.
ಉಡುಪಿ ತಾಲೂಕು, ಹೆಜಮಾಡಿ ಕೋಡಿಯ ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರದಲ್ಲಿ 108ನೇ ವಾರ್ಷಿಕ ಮಂಗಲೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಏಪ್ರಿಲ್ 21, 2026ರ ಮಂಗಳವಾರದಂದು ಬಹಳ ವಿಜೃಂಭಣೆಯಿಂದ ಜರುಗಲಿದೆ. ಅಂದು ಬೆಳಿಗ್ಗೆ 8:00 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ನವಕ ಪ್ರಧಾನ ಕಲಶ ಹೋಮ ಮತ್ತು ಪುಣ್ಯಾಹವಾಚನದೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಳ್ಳಲಿವೆ. 9:30ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಲಿದ್ದು, ಮಧ್ಯಾಹ್ನ 12:00 ಗಂಟೆಗೆ ಮಹಾಪೂಜೆ ಹಾಗೂ ಪಲ್ಲಪೂಜೆ ನಡೆಯಲಿದೆ. ಮಧ್ಯಾಹ್ನ 12:30ರಿಂದ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ 1:00 ಗಂಟೆಗೆ ದೀಪ ಪ್ರಜ್ವಲನೆ( ಜೋಧ್ಪುರದ ಆರ್ಮಿ ಸಿಗ್ನಲ್ ಇಂಟೆಲಿಜೆನ್ಸ್ನ ಜೂನಿಯರ್ ಕಮಿಷನ್ಡ್ ಆಫೀಸರ್ ಚಂದ್ರಹಾಸ ಸಾಲಿಯಾನ್, ಮುಲ್ಕಿ ನಗರ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷ ಸತೀಶ್ ಅಂಚನ್, ಅವರಿಂದ )
ಬಳಿಕ ಸಂಕೀರ್ತನೆ ಆರಂಭಗೊಳ್ಳಲಿದೆ. ರಾತ್ರಿ 8:30ಕ್ಕೆ ಭಜನಾ ಮಂಗಳೋತ್ಸವದೊಂದಿಗೆ ಪ್ರಸಾದ ವಿತರಣೆ ನಡೆಯಲಿದ್ದು, ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀ ವಿಠೋಬ ಗೋಪಾಲಕೃಷ್ಣ ಭಜನಾ ಮಂದಿರ, ಶ್ರೀ ವಿಠೋಬ ಗೋಪಾಲಕೃಷ್ಣ ಮಹಿಳಾ ಮಂಡಳಿ ಹಾಗೂ ಶ್ರೀ ವಿಠೋಬ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರು,ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.





