31.6 C
Mumbai
June 7, 2026
Mumbai News Kannada
ತುಳುನಾಡು

ಮುಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಭವ್ಯ ಸ್ವಾಗತ ಗೋಪುರ ನಿರ್ಮಾಣಕ್ಕೆ ಬಿಲ್ಲವ ಸಮಾಜದ ಸಿದ್ಧತೆ





ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳು ನಡೆಯುತ್ತಿದ್ದು, ಇದರ ಅಂಗವಾಗಿ ಪೂರ್ವ ದಿಕ್ಕಿನ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಭವ್ಯವಾದ ಸ್ವಾಗತ ಗೋಪುರವನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಕೋಟಿಗೂ ಅಧಿಕ ವೆಚ್ಚದ ಈ ಯೋಜನೆಯನ್ನು ಸಂಪೂರ್ಣವಾಗಿ ಬಿಲ್ಲವ ಸಮುದಾಯದ ವತಿಯಿಂದಲೇ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದ್ದು, ಈ ಕುರಿತು ಅವಕಾಶ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಗಿದೆ. ಬೆಂಗಳೂರಿನ ಉದ್ಯಮಿ ಶರತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ದುಗ್ಗಣ್ಣ ಸಾವಂತ ಅರಸರು ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ ಅವರಿಗೆ ಈ ಪ್ರಸ್ತಾವನೆಯನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಅರ್ಚಕ ಗೋಪಾಲಕೃಷ್ಣ ಭಟ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದ್ದು ಉಪಸ್ಥಿತರಿದ್ದರು. ಅಲ್ಲದೆ ಬಿರುವೆರ್ ಕುಡ್ಲ ಸಂಘಟನೆಯ ಗೌರವಾಧ್ಯಕ್ಷ ಕಿಶೋರ್ ಸಾಲ್ಯಾನ್, ಚಂದ್ರಶೇಖರ ಸುವರ್ಣ, ಅಭಿವೃದ್ಧಿ ಸಮಿತಿಯ ಚಂದ್ರಶೇಖರ ಕಾಸಪ್ಪಯ್ಯನವರ ಮನೆ, ಸುನಿಲ್ ಆಳ್ವ, ರಾಮಚಂದ್ರ ನಾಯಕ್ ಕೋಲಾಡು ಗುತ್ತು, ಭಾಸ್ಕರ್ ಸಾಲ್ಯಾನ್ ಹಳೆಯಂಗಡಿ ಹಾಗೂ ಸಂಜೀವ ದೇವಾಡಿಗ ಅವರು ಭಾಗವಹಿಸಿದ್ದರು. ಶರತ್ ಹೆಜಮಾಡಿ, ಮುಲ್ಕಿ ನಾಲ್ಕು ಪಟ್ನ ಮೊಗವೀರ ಸಭಾದ ಅಧ್ಯಕ್ಷ ಚಂದ್ರಕಾಂತ ಶ್ರೀಯಾನ್, ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್ ವರ್ಮ, ಕಾರ್ತಿಕ್ ಕೋಟ್ಯಾನ್ ಮತ್ತು ಗಿರೀಶ್ ಮಂಡನ್ ಸೇರಿದಂತೆ ಅನೇಕ ಗಣ್ಯರು ಈ ಮಹತ್ವದ ನಿರ್ಧಾರದ ವೇಳೆ ಜೊತೆಯಲ್ಲಿದ್ದರು.



Related posts

ಹೆಜಮಾಡಿ ಬಿರುವೆರ್ ಬ್ರದರ್ಸ್ ನ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಪೂಜಾರಿ ಆಯ್ಕೆ.

Mumbai News Desk

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ

Mumbai News Desk

ಧಾಖಲೆಯೊಂದಿಗೆ ತಿರುವೈಲು ಕಂಬಳ ಸಂಪನ್ನ: ಮುಂಬೈಯ ಪುರೋಹಿತರಾದ ಪ್ರವೀಣ್ ಭಟ್ ಅವರಿಗೆ ಸನ್ಮಾನ

Mumbai News Desk

ಮೂಲ್ಕಿ: ಪೂಂಜಾ ಚಾರಿಟೇಬಲ್ ಟ್ರಸ್ಟ್‌ನಿಂದ ಅಸಹಾಯಕರಿಗೆ ಚಿಕಿತ್ಸೆಗೆ ನೆರವು

Mumbai News Desk

ಸಾಲ್ಯಾನ್ ಮೂಲಸ್ಥಾನ ಕದಿಕೆ, ಹಳೆಯಂಗಡಿ – ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ.

Mumbai News Desk

*ಕಲಾ ಸಾಧನ ಸಂಸ್ಥೆ ಸಮರ್ಪಿಸಿದ ಸ್ವರದಾರ ಸಂಗೀತ ಹಬ್ಬ, ಸಂಗೀತ ಆರೋಗ್ಯಕ್ಕೆ ಔಷಧಿ ಇದ್ದಂತೆ;: ಐಕಳ ಹರೀಶ್ ಶೆಟ್ಟಿ*

Mumbai News Desk