July 23, 2026
Mumbai News Kannada
ಸುದ್ದಿ

ಅನಿತಾ ಪಿ. ತಾಕೊಡೆಯವರಿಗೆ ಕರ್ನಾಟಕ ಲೇಖಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ







ಮುಂಬಯಿ: ಕರ್ನಾಟಕ ಲೇಖಕಿಯರ ಸಂಘವು ಬೆಂಗಳೂರಿನ ಕನ್ನಡ ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಯನ ಸಭಾಂಗಣದಲ್ಲಿ ಏಪ್ರಿಲ್ 9ರಂದು ಆಯೋಜಿಸಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಮುಂಬಯಿಯ ಕವಯಿತ್ರಿ ಹಾಗೂ ಲೇಖಕಿ ಅನಿತಾ ಪಿ. ತಾಕೊಡೆ ಅವರಿಗೆ ‘ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪಡೆದ ಕೃತಿ ‘ಮೇಣಕ್ಕಂಟಿದ ಬತ್ತಿ’, ಮುಂಬಯಿಯ ತಾಕೊಡೆ ಎಂಟರ್‌ಪ್ರೈಸಸ್ ಮೂಲಕ ಪ್ರಕಟವಾದ ಅವರ ಪ್ರಥಮ ಕೃತಿಯಾಗಿದೆ.

​ಅಪರಾಹ್ನ ಮೂರರಿಂದ ಸಂಜೆ ಆರರವರೆಗೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಮತ್ತು ಖ್ಯಾತ ಪತ್ರಕರ್ತ, ‘ಅವಧಿ ಡಾಟ್ ಕಾಮ್’ನ ಜಿ.ಎನ್. ಮೋಹನ್ ಅವರು ಅನಿತಾ ಪಿ. ತಾಕೊಡೆ ಸೇರಿದಂತೆ ಪುರಸ್ಕೃತ ಲೇಖಕಿಯರಿಗೆ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಮಾಡಿದರು. ವೇದಿಕೆಯಲ್ಲಿ ಕಲೇಸಂ ಅಧ್ಯಕ್ಷೆ ಡಾ. ಆರ್. ಸುನಂದಮ್ಮ, ಸಾಹಿತಿ ಡಾ. ಎನ್. ಗಾಯತ್ರಿ, ಸಮಾ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.



Related posts

ಗೊರೆಗಾಂವ್ ಶ್ರೀ ಶಾಂತಾದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಧಾರ್ಮಿಕ ಸಭೆ

Mumbai News Desk

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

Mumbai News Desk

ಮೂಲ್ಕಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾದಸ್ವರ ವಾದಕ ನಾಗೇಶ್ ಬಪ್ಪನಾಡು ಅವರಿಗೆ ಆದ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ್ ಸ್ವಾಮೀಜಿ ಅವರಿಂದ ಗೌರವ.

Mumbai News Desk

ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಪತ್ತೆಯಾದ ಭಾಗ್ಯಶ್ರೀ ಯ ಪರಿವಾರ ಹುಡುಕ ಬಲ್ಲಿರಾ ?

Mumbai News Desk

ಸಂಗೀತ ಲೋಕದ ಧ್ರುವತಾರೆ ಆಶಾ ಭೋಂಸ್ಲೆ ಇನ್ನಿಲ್ಲ: ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ

Mumbai News Desk

ಮೊಗವೀರ ಪ್ರೀಮಿಯರ್ ಲೀಗ್ (MPL 2026): ಹರಾಜು ಪ್ರಕ್ರಿಯೆ ಯಶಸ್ವಿ; ₹4 ಲಕ್ಷಕ್ಕೆ ಕುಂದಾಪುರ ಲೆಜೆಂಡ್ಸ್ ಮುಂಚೂಣಿಯಲ್ಲಿ

Mumbai News Desk