30.5 C
Mumbai
June 8, 2026
Mumbai News Kannada
ಮುಂಬಯಿ

ಬಂಟರ ಸಂಘ, ಮುಂಬಯಿ: ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ: ಮಾತಾ ಕಿ ಚೌಕಿ ಭಕ್ತಿ ಪ್ರಧಾನ ಕಾರ್ಯಕ್ರಮ





ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಮಾತಾ ಕಿ ಚೌಕಿ ಭಕ್ತಿ ಪ್ರಧಾನ ಕಾರ್ಯಕ್ರಮವು ಮಾರ್ಚ್ 31ರಂದು ಎಸ್. ಎಂ. ಶೆಟ್ಟಿ ಪವಾಯಿ ಶಿಕ್ಷಣ ಸಂಕುಲದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಅದ್ದೂರಿಯಾಗಿ ಜರುಗಿತು.

​ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ, ಉಪಾಧ್ಯಕ್ಷರಾದ ಮಹೇಶ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ಪ್ರಾದೇಶಿಕ ಸಮಿತಿಗಳ ಸಮನ್ವಯಕ ರವೀಂದ್ರನಾಥ ಭಂಡಾರಿ ಹಾಗೂ ಎಸ್. ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು ಅವರ ಉಪಸ್ಥಿತಿಯಲ್ಲಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್. ಶೆಟ್ಟಿ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸೂರಜ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಅಮರನಾಥ್ ಶೆಟ್ಟಿ, ಸಮಿತಿಯ ಸಂಚಾಲಕ ರವೀಂದ್ರ ಶೆಟ್ಟಿ ಮತ್ತು ಮಹಿಳಾ ವಿಭಾಗದ ಸಂಚಾಲಕಿ ವಜ್ರಾಕ್ಷಿ ಪೂಂಜಾ ಹಾಗೂ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

​ಸಮಿತಿಯ ಉಪಾಧ್ಯಕ್ಷ ಯಶವಂತ ಶೆಟ್ಟಿ, ರಮೇಶ್ ರೈ, ಕಾರ್ಯದರ್ಶಿ ತಾರಾನಾಥ ಶೆಟ್ಟಿ, ಕೋಶಾಧಿಕಾರಿ ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಅಮರನಾಥ ಶೆಟ್ಟಿ ಹಾಗೂ ಜೊತೆ ಕೋಶಾಧಿಕಾರಿ ಅಭಿಷೇಕ್ ಶೆಟ್ಟಿ ಅವರು ಸಹಕರಿಸಿದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಅಮರನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ, ಸಲಹೆಗಾರರಾದ ವಜ್ರಾ ಪೂಂಜಾ, ಉಪ ಕಾರ್ಯಾಧ್ಯಕ್ಷೆ ಜಯಲಕ್ಷ್ಮಿ ಜೆ. ಶೆಟ್ಟಿ, ಕಾರ್ಯದರ್ಶಿ ವೃಕ್ಷಾ ಭಂಡಾರಿ, ಕೋಶಾಧಿಕಾರಿ ಪ್ರಮೀಳಾ ಆರ್. ಶೆಟ್ಟಿ, ಜೊತೆ ಕಾರ್ಯದರ್ಶಿ ಪುಷ್ಪಲತಾ ಎಸ್. ಶೆಟ್ಟಿ, ಜೊತೆ ಕೋಶಾಧಿಕಾರಿ ಮಮತಾ ಎಸ್. ಶೆಟ್ಟಿ ಹಾಗೂ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ಅನುಸೂಯ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅದ್ವಿತ್ ಪೂಂಜಾ ಮತ್ತು ಸಮಿತಿಯ ಸದಸ್ಯರ ಶ್ರಮದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಮಾತಾ ಕಿ ಚೌಕಿ ಕಾರ್ಯಕ್ರಮವು ಭಕ್ತಿಭಾವ, ಶ್ರದ್ಧೆ ಮತ್ತು ಆತ್ಮೀಯತೆಯೊಂದಿಗೆ ಅದ್ಭುತ ಧಾರ್ಮಿಕ ಸಂಭ್ರಮವಾಗಿ ಮೂಡಿಬಂದಿತು. ಮಹಿಳಾ ವಿಭಾಗದ ಸದಸ್ಯರ ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮವು ನಂತರ ಮಾತೆಯ ಆರಾಧನೆ ಮತ್ತು ವಿಶೇಷ ಪೂಜೆಗಳೊಂದಿಗೆ ಮುಂದುವರಿಯಿತು. ಭಕ್ತರು “ಜೈ ಮಾತಾ ದಿ” ಎಂಬ ಉದ್ಘೋಷದೊಂದಿಗೆ ಭಕ್ತಿರಸದಲ್ಲಿ ಮಿಂದೆದ್ದರು. ಜಗನ್ಮಾತೆಯ ಸುಂದರ ಅಲಂಕಾರಗಳು ಮತ್ತು ಸಾಂಪ್ರದಾಯಿಕ ಭಜನೆಗಳು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದವು.

ಇದೇ ಸಂದರ್ಭದಲ್ಲಿ ಬಂಟರ ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷರುಗಳಾದ ಆಶಾ ಮನೋಹರ ಹೆಗ್ಡೆ, ಲತಾ ಪ್ರಭಾಕರ ಶೆಟ್ಟಿ, ಲತಾ ಜಯರಾಮ ಶೆಟ್ಟಿ ಹಾಗೂ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷರುಗಳಾದ ಸುಜಾತಾ ಗುಣಪಾಲ ಶೆಟ್ಟಿ, ವನಿತಾ ನೋಂಡಾ ಮತ್ತು ವಿವಿಧ ಸಮಿತಿಗಳ ಕಾರ್ಯಾಧ್ಯಕ್ಷರನ್ನು ಗೌರವಿಸಲಾಯಿತು. ಕಾರ್ಯಕ್ರಮಕ್ಕೆ ಆರ್ಥಿಕ ಸಹಕಾರ ನೀಡಿದ ಗಣ್ಯರನ್ನು ಸಹ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.



Related posts

ಬಿಲ್ಲವರ ಅಸೋಸಿಯೇಷನ್, ಮುಂಬೈ, ಇದರ ದೊಂಬಿವೀಲಿ ಸ್ಥಳೀಯ ಕಚೇರಿಯ 2024-2027 ರ ನೂತನ ಕಾರ್ಯಾಧ್ಕ್ಷರಾಗಿ ಶ್ರೀ ಶ್ರೀಧರ್ ಬಿ. ಅಮೀನ್ ಅಯ್ಕೆ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಧಾರ್ಮಿಕ ಸಭೆ

Mumbai News Desk

ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ – ಮಹಿಳಾ ವಿಭಾಗದವತಿಯಿಂದ ಜರಗಿದ ಶ್ರಾವಣ ಸಂಭ್ರಮ

Mumbai News Desk

ಮುಂಬೈ: ಕುರ್ಲಾ ಬೆಸ್ಟ್ ಬಸ್ ಅಪಘಾತ ಪ್ರಕರಣ, ಚಾಲಕರನ್ನು ನೇಮಿಸಿಕೊಳ್ಳುವಲ್ಲಿ ಮತ್ತು ತರಬೇತಿ ನೀಡುವಲ್ಲಿ ನಿರ್ಲಕ್ಷ – ಪೊಲೀಸರ ಆರೋಪ

Mumbai News Desk

ಬಂಟರ ಸಂಘ ಮುಂಬಯಿ, ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಪದಗ್ರಹಣ

Mumbai News Desk

ಭಾರತ್ ಬ್ಯಾಂಕ್ ಇದರ ಭಾಯಂದರ್ ಶಾಖಾ ಪ್ರಭಂದಕರಾದ ಪ್ರವೀಣ್ ಎಂ. ಬಂಗೇರ ಸೇವಾ ನಿವೃತಿ

Mumbai News Desk