July 22, 2026
Mumbai News Kannada
ತುಳುನಾಡು

ಸಣ್ಣ ವಯಸ್ಸಿನಲ್ಲೇ ದೈವ ನರ್ತನದ ಮೂಲಕ ಕರಾವಳಿಯ ಗಮನ ಸೆಳೆದ ಅಜೆಕಾರಿನ ಬಾಲಕ ಸಮರ್ಥ್







ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಶಿರ್ಲಾಲಿನ ಪಂಗ್ಲಬೆಟ್ಟು ಶ್ರೀ ಬ್ರಹ್ಮಮುಗೇರಕಲ ಕ್ಷೇತ್ರದಲ್ಲಿ ನಡೆದ ತನ್ನಿಮಾನಿಗ ನೇಮೋತ್ಸವದಲ್ಲಿ 12 ವರ್ಷದ ಬಾಲಕನೊಬ್ಬ ದೈವ ನರ್ತನ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ. ಶಿರ್ಲಾಲು ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾದ ಸಮರ್ಥ್ ಎಂಬ ಈ ಬಾಲಕ, ಅತ್ಯಂತ ಸಣ್ಣ ವಯಸ್ಸಿನಲ್ಲೇ ದೈವದ ಗಗ್ಗರ ಕಟ್ಟಿ, ಸಂಪ್ರದಾಯಬದ್ಧವಾಗಿ ನೇಮೋತ್ಸವ ನಡೆಸಿಕೊಟ್ಟಿದ್ದಾನೆ. ಈತನ ದೈವ ನರ್ತನದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತುಳುನಾಡಿನ ದೈವಾರಾಧನೆಯ ಸಂಸ್ಕೃತಿಯನ್ನು ಎತ್ತಿಹಿಡಿಯುವಂತಿದೆ.
ಸಮರ್ಥ್ ತನ್ನ ಅಜ್ಜ ಮತ್ತು ತಂದೆ ಹರೀಶ್ ಅವರ ಮಾರ್ಗದರ್ಶನದಲ್ಲಿ ಈ ಕಲೆಯನ್ನು ಮೈಗೂಡಿಸಿಕೊಂಡಿದ್ದು, ವಂಶಪಾರಂಪರ್ಯವಾಗಿ ಬಂದಿರುವ ಈ ದೈವ ಸೇವೆಯನ್ನು ಶ್ರದ್ಧೆಯಿಂದ ಮುಂದುವರಿಸಿಕೊಂಡು ಹೋಗುತ್ತಿದ್ದಾನೆ. ತನ್ನಿಮಾನಿಗ ದೈವದ ಕೋಲ ಕಟ್ಟುವವರು ಅವಿವಾಹಿತರಾಗಿರಬೇಕು ಮತ್ತು ನಸುಕಿನ ವೇಳೆಯಲ್ಲಿ ಈ ಸೇವೆ ನಡೆಯಬೇಕು ಎಂಬ ಕಟ್ಟುನಿಟ್ಟಿನ ನಿಯಮಗಳಿದ್ದು, ಇವೆಲ್ಲವನ್ನೂ ಪಾಲಿಸಿ ಈ ಬಾಲಕ ಯಶಸ್ವಿಯಾಗಿ ದೈವ ನರ್ತನ ಮಾಡಿದ್ದಾನೆ. ಈ ಕೋಲದ ಸಮಯದಲ್ಲಿ ದೈವಕ್ಕೆ ಮದುವೆ ಮಾಡಿಸುವ ಅಪರೂಪದ ಸಂಪ್ರದಾಯವೂ ನಡೆಯುತ್ತದೆ. ಬಾಲಕನ ಈ ಭಕ್ತಿ ಮತ್ತು ಶ್ರದ್ಧೆಯನ್ನು ಕಂಡು ಸ್ಥಳೀಯರು ಹಾಗೂ ದೈವಾರಾಧಕರು ವ್ಯಾಪಕವಾಗಿ ಪ್ರಶಂಸಿಸುತ್ತಿದ್ದು, ಇದು ತುಳುನಾಡಿನ ಹೆಮ್ಮೆ ಎಂದು ಬಣ್ಣಿಸಿದ್ದಾರೆ.



Related posts

ದೊಡ್ಡಣಗುಡ್ಡೆ: ಕೋಟಿ ಲಲಿತಾ ಸಹಸ್ರನಾಮ ಪಾರಾಯಣ ಮಹಾಯಜ್ಞದ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆ

Mumbai News Desk

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನದ ಸಮಾರಂಭ;

Mumbai News Desk

ಮೂಲ್ಕಿ : ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ವರ್ಷದ ವ್ಯಕ್ತಿಯಾದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಸನ್ಮಾನ

Mumbai News Desk

ಕುಂಬಳೆ ಮುಂಡಪಳ್ಳ  ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಐತಿಹಾಸಿಕ ಕಲ್ಯಾಣೋತ್ಸವದಲ್ಲಿ, ಮಹಾದಾನಿಗೆ ಸನ್ಮಾನ, ಸಹಸ್ರಾರು ಭಕ್ತರು ಭಾಗಿ,

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

Mumbai News Desk