32.3 C
Mumbai
June 7, 2026
Mumbai News Kannada
ಸುದ್ದಿ

ಹೋಟೆಲ್ ಉದ್ಯಮಿ, ಸಂಘಟಕ ದುರ್ಗಾಪ್ರಸಾದ್ ಸಾಲ್ಯಾನ್ ನಿಧನ





ಬಿಲ್ಲವರ ಎಸೋಸಿಯೇಷನ್ ಮುಂಬೈ ಇದರ ಸಕ್ರಿಯ ಸದಸ್ಯರು,ಜಯಸುವರ್ಣ ಅಭಿಮಾನಿ ಸಮಿತಿಯ ಉಪಾಧ್ಯಕ್ಷರು,ಮಹಾರಾಷ್ಟ್ರ ಹೋಟೆಲ್ ಮತ್ತು ರೆಸ್ಟೋರೆಂಟ್ ಫೆಡರೇಶನ್ ಇದರ ಗೌರವ ಪ್ರದಾನ ಕಾರ್ಯದರ್ಶಿ, ಹೋಟೆಲ್ ಉದ್ಯಮಿ, ಮೂಲ್ಕಿ ಮಾನಂಪಾಡಿ ಸಾಲ್ಯಾನ್ ಸ್ಟೇ ಹೌಸ್ ಮಾಲಕ ಶ್ರೀ ದುರ್ಗಾಪ್ರಸಾದ್ ಸಾಲಿಯಾನ್ ಅಲ್ಪ ಕಾಲದ ಅಸೌಖ್ಯದಿಂದಾಗಿ ಇಂದು ತನ್ನ ಮಲಾಡ್ ಸ್ವಗ್ರಹದಲ್ಲಿ ನಿಧನರಾದರು.

ಸರಳ ವ್ಯಕ್ತಿತ್ವದ, ನೇರ ನಡೆ ನುಡಿಯ ಸಾಲ್ಯಾನ್ ರವರು ತುಳುನಾಡು ದೈವ ಭಕ್ತ, ಖ್ಯಾತ ಸಂಘಟಕ, ಹಲವಾರು ಸಂಘ ಸಂಸ್ಥೆಗಳ ಸಕ್ರಿಯ ಕಾರ್ಯಕರ್ತ, ಸಮಾಜ ಸೇವಕ ಹಾಗೂ ಹಿತವಾದ ಮಿತಿ ಮಾತುಗಾರ.

ಮೃತರ ಅಂತಿಮಯಾತ್ರೆ ಅವರ ಮಲಾಡ್ ಪೂರ್ವದ ನಿವಾಸ A /401,ರಿಜ್ವಿ ಒಕ್,ರಹೇಜ ಕಾಂಪ್ಲೆಕ್ಸ್ ರೋಡ್,ಟೈಮ್ಸ್ ಆಫ್ ಇಂಡಿಯಾ ಪ್ರೆಸ್ ಹತ್ತಿರ,ಮಲಾಡ್ ಪೂರ್ವ ಇಲ್ಲಿಂದ ನಾಳೆ ಬೆಳಿಗ್ಗೆ 9.30 ಕ್ಕೆ ಹೊರಟು, ಗೊರೇಗಾವ್ ಶಿವಧಾಮ್ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಮೃತರ ನಿಧನಕ್ಕೆ ಜಯ ಸಿ ಸುವರ್ಣ ಅಭಿಮಾನಿಗಳು, ಶ್ರೀ ನಾರಾಯಣ ಗುರು ಭಜನಾ ಮಂಡಳಿ ಮುಂಬೈ, ಮತ್ತು ಮುಂಬೈ ಬಿಲ್ಲವರು ಹಾಗೂ ಭಾರತ್ ಬ್ಯಾಂಕ್ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರು ,ಭಾರತ್ ಬ್ಯಾಂಕ್ ನಿರ್ದೇಶಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಬೊಯಿಸರ್  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ

Mumbai News Desk

ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಮಿಸ್ ಕ್ವೀನ್ ಕರಾವಳಿ 2025 ಆಗಿ ಪೂರ್ವಿ ಇ ಕುಲಾಲ್ ಆಯ್ಕೆ

Mumbai News Desk

ರಾಜ್ಯವ್ಯಾಪಿ ಕಂಬಳಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ :ಯಾವ ಮೂಲೆಯಲ್ಲಾದ್ರೂ ಕಂಬಳ ನಡೆಸಲು ಆದೇಶ

Mumbai News Desk

ಗೊರೆಗಾಂವ್ ಶ್ರೀ ಶಾಂತಾದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಧಾರ್ಮಿಕ ಸಭೆ

Mumbai News Desk

ಕಾಂದಿವಲಿ: ಯೂನಿಯನ್ ಬ್ಯಾಂಕ್ ನಿವೃತ್ತ ಅಧಿಕಾರಿ ಕುಸುಮಲತಾ ಸುವರ್ಣ ನಿಧನ

Mumbai News Desk

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 18 ಜನರ ಸಾವು

Mumbai News Desk