30.6 C
Mumbai
April 23, 2026
Mumbai News Kannada
ಪ್ರಕಟಣೆ

ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರ ಹೆಜಮಾಡಿ : ಎ. 21(ಇಂದು) ರಂದು ವಾರ್ಷಿಕ ಮಂಗಳೋತ್ಸವ, ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ





.

ಉಡುಪಿ ತಾಲೂಕು, ಹೆಜಮಾಡಿ ಕೋಡಿಯ ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರದಲ್ಲಿ 108ನೇ ವಾರ್ಷಿಕ ಮಂಗಲೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಏಪ್ರಿಲ್ 21, 2026ರ ಮಂಗಳವಾರದಂದು ಬಹಳ ವಿಜೃಂಭಣೆಯಿಂದ ಜರುಗಲಿದೆ. ಅಂದು ಬೆಳಿಗ್ಗೆ 8:00 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ನವಕ ಪ್ರಧಾನ ಕಲಶ ಹೋಮ ಮತ್ತು ಪುಣ್ಯಾಹವಾಚನದೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಳ್ಳಲಿವೆ. 9:30ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಲಿದ್ದು, ಮಧ್ಯಾಹ್ನ 12:00 ಗಂಟೆಗೆ ಮಹಾಪೂಜೆ ಹಾಗೂ ಪಲ್ಲಪೂಜೆ ನಡೆಯಲಿದೆ. ಮಧ್ಯಾಹ್ನ 12:30ರಿಂದ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ 1:00 ಗಂಟೆಗೆ ದೀಪ ಪ್ರಜ್ವಲನೆ( ಜೋಧ್‌ಪುರದ ಆರ್ಮಿ ಸಿಗ್ನಲ್ ಇಂಟೆಲಿಜೆನ್ಸ್‌ನ ಜೂನಿಯರ್ ಕಮಿಷನ್ಡ್ ಆಫೀಸರ್ ಚಂದ್ರಹಾಸ ಸಾಲಿಯಾನ್, ಮುಲ್ಕಿ ನಗರ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷ ಸತೀಶ್ ಅಂಚನ್, ಅವರಿಂದ )
ಬಳಿಕ ಸಂಕೀರ್ತನೆ ಆರಂಭಗೊಳ್ಳಲಿದೆ. ರಾತ್ರಿ 8:30ಕ್ಕೆ ಭಜನಾ ಮಂಗಳೋತ್ಸವದೊಂದಿಗೆ ಪ್ರಸಾದ ವಿತರಣೆ ನಡೆಯಲಿದ್ದು, ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀ ವಿಠೋಬ ಗೋಪಾಲಕೃಷ್ಣ ಭಜನಾ ಮಂದಿರ, ಶ್ರೀ ವಿಠೋಬ ಗೋಪಾಲಕೃಷ್ಣ ಮಹಿಳಾ ಮಂಡಳಿ ಹಾಗೂ ಶ್ರೀ ವಿಠೋಬ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರು,ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಇಂದು :ನ್ಯೂ ಪನ್ವೇಲ್ ನ ಶ್ರೀ ಜೈ ಅಂಬೇ ಮಾತಾ ಮಂದಿರ ದ ಲ್ಲಿ ಶ್ರೀ ರಾಮ ಮಹೋತ್ಸವ ಕಾರ್ಯಕ್ರಮ.

Mumbai News Desk

ನ. 26, 27 ಕಾಪುವಿನ ಮೂರೂ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಜಾರ್ದೆ ಮಾರಿಪೂಜೆ

Mumbai News Desk

ಎ. 7 ರಂದು ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಂಭ್ರಮ, ಸ್ಮರಣ ಸಂಚಿಕೆ ಬಿಡುಗಡೆ, ನೃತ್ಯ ಸ್ಪರ್ಧೆ

Mumbai News Desk

ಮುಂಬಯಿ ಕನ್ನಡ ಸಂಘ: ಡಿ. 20ರಂದು ಎರಡು ದತ್ತಿ ಉಪನ್ಯಾಸಗಳ ಕಾರ್ಯಕ್ರಮ

Mumbai News Desk

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಸೆ 15.ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ಶರನ್ನವರಾತ್ರಿ ಮಹೋತ್ಸವ ಆಚರಣೆ ನಿಮ್ಮಿತ್ತ ವಿಶೇಷ ಮಹಾಸಭೆ

Mumbai News Desk