಸಹಕರಿಸಿದ ಬ್ಯಾಂಕಿನ ನಿರ್ದೇಶಕ ಮಂಡಳಿಯವರಿಗೂ, ಪ್ರಬಂಧಕರಿಗೂ ಮಾಜಿ ಸಿಬ್ಬಂದಿ ವರ್ಗದ ಸದಸ್ಯರಿಗೂ, ಶ್ರೀ ಮದ್ಭಾರತ ಮಂಡಳಿ, ಅಂಧೇರಿ ಶಾಖೆಯ ಪ್ರಬಂಧಕ ಸುಮನ್ ಕರ್ಕೇರ ಎಲ್ಲಾ ಭಕ್ತಾಭಿಮಾನಿಗಳಿಗೆ ಕಾರ್ಯದರ್ಶಿ ಪ್ರಮೋದ್ ಪುತ್ರನ್ ಧನ್ಯವಾದ ಸಮರ್ಪಿಸಿದರು. ಅಂತಿಮವಾಗಿ ವಾಸು ಉಪ್ಪುರೂ ಮಹಾಮಂಗಳಾರತಿ ಗೈದರು. ಹರೀಶ್ ಪುತ್ರನ್ ಪ್ರಾಥಿಸಿದರು. ಕೊನೆಗೆ ತೀರ್ಥ, ಪ್ರಸಾದ ಹಾಗೂ ಮಹಾ ಪ್ರಸಾದ ವಿನಿಯೋಗದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.



Related posts

ನೀರನ್ನು ಕುದಿಸಿ, ಪಿಲ್ಟರ್ ಮಾಡಿ ಬಳಸಿ ಬಿ ಎಂ ಸಿಯಿಂದ ಮುಂಬೈ ಜನತೆಗೆ ಸಲಹೆ

Mumbai News Desk

ತುಳುಕೂಟ ಫೌಂಡೇಶನ್ ನಾಲಾಸೋಪಾರ ಮತ್ತು ಶ್ರೀದೇವಿ ಯಕ್ಷಕಲಾ ನಿಲಯದ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ

Mumbai News Desk

ಡೊಂಬಿವಲಿ ಹೋಟೆಲ್ ಅಸೋಸಿಯೇಷನ್ ನ ಮುಂದಾಳುತ್ವದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವದ ಶೋಭಾಯಾತ್ರೆಗೆ ಅದ್ದೂರಿ ಚಾಲನೆ

Mumbai News Desk

ಮೈಸೂರು ಅಸೋಸಿಯೇಷನ್‌ನಲ್ಲಿ ‘ಶ್ರೀರಂಗ ಸ್ಮರಣೆ’ ನಾಟಕೋತ್ಸವಕ್ಕೆ ಚಾಲನೆ

Mumbai News Desk

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ;ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಹರಟೆ ಸಾಹಿತಿ ದಿ. ಚಂದ್ರಶೇಖರ ರಾವ್ ಜನ್ಮದಿನಾಚರಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Mumbai News Desk