32.3 C
Mumbai
June 7, 2026
Mumbai News Kannada
ತುಳುನಾಡು

ಬಜ್ಪೆಯಲ್ಲಿ ಮುಂಬೈಯ ಪುರುಷೋತ್ತಮ ಬೆಲ್ಚಡ ದಂಪತಿಗಳಿಂದ ಹರಕೆಯ ಯಕ್ಷಗಾನ ಸೇವೆ: ಕಲಾವಿದರುಗಳಾದ ಅರವಿಂದ ಬೋಳಾರ್ ಹಾಗೂ ಮನ್ವಿತ್ ನಿಡ್ಡೋಡಿ ಅವರಿಗೆ ಸನ್ಮಾನ





ಮುಂಬಯಿಯ ಘಾಟ್ಕೋಪರ್ ಆನಂದ ನಗರದ ನಿವಾಸಿಗಳಾದ ಪುರುಷೋತ್ತಮ ಮತ್ತು ಸುನಿತಾ ಸಾಲ್ಯಾನ್ ದಂಪತಿಗಳ ಹರಕೆಯ ಸೇವೆಯಾಗಿ ಏಪ್ರಿಲ್ 1, 2026 ರಂದು ಬಜ್ಪೆಯ ಮುರ ಸೌಹಾರ್ದ ನಗರದ ಅಂಗನವಾಡಿ ಭಂಡಾರ ಮನೆ ಬಳಿ ‘ಶ್ರೀ ಭಗವತಿ ಕ್ಷೇತ್ರ ಮಹಾತ್ಮೆ’ ಎಂಬ ಯಕ್ಷಗಾನ ಬಯಲಾಟವು ಅತ್ಯಂತ ಭಕ್ತಿ-ಸಂಭ್ರಮದಿಂದ ಜರುಗಿತು.


ಈ ಯಕ್ಷಗಾನದಲ್ಲಿ ತುಳುನಾಡ ಮಾಣಿಕ್ಯ, ಜನಜಾಗೃತಿ ನಟ ಅರವಿಂದ ಬೋಳಾರ್ ಅವರು ಅತಿಥಿ ಕಲಾವಿದರಾಗಿ ಆಗಮಿಸಿ ತಮ್ಮ ಅಮೋಘ ಅಭಿನಯದ ಮೂಲಕ ಪ್ರೇಕ್ಷಕರ ಮನಗೆದ್ದರು. ಕಾರ್ಯಕ್ರಮದ ಮಧ್ಯಂತರದಲ್ಲಿ ಕಲಾ ಸೇವೆಯನ್ನು ಗುರುತಿಸಿ ಅರವಿಂದ ಬೋಳಾರ್, ಪಾವಂಜೆ ಮೇಳದ ಪ್ರಸಿದ್ಧ ಕಲಾವಿದ ಮನ್ವಿತ್ ನಿಡ್ಡೋಡಿ ಹಾಗೂ ಯಕ್ಷಗಾನ ಸೇವಾಕರ್ತ ಯೋಗೀಶ್ ಕರ್ಕೇರ ಅವರನ್ನು ಅತ್ಯಂತ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಸೇವಾಕರ್ತರಾದ ಸುನೀತಾ ಬೆಲ್ಚಡ, ಪುರುಷೋತ್ತಮ ಬೆಲ್ಚಡ, ಜಿಶಾಂತ್, ಸುಪ್ರಿತಾ, ಜಿತೇಶ್, ಜಿಯ ಹಾಗೂ ದಾಮೋದರ್ ಬೆಲ್ಚಡ ಉಪಸ್ಥಿತರಿದ್ದರು. ಇಡೀ ಕಾರ್ಯಕ್ರಮವನ್ನು ಕಮಲಾಕ್ಷ ಬೆಲ್ಚಡ ಅವರು ಅಚ್ಚುಕಟ್ಟಾಗಿ ನಿರೂಪಿಸಿ ವಂದಿಸಿದರು.

ಜಯ ಸಿ. ಪೂಜಾರಿ ಕೆಳಾರ್ಕಳ ಬೆಟ್ಟು



Related posts

ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ “ಮೂಲ್ಕಿಯ ಕೀರ್ತಿಶೇಷ ಸಾಧಕರು” ಕೃತಿ ಬಿಡುಗಡೆ ಸಮಾರಂಭ

Mumbai News Desk

ಮುಲ್ಕಿ : ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ ಅವರಿಗೆ ಸನ್ಮಾನ

Mumbai News Desk

ಮೂಲ್ಕಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜೃಂಭಣೆಯ ದೃಢ ಕಲಶಾಭಿಷೇಕ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಮತ್ತು ಮಕ್ಕಳಿಗೆ ಉಪಯುಕ್ತ ಮಾಹಿತಿ ಇರುವ ಕೈ ಪಿಡಿ ಬಿಡುಗಡೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,

Mumbai News Desk

ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ: 2027ರ ಫೆಬ್ರವರಿ 18 ರಿಂದ 28ರ ವರೆಗೆ ದಿನಾಂಕ ನಿಗದಿ; ಸಮಿತಿ ಕಚೇರಿ ಉದ್ಘಾಟನೆ

Mumbai News Desk