July 23, 2026
Mumbai News Kannada
ಸುದ್ದಿ

ಆರ್ಥಿಕ ಕ್ರಾಂತಿಯ ಹರಿಕಾರ, ಸಮಾಜ ಸೇವಕ ವರದ ಉಳ್ಳಾಲ್ ಅಸ್ತಂಗತ : ಮುಂಬೈನಲ್ಲಿ ಇಂದು ಅಂತ್ಯಕ್ರಿಯೆ







ಮುಂಬೈ ಮಹಾನಗರದ ಪ್ರತಿಷ್ಠಿತ ಸಾಮಾಜಿಕ ಸಂಸ್ಥೆಯಾದ ಬಿಲ್ಲವರ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರು ಹಾಗೂ ಭಾರತ್ ಕೋ-ಆಪರೇಟಿವ್ ಬ್ಯಾಂಕಿನ ಸ್ಥಾಪಕ ಕಾರ್ಯಾಧ್ಯಕ್ಷರಾದ ವರದ ಉಳ್ಳಾಲ್ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಏಪ್ರಿಲ್ 6ರಂದು ನಿಧನರಾದರು. ಕಳೆದ 94 ವರ್ಷಗಳ ಸುದೀರ್ಘ ಇತಿಹಾಸವಿರುವ ಬಿಲ್ವವರ ಅಸೋಸಿಯೇಷನ್ ಅನ್ನು 1971-72 ಮತ್ತು 1974-78ರ ಅವಧಿಯಲ್ಲಿ ಅಧ್ಯಕ್ಷರಾಗಿ ಮುನ್ನಡೆಸಿದ್ದ ಇವರು, ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗಾಗಿ ಅಹೋರಾತ್ರಿ ಶ್ರಮಿಸಿದ ಧೀಮಂತ ನಾಯಕರಾಗಿದ್ದರು. ಬಿಲ್ಲವ ಸಮುದಾಯವು ಆರ್ಥಿಕವಾಗಿ ಹಿಂದುಳಿದಿದ್ದ ಕಾಲಘಟ್ಟದಲ್ಲಿ ಅವರಿಗೆ ನೆರವಾಗಲು ಸ್ವಂತ ಬ್ಯಾಂಕ್ ಒಂದರ ಅಗತ್ಯವನ್ನು ಮನಗಂಡ ಉಳ್ಳಾಲ್ ಅವರು, ರಿಸರ್ವ್ ಬ್ಯಾಂಕ್‌ನಿಂದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿ ‘ಭಾರತ್ ಕೋ-ಆಪರೇಟಿವ್ ಬ್ಯಾಂಕ್’ ಸ್ಥಾಪಿಸಿ ಅದರ ಮೊದಲ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರ ದೂರದೃಷ್ಟಿಯ ಫಲವಾಗಿ ಇಂದು ಈ ಬ್ಯಾಂಕ್ ಮಹತ್ತರವಾದ ಬೆಳವಣಿಗೆಯನ್ನು ಕಂಡಿದೆ.
ಮೃತರು ಪತ್ನಿ ಜಯಂತಿ ಜೆ. ಉಳ್ಳಾಲ್, ಪುತ್ರಿಯರಾದ ಸೋನಾಲಿ ಮತ್ತು ಮೊನಾಲಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಬಿಲ್ಲವ ಸಮಾಜದ ಮುಖಂಡರು, ಸಮಾಜದ ಗಣ್ಯರು, ಸಮಾಜ ಬಾಂದವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಮೃತರ ಅಂತಿಮ ಯಾತ್ರೆಯು ಏಪ್ರಿಲ್ 7ರ ಮಂಗಳವಾರ ಬೆಳಿಗ್ಗೆ 10:30ಕ್ಕೆ ಪ್ರಾರ್ಥನಾ ಸಮಾಜ ರಸ್ತೆಯ ಅವರ ಸ್ವಗೃಹ ‘ಜೈಶ್ರೀ’ಯಿಂದ ಹೊರಟು ವಿಲೆಪಾರ್ಲೆ ಪೂರ್ವದ ಸ್ಮಶಾನದವರೆಗೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಮುದಾಯದ ಏಳಿಗೆಗಾಗಿ ಅವರು ನೀಡಿದ ನಿಸ್ವಾರ್ಥ ಸೇವೆ ಹಾಗೂ ಮಾರ್ಗದರ್ಶನವು ಸದಾ ಸ್ಮರಣೀಯವಾಗಿದ್ದು, ಅವರ ಅಗಲಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.



Related posts

ಮುಂಬಯಿ: ನಾಪತ್ತೆಯಾಗಿದ್ದ ವಿರಾರ್ ನಿವಾಸಿ ನಿಶಾಂತ್ ಬಂಗೇರ ಪತ್ತೆ; ನಿಟ್ಟುಸಿರು ಬಿಟ್ಟ ಕುಟುಂಬ ಮತ್ತು ಸಮಾಜ ಬಾಂಧವರು

Mumbai News Desk

ದುಬೈನಲ್ಲಿ ತುಳು ಕನ್ನಡಿಗರಿಂದ  ರಕ್ತದಾನ.

Mumbai News Desk

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,   ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಶೆಟ್ಟಿ ಆಯ್ಕೆ.

Mumbai News Desk

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (03/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನವಿಶ್ವ ಸುದ್ದಿ :

Mumbai News Desk

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್; ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

Mumbai News Desk