30.9 C
Mumbai
June 8, 2026
Mumbai News Kannada
ಸುದ್ದಿ

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ಚಿಕ್ಕಬಳ್ಳಾಪುರದ ಎಂಟು ಭಕ್ತರ ದುರ್ಮರಣ





ರಾಯಚೂರು/ಮಂತ್ರಾಲಯ: ಶ್ರೀ ಕ್ಷೇತ್ರ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಪುನೀತರಾಗಿ ಮರಳುತ್ತಿದ್ದ ಭಕ್ತರ ಪಾಲಿಗೆ ವಿಧಿ ಕ್ರೂರವಾಗಿ ಅಟ್ಟಹಾಸ ಮೆರೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ಆಗಮಿಸಿದ್ದ ಭಕ್ತರು, ಗುರು ಸಾರ್ವಭೌಮರ ದರ್ಶನ ಮುಗಿಸಿ ತಮ್ಮ ಊರಿಗೆ ಬೊಲೆರೋ ವಾಹನದಲ್ಲಿ ಮರಳುತ್ತಿದ್ದರು. ಈ ವೇಳೆ ಕಲ್ಲುದೇವರಕುಂಟ ಗ್ರಾಮದ ಬಳಿ ವೇಗವಾಗಿ ಬಂದ ಸಿಮೆಂಟ್ ಹಾಗೂ ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್, ಭಕ್ತರಿದ್ದ ಬೊಲೆರೋ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೊಲೆರೋ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ವಾಹನದೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಹರಸಾಹಸ ಪಡಬೇಕಾಯಿತು. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ ಕರ್ನೂಲ್ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.



Related posts

ಬೆಂಗಳೂರು : ದಕ್ಷಿಣ ಕನ್ನಡಿಗರ ಸಂಘದ ಸಂಭ್ರಮಾಚರಣೆ, ಸಾಧಕರಿಗೆ ಪ್ರಶಸ್ತಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ,

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ, ಸಮಾಜ ಸೇವಕ ಡಿ. ಆರ್. ರಾಜು ನಿಧನ,ಗಣ್ಯರ ಸಂತಾಪ

Mumbai News Desk

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಖಂಡರಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ: ಕೈಗಾರಿಕೀಕರಣದ ಬಗ್ಗೆ ಸುದೀರ್ಘ ಚರ್ಚೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಹಾಗೂ ಮುತ್ತೂಟ್ ಫೈನಾನ್ಸ್ ಲಿಮಿಟೆಡ್ ಇದರ ಜಂಟಿ ಆಶ್ರಯದಲ್ಲಿ ಸ್ಥನ್ಯಪಾನ ಶಿಬಿರಕ್ಕೆ ಚಾಲನೆ.

Mumbai News Desk

*ವಿಜಯ ಕಾಲೇಜು ಮುಲ್ಕಿ*,*ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ*-ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಭಂಡಾರಿ ಆಯ್ಕೆ.

Mumbai News Desk

ಮುಲುಂಡ್‌ :    ಲ!  ಜಯರಾಮ್ ಮೂಲ್ಯ ನಿಧನ

Mumbai News Desk