32 C
Mumbai
April 24, 2026
Mumbai News Kannada
ಸುದ್ದಿ

ಅನಿತಾ ಪಿ. ತಾಕೊಡೆಯವರಿಗೆ ಕರ್ನಾಟಕ ಲೇಖಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ





ಮುಂಬಯಿ: ಕರ್ನಾಟಕ ಲೇಖಕಿಯರ ಸಂಘವು ಬೆಂಗಳೂರಿನ ಕನ್ನಡ ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಯನ ಸಭಾಂಗಣದಲ್ಲಿ ಏಪ್ರಿಲ್ 9ರಂದು ಆಯೋಜಿಸಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಮುಂಬಯಿಯ ಕವಯಿತ್ರಿ ಹಾಗೂ ಲೇಖಕಿ ಅನಿತಾ ಪಿ. ತಾಕೊಡೆ ಅವರಿಗೆ ‘ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪಡೆದ ಕೃತಿ ‘ಮೇಣಕ್ಕಂಟಿದ ಬತ್ತಿ’, ಮುಂಬಯಿಯ ತಾಕೊಡೆ ಎಂಟರ್‌ಪ್ರೈಸಸ್ ಮೂಲಕ ಪ್ರಕಟವಾದ ಅವರ ಪ್ರಥಮ ಕೃತಿಯಾಗಿದೆ.

​ಅಪರಾಹ್ನ ಮೂರರಿಂದ ಸಂಜೆ ಆರರವರೆಗೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಮತ್ತು ಖ್ಯಾತ ಪತ್ರಕರ್ತ, ‘ಅವಧಿ ಡಾಟ್ ಕಾಮ್’ನ ಜಿ.ಎನ್. ಮೋಹನ್ ಅವರು ಅನಿತಾ ಪಿ. ತಾಕೊಡೆ ಸೇರಿದಂತೆ ಪುರಸ್ಕೃತ ಲೇಖಕಿಯರಿಗೆ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಮಾಡಿದರು. ವೇದಿಕೆಯಲ್ಲಿ ಕಲೇಸಂ ಅಧ್ಯಕ್ಷೆ ಡಾ. ಆರ್. ಸುನಂದಮ್ಮ, ಸಾಹಿತಿ ಡಾ. ಎನ್. ಗಾಯತ್ರಿ, ಸಮಾ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.



Related posts

ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ಷಷ್ಠಬ್ದಿ ಮಹೋತ್ಸವದ ನಿಮ್ಮಿತ ಧಾರ್ಮಿಕ ಕಾರ್ಯಕ್ರಮಗಳು ಆರಂಭ.

Mumbai News Desk

ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ ರಾಮಾಂಜನೇಯ.. ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Mumbai News Desk

ಕಾಪು ಮೊಗವೀರ ಮಹಾಸಭಾ, ಮುಂಬಯಿ ಇದರ 84 ನೇ ವಾರ್ಷಿಕ ಮಹಾಸಭೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ, ಸಮಾಜ ಸೇವಕ ಡಿ. ಆರ್. ರಾಜು ನಿಧನ,ಗಣ್ಯರ ಸಂತಾಪ

Mumbai News Desk

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದ) ಅಧ್ಯಕ್ಷ ವೈ. ಸುಕುಮಾರ್, ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk