September 6, 2026
Mumbai News Kannada
ಪ್ರಕಟಣೆ

ಏಪ್ರಿಲ್ 4 ರಂದು ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ), ಮುಂಬೈ ವತಿಯಿಂದ ಶನಿ ಪೂಜೆ ಮತ್ತು ಭಜನಾ ಸಂಧ್ಯಾ





ಮುಂಬಯಿ: ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ), ಮುಂಬೈ, ಜಯ ಸಿ. ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವಾಸ್ ವತಿಯಿಂದ ಶನಿ ಪೂಜೆ ಮತ್ತು ಭಜನಾ ಸಂಧ್ಯಾ ಕಾರ್ಯಕ್ರಮಗಳು ಏಪ್ರಿಲ್ 4ರ ಶನಿವಾರ ಮಧ್ಯಾಹ್ನ 1 ಗಂಟೆಯಿಂದ ಜಯಲೀಲಾ ಬ್ಯಾಂಕ್ವೆಟ್, 3ನೇ ಮಹಡಿ, ರೈಲ್ವೆ ನಿಲ್ದಾಣದ ಎದುರು, ಗೋರೆಗಾಂವ್ (ಪೂರ್ವ), ಮುಂಬಯಿ ಇಲ್ಲಿ ನಡೆಯಲಿದೆ.

​ಅಂದು ಮಧ್ಯಾಹ್ನ 1.00 ಗಂಟೆಗೆ ಕಲಶ ಸ್ಥಾಪನೆ, ಸಂಜೆ 7.30ಕ್ಕೆ ಭಜನೆ, ರಾತ್ರಿ 8.00 ಗಂಟೆಗೆ ಮಹಾಮಂಗಳಾರತಿ ಹಾಗೂ ರಾತ್ರಿ 8.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮ:

ಧಾರ್ಮಿಕ ಸಭೆಯನ್ನು ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಕಾರ್ಯಾಧ್ಯಕ್ಷರು ಮತ್ತು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ಮುಲ್ಕಿ) ಅಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾದ ಅಡ್ವೊಕೇಟ್ ಸೋಮನಾಥ್ ಅಮೀನ್ ಹಾಗೂ ಬ್ಯಾಂಕಿನ ಎಂ.ಡಿ. ಮತ್ತು ಸಿಇಒ ವಿದ್ಯಾನಂದ್ ಎಸ್. ಕರ್ಕೇರ ಆಗಮಿಸಲಿದ್ದಾರೆ.

​ಗೌರವ ಅತಿಥಿಗಳಾಗಿ ಖ್ಯಾತ ಜ್ಯೋತಿಷಿ ಡಾ. ಪ್ರವೀಣ್ ಎಂ. ಭಟ್, ಹರೀಶ್ ಎಸ್. ಪೂಜಾರಿ (ವಾಡಾಲ), ರಘು ಎಂ. ಪೂಜಾರಿ (ಗೋರೆಗಾಂವ್), ಉದ್ಯಮಿ ರಾಮ ಜಿ. ಸುವರ್ಣ, ಉದ್ಯಮಿ ಉಮೇಶ್ ಕಾಪು, ಸುಭಾಷ್ ಇಲೆಕ್ಟ್ರಿಕಲ್ಸ್‌ನ ಅರುಣ್ ಎಂ. ಪೂಜಾರಿ, ಸುಧಾಕರ ಪೂಜಾರಿ (ಕೇಮಂತೂರು), ಉದ್ಯಮಿ ಗಣೇಶ್ ಆರ್. ಪೂಜಾರಿ, ಸಾಯಿ ಕೇರ್ ಲಾಜಿಸ್ಟಿಕ್ಸ್‌ನ ಸುರೇಂದ್ರ ಎ. ಪೂಜಾರಿ, ಪ್ರದೀಪ್ ಪೂಜಾರಿ (ಪೊವಾಯಿ), ಶಿವರಾಮ ಸಿ. ಪೂಜಾರಿ (ಕಾಂದಿವಲಿ), ಜೆ. ವಿ. ಕೋಟ್ಯಾನ್ (ಗೋರೆಗಾಂವ್), ಕೇಶವ್ ಸಾಲಿಯನ್ (ಮಲಾಡ್) ಮತ್ತು ಕೃಷ್ಣ ಎಂ. ಪೂಜಾರಿ (ನವಿ ಮುಂಬಯಿ) ಉಪಸ್ಥಿತರಿರಲಿದ್ದಾರೆ.

​ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ), ಜಯ ಸಿ. ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವಾಸ್ ಪರವಾಗಿ ಅಧ್ಯಕ್ಷ ಅಶೋಕ್ ಸಸಿಹಿತ್ಲು, ಗೌರವ ಪ್ರಧಾನ ಕಾರ್ಯದರ್ಶಿ ಕೇಶವ ಪೂಜಾರಿ, ಗೌರವ ಕೋಶಾಧಿಕಾರಿ ಸಬಿತಾ ಜಿ. ಪೂಜಾರಿ ಹಾಗೂ ಸರ್ವ ಸದಸ್ಯರು, ಮಹಿಳಾ ಮತ್ತು ಯುವ ವಿಭಾಗದವರು ವಿನಂತಿಸಿದ್ದಾರೆ.



Related posts

ಪೆ. 3 ರಿಂದ 9 ರ ತನಕ ಬೋರಿವಲಿ: ಶ್ರೀ ಜಗದೀಶ್ವರಿ ದೇವಸ್ಥಾನದ ನೂತನ ಆಲಯ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಸಂಭ್ರಮ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) : ಸೆ. 5 ರಂದು 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ

Mumbai News Desk

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜೋಡು ಜೀಟಿಗೆ ನಾಟಕ : ಮಂಗಳೂರಿನ ಪುರಭವನದಲ್ಲಿ ಅದ್ದೂರಿ ಕಾರ್ಯಕ್ರಮ

Mumbai News Desk

ನ. 21, 22 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರ, ಡೊಂಬಿವಲಿಯ 67ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಮಾ 30: ಮಾತಾ ಕಿ ಚೌಕಿ ಕಾರ್ಯಕ್ರಮ.

Mumbai News Desk

ಬಂಟರ ಸಂಘ ಮುಂಬಯಿ: ವಸಾಯಿ-ಡಹಾಣು ಪ್ರಾದೇಶಿಕ ಸಮಿತಿ : ಜೂ. 16 ರಂದು  ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವಿದ್ಯಾರ್ಥಿವೇತನ, ದತ್ತು ಸ್ವೀಕಾರ, ವಿಧವಾವೇತನ, ಅಂಗವಿಕಲರಿಗೆ ಆರ್ಥಿಕ ನೆರವು ವಿತರಣೆ

Mumbai News Desk