September 6, 2026
Mumbai News Kannada
ಪ್ರಕಟಣೆ

ಎ. 14ರಂದು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ ಇಲ್ಲಿ ಶ್ರೀ ಶನಿ ಗ್ರಂಥ ಪಾರಾಯಣ, ಶ್ರೀ ಸತ್ಯನಾರಾಯಣ ಮಹಾಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು.





=============
ಮುಂಬಯಿ ಥಾಣೆ ಪಶ್ಚಿಮ ವೀರ್ ಸಾವರ್ಕರ್ ನಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏಪ್ರಿಲ್ 14ರ ಮಂಗಳವಾರದಂದು ಸಂಕ್ರಮಣ ಪೂಜೆ, ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಸೇವೆ,ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿ ಗ್ರಂಥ ಪಾರಾಯಣ (ಯಕ್ಷಗಾನ ತಾಳ ಮದ್ದಳೆ ರೂಪದಲ್ಲಿ) ಜರಗಲಿದೆ.
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಸ್ಥಾಪಕ, ಮುಖ್ಯಸ್ಥ ಹಾಗೂ ಜ್ಯೋತಿಷಿ ಶಿವಪ್ರಸಾದ್ ಪೂಜಾರಿ ಪುತ್ತೂರು ಇವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ, ಜಗದೀಶ್ ಎಸ್. ತಂತ್ರಿ, ರಘುಚಂದ್ರ ಆಚಾರ್ಯ ಕಾರಿಂಜ, ರಾಧಾಕೃಷ್ಣ ಗುರುಸ್ವಾಮಿ ಇವರುಗಳ ಶುಭಾಶೀರ್ವಾದ ಹಾಗೂ ಸಹಕಾರದೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ. ಕಾರ್ಯಕ್ರಮದಂಗವಾಗಿ
ಬೆಳಿಗ್ಗೆ ಗಂ 8 ಕ್ಕೆ ಗಣ ಹೋಮ, ಗಂ 9.30 ಕ್ಕೆ ಶ್ರೀ ಸತ್ಯ ನಾರಾಯಣ ಮಹಾ ಪೂಜೆ,
ಗಂ 11:30 ಕ್ಕೆ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಸೇವೆ, ಪಂಚಕಜ್ಜಾಯ ಸೇವೆ, ಮಧ್ಯಾಹ್ನ ಗಂ
12:30 ಕ್ಕೆ ಮಹಾ ಮಂಗಳಾರತಿ, ಅನ್ನದಾನ ಸೇವೆ ನಡೆಯಲಿದೆ. ಮಧ್ಯಾಹ್ನ ಗಂ 1.ರಿಂದ ಸಾಯಂ ಗಂ 07:30ರವರೆಗೆ ಸದಾನಂದ ಅಮೀನ್ ಇವರ ಸಹಕಾರದೊಂದಿಗೆ ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ ಇವರಿಂದ ಶ್ರೀ ಶನಿ ಗ್ರಂಥ ಪಾರಾಯಣ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಪ್ರದರ್ಶನಗಳ್ಳಲಿದೆ. ಆ ಬಳಿಕ ಮಹಾ ಮಂಗಳಾರತಿ ಅನ್ನಸಂತರ್ಪಣೆ ಜರಗಲಿದೆ. ಈ ಪ್ರಯುಕ್ತ
ಭಕ್ತಭಿಮಾನಿಗಳೆಲ್ಲರೂ ಸಕುಟುಂಬ ಸಮೇತರಾಗಿ ಆಗಮಿಸಿ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಚಾಮುಂಡೇಶ್ವರಿ ಹಾಗೂ ಪರಿವಾರ ದೈವ ದೇವರ ಕೃಪೆಗೆ ಪಾತ್ರರಾಗಬೇಕಾಗಿ
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ ಮುಖ್ಯಸ್ಥರಾದ ಜ್ಯೋತಿಷಿ
ಶಿವಪ್ರಸಾದ್ ಪೂಜಾರಿ ಪುತ್ತೂರು, ಸೇರಿದಂತೆ ಕ್ಷೇತ್ರದ ಭಜನಾ ಮಂಡಳಿ, ಮಹಿಳಾ ವಿಭಾಗ, ಯುವ ವಿಭಾಗ, ಹಾಗೂ ಸರ್ವ ಸದಸ್ಯರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.



Related posts

ಏ. 12 ರಿಂದ 21 ರ ವರಗೆ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ 62 ನೇ ವಾರ್ಷಿಕ ಮಹೋತ್ಸವ

Mumbai News Desk

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk

ಅಗಸ್ಟ್.23 : ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ಹಾಗೂ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಸರಣಿ ತಾಳಮದ್ದಲೆ 13ನೇ ಪ್ರಸ್ತುತಿ , ಕಲಾವಿದರಿಗೆ ಸನ್ಮಾನ

Mumbai News Desk

ನ. 30 ರಂದು ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ವಠಾರದಲ್ಲಿ “ಕುಲದೈವೋ ಬ್ರಹ್ಮ” ಯಕ್ಷಗಾನ ಪ್ರದರ್ಶನ

Mumbai News Desk

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್: ಜುಲೈ 26 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ನ. 3 ಮತ್ತು 4 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ

Mumbai News Desk