July 23, 2026
Mumbai News Kannada
ಸುದ್ದಿ

ಬೆಂಗಳೂರು : ರಾಜ್ಯಪಾಲರಿಂದ ಗೀತಾಲಕ್ಷ್ಮಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ: ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಮನ್ನಣೆ







ನಗರದ ಪ್ರತಿಷ್ಠಿತ ಆರ್. ವಿ. ಶಿಕ್ಷಕರ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಗೀತಾಲಕ್ಷ್ಮಿ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ಇವರು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಕಾತ್ಯಾಯಿನಿ ಅವರ ಸಮರ್ಥ ಮಾರ್ಗದರ್ಶನದಲ್ಲಿ ‘ಎಫೆಕ್ಟಿವ್‌ನೆಸ್‌ ಆಫ್‌ ಎಕ್ಸ್‌ ಪಿರಿಯಂಟಲ್‌ ಲರ್ನಿಂಗ್ ಆನ್‌ ಅಚೀವ್‌ಮೆಂಟ್‌ ಅಂಡ್ ಇಂಟ್ರೆಸ್ಟ್‌ ಇನ್‌ ಸೋಶಿಯಲ್ ಸೈನ್ಸ್ ಅಮಾಂಗ್ ಸೆಕೆಂಡರಿ ಸ್ಕೂಲ್ ಸ್ಟೂಡೆಂಟ್ಸ್’ (ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಸಮಾಜ ವಿಜ್ಞಾನ ವಿಷಯದ ಆಸಕ್ತಿ ಮತ್ತು ಸಾಧನೆಯ ಮೇಲೆ ಅನುಭವಜನ್ಯ ಕಲಿಕೆಯ ಪರಿಣಾಮಗಳು) ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಈ ಗೌರವ ಸಂದಿದೆ.


ಇತ್ತೀಚೆಗೆ ನಡೆದ ಡಾ. ಮನಮೋಹನ್ ಸಿಂಗ್ ನಗರ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೀತಾಲಕ್ಷ್ಮಿ ಅವರಿಗೆ ಅಧಿಕೃತವಾಗಿ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಶುಭ ಹಾರೈಸಿದರು. ಶಿಕ್ಷಣ ಕ್ಷೇತ್ರದಲ್ಲಿನ ಇವರ ಈ ಸಾಧನೆಗೆ ಸಂಸ್ಥೆಯ ಮಂಡಳಿ, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.



Related posts

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ಬ್ರಹ್ಮಕಲಶೋತ್ಸವದಆಮಂತ್ರಣ ಪತ್ರಿಕೆ ಮುಂಬಯಿಯಲ್ಲಿ ಬಿಡುಗಡೆ

Mumbai News Desk

ಉಡುಪಿ : ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ, ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ – ಹರಿರಾಮ್ ಶಂಕರ್

Mumbai News Desk

ಆಗಸ್ಟ್ 24 : ಕುಲಾಲ ಸಂಘ ಮಂಗಳೂರಿನಲ್ಲಿ ನಿರ್ಮಿಸಿರುವ ಕುಲಾಲ ಭವನದ ಉದ್ಘಾಟನಾ ದಿನಾಂಕ ಪ್ರಕಟ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಜೀವಿತ್ ಬಿ ಕುಲಾಲ್  88.50 ಅಂಕ

Mumbai News Desk

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿ ಭೀಕರ ಅಪಘಾತದಿಂದ ಪಾರು: ಜುಹು ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

Mumbai News Desk

ಮೊದಲ ಮಳೆಗೆ ತತ್ತರಿಸಿದ ಮುಂಬಯಿ, ತಲ್ಲಣಗೊಂಡ ಜನತೆ,ಅಪಾರ ಹಾನಿ.

Mumbai News Desk