April 23, 2026
Mumbai News Kannada
ಪ್ರಕಟಣೆ

ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ ಭಾಯಂದರ್ ಪೂರ್ವ : ಎ. 12ರಂದು ವಾರ್ಷಿಕ ಶ್ರೀ ಮಹಾದೇವಿ ಮಹಾಪೂಜೆ





ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ,ಭಾಯಂದರ್ ಇದರ ವತಿಯಿಂದ ವಾರ್ಷಿಕ ‘ಶ್ರೀ ಮಹಾದೇವಿ ಮಹಾಪೂಜೆ’ಯು ಏಪ್ರಿಲ್ 12, 2026ರ ಭಾನುವಾರದಂದು ಭಾಯಂದರ್ ಪೂರ್ವದ ಎಸ್.ವಿ. ರೋಡ್‌ನಲ್ಲಿರುವ ನವಘರ್ ಕ್ರಾಸ್ ಹತ್ತಿರದ ನ್ಯೂ ಕೃಷ್ಣ ಪ್ಯಾಲೇಸ್ ಕೊ. ಅಪ್. ಸೊಸೈಟಿಯ ತಳಮಹಡಿಯಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಜರುಗಲಿದೆ.

ಧರ್ಮ ಸೇವಕ ಹಾಗೂ ಪ್ರಧಾನ ಅರ್ಚಕರಾದ ಶೇಖರ್ ಎಸ್. ಶೆಟ್ಟಿ ಅವರ ಪವಿತ್ರ ಹಸ್ತಗಳಿಂದ ಈ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. ಅಂದು ಬೆಳಿಗ್ಗೆ 6:00 ಗಂಟೆಯಿಂದ ವನದುರ್ಗಾ ಹೋಮ ಪ್ರಾರಂಭವಾಗಲಿದ್ದು, 9:30ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.ಬಳಿಕ ದೇವಿ ದರ್ಶನ, ಮಹಾಪೂಜೆ ನಡೆದು,ಮಧ್ಯಾಹ್ನ 1:00ರಿಂದ 3:00 ಗಂಟೆಯವರೆಗೆ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ದಿವಂಗತ ಸುಂದರಿ ಶೆಟ್ಟಿ ಅವರ ಮಕ್ಕಳು, ಕುಟುಂಬಸ್ಥರು ಹಾಗೂ ಸೇವಾ ಸಮಿತಿಯ ಪದಾಧಿಕಾರಿಗಳು ಈ ಪುಣ್ಯ ಕಾರ್ಯದಲ್ಲಿ ಸರ್ವ ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಈ ಮೂಲಕ ಆಮಂತ್ರಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9867792911 ಅನ್ನು ಸಂಪರ್ಕಿಸಬಹುದಾಗಿದೆ.



Related posts

ಮಾ.7, ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk

ನ. 19 ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆ.

Mumbai News Desk

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ

Mumbai News Desk

ನ 26 : ಕರ್ನಾಟಕ ಸಂಘ ಪನ್ವೆಲ್. ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ : ಅಂಧೇರಿ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಜ. 31ಕ್ಕೆ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk

ಶ್ರೀ ಜಗದಂಬಾ ಮಂದಿರ, ಡೊಂಬಿವಲಿ (ಪ.): ಸೆ. 28ಕ್ಕೆ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಯಕ್ಷಗಾನ.

Mumbai News Desk